ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಮಾಜಿ ವಿಜ್ಞಾನಿ ನಂಬಿ ನಾರಾಯಣನ್ ಅವರು, ಶುಕ್ರವಾರದ ಚಂದ್ರಯಾನ-3 ಉಡಾವಣೆಯನ್ನು ಗೇಮ್ ಚೇಂಜರ್ ಎಂದು ಬಣ್ಣಿಸಿದ್ದಾರೆ. ಇದು ಇಡೀ ಜಗತ್ತಿಗೆ ಸ್ಫೂರ್ತಿಯಾಗಲಿದೆ ಎಂದು ಅವರು ಹೇಳಿದ್ದಾರೆ.
ಚಂದ್ರನ ಪರಿಶೋಧನೆಯ 3ನೇ ಕಾರ್ಯಾಚರಣೆಯು ಚಂದ್ರಯಾನ -2ರಲ್ಲಿ ಆದ ಸಮಸ್ಯೆಗಳನ್ನು ತಪ್ಪಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದ್ದಾರೆ.
‘ಚಂದ್ರಯಾನ-3 ಭಾರತಕ್ಕೆ ಖಂಡಿತವಾಗಿ ಗೇಮ್ ಚೇಂಜರ್ ಆಗಲಿದೆ ಮತ್ತು ಅದು ಯಶಸ್ವಿಯಾಗಲಿದೆ ಎಂದು ನಾನು ಭಾವಿಸುತ್ತೇನೆ. ಭಾರತ ಇಡೀ ವಿಶ್ವಕ್ಕೆ ಸ್ಪೂರ್ತಿಯಾಗಲಿದೆ. ಉಡಾವಣೆಗಾಗಿ ಕಾಯೋಣ ಮತ್ತು ಒಳ್ಳೆಯದಾಗಲಿ ಎಂದು ಪ್ರಾರ್ಥಿಸೋಣ’ಎಂದು ಅವರು ಹೇಳಿದ್ದಾರೆ.