<p><strong>ನವದೆಹಲಿ</strong>: ದೆಹಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಮಧ್ಯೆಯೇ, ದೊಡ್ಡ ಸಂಖ್ಯೆಯ ಮತದಾರರ ಹೆಸರನ್ನು ಮತದಾರರ ಪಟ್ಟಿ ಯಿಂದ ತೆಗೆದುಹಾಕಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಶುಕ್ರವಾರ ಆರೋಪಿಸಿದ್ದಾರೆ.</p><p>ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ಶಾಹದರಾ, ಜನಕಪುರಿ, ಲಕ್ಷ್ಮಿ ನಗರ ಮತ್ತು ಇತರ ಕ್ಷೇತ್ರಗಳ ಸಾವಿರಾರು ಮತದಾರರ ಹೆಸರನ್ನು ಅಳಿಸಿಹಾಕುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ಅರ್ಜಿ ಸಲ್ಲಿಸಿದೆ’ ಎಂದು ಹೇಳಿದರು.</p><p>‘ಶಾಹದರಾದಲ್ಲಿ 11,018 ಮತದಾರರ ಹೆಸರನ್ನು ಅಳಿಸಿಹಾಕಲು ಅರ್ಜಿ ಸಲ್ಲಿಸಿದೆ. ನಾವು ಈ ಪೈಕಿ 500 ಹೆಸರುಗಳನ್ನು ಪರಿಶೀಲಿಸಿದಾಗ ಶೇ 75ರಷ್ಟು ಜನರು ಇದೇ ಕ್ಷೇತ್ರದಲ್ಲಿ ಈಗಲೂ ನೆಲಸಿರುವುದು ಗೊತ್ತಾಗಿದೆ. ಆದರೆ ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಸಾಧ್ಯತೆ ಇದೆ’ ಎಂದು ಅವರು ಹೇಳಿದರು.</p><p>‘ಕಳೆದ ಚುನಾವಣೆಯಲ್ಲಿ ಶಾಹದರಾ ಕ್ಷೇತ್ರದಲ್ಲಿ 5,000 ಮತಗಳ ಅಂತರದಲ್ಲಿ ಎಎಪಿ ಗೆಲುವು ಸಾಧಿಸಿತ್ತು. ಈ ಬಾರಿ 11,000 ಮತದಾರರ ಹೆಸರನ್ನು ಅಳಿಸಿಹಾಕಲಾಗಿದೆ. ಈ ಪೈಕಿ ಬಹುತೇಕ ಮತದಾರರು ಎಎಪಿ ಬೆಂಬಲಿಗರು’ ಎಂದರು.<br></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಮಧ್ಯೆಯೇ, ದೊಡ್ಡ ಸಂಖ್ಯೆಯ ಮತದಾರರ ಹೆಸರನ್ನು ಮತದಾರರ ಪಟ್ಟಿ ಯಿಂದ ತೆಗೆದುಹಾಕಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಶುಕ್ರವಾರ ಆರೋಪಿಸಿದ್ದಾರೆ.</p><p>ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ಶಾಹದರಾ, ಜನಕಪುರಿ, ಲಕ್ಷ್ಮಿ ನಗರ ಮತ್ತು ಇತರ ಕ್ಷೇತ್ರಗಳ ಸಾವಿರಾರು ಮತದಾರರ ಹೆಸರನ್ನು ಅಳಿಸಿಹಾಕುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ಅರ್ಜಿ ಸಲ್ಲಿಸಿದೆ’ ಎಂದು ಹೇಳಿದರು.</p><p>‘ಶಾಹದರಾದಲ್ಲಿ 11,018 ಮತದಾರರ ಹೆಸರನ್ನು ಅಳಿಸಿಹಾಕಲು ಅರ್ಜಿ ಸಲ್ಲಿಸಿದೆ. ನಾವು ಈ ಪೈಕಿ 500 ಹೆಸರುಗಳನ್ನು ಪರಿಶೀಲಿಸಿದಾಗ ಶೇ 75ರಷ್ಟು ಜನರು ಇದೇ ಕ್ಷೇತ್ರದಲ್ಲಿ ಈಗಲೂ ನೆಲಸಿರುವುದು ಗೊತ್ತಾಗಿದೆ. ಆದರೆ ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಸಾಧ್ಯತೆ ಇದೆ’ ಎಂದು ಅವರು ಹೇಳಿದರು.</p><p>‘ಕಳೆದ ಚುನಾವಣೆಯಲ್ಲಿ ಶಾಹದರಾ ಕ್ಷೇತ್ರದಲ್ಲಿ 5,000 ಮತಗಳ ಅಂತರದಲ್ಲಿ ಎಎಪಿ ಗೆಲುವು ಸಾಧಿಸಿತ್ತು. ಈ ಬಾರಿ 11,000 ಮತದಾರರ ಹೆಸರನ್ನು ಅಳಿಸಿಹಾಕಲಾಗಿದೆ. ಈ ಪೈಕಿ ಬಹುತೇಕ ಮತದಾರರು ಎಎಪಿ ಬೆಂಬಲಿಗರು’ ಎಂದರು.<br></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>