<p><strong>ಹೈದರಾಬಾದ್:</strong> ತೆಲುಗು ಸ್ಟಾರ್ ನಟ ನಂದಮೂರಿ ಬಾಲಕೃಷ್ಣ ಹಾಗೂ ಸಚಿವ ನಾರಾ ಲೋಕೇಶ್ ಅವರು ಸರ್ಕಾರದ 'ಸೂಪರ್ ಸಿಕ್ಸ್... ಸೂಪರ್ ಹಿಟ್' ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. </p><p>ಸ್ಥಳೀಯ ಸಂಸ್ಥೆಗಳ ಜೊತೆಗೆ ಆಂಧ್ರ ಸರ್ಕಾರ ಗುರುವಾರ 'ಸೂಪರ್ ಸಿಕ್ಸ್... ಸೂಪರ್ ಹಿಟ್‘ ಎಂಬ ಕಾರ್ಯಕ್ರಮವನ್ನು ಆಯೋಜನೆ ಮಾಡಿದೆ. ಇದರಲ್ಲಿ ಸ್ಥಳೀಯ ಬಡವರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಘೋಷಣೆ ಮಾಡಲಾಗಿದೆ.</p><p>ಹಿಂದೂಪುರ ಕ್ಷೇತ್ರದ ಶಾಸಕರಾಗಿರುವ ಬಾಲಕೃಷ್ಣ ಹಾಗೂ ಸಿಎಂ ಪುತ್ರ ಸಚಿವ ನಾರಾ ಲೋಕೇಶ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಆದರೆ ಅವರು ಗೈರಾಗಿರುವುದಕ್ಕೆ ಸಚಿವ ಪಯ್ಯವುಲ ಕೇಶವ ಅವರು ಸ್ಪಷ್ಟನೆ ನೀಡಿದ್ದಾರೆ.</p><p>ಬಾಲಕೃಷ್ಣ ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ ಎಂದಿದ್ದಾರೆ. ಹಾಗೇ ಸಚಿವ ನಾರಾ ಲೋಕೇಶ್ ಅವರು ನೇಪಾಳದಲ್ಲಿರುವ ಆಂಧ್ರದ ಜನರನ್ನು ರಾಜ್ಯಕ್ಕೆ ಕರೆತರುವ ಕೆಲಸದಲ್ಲಿ ಬ್ಯುಸಿಯಾಗಿರುವುದರಿಂದ ಅವರೂ ಕೂಡ ಬಂದಿಲ್ಲ ಎಂದು ಪಯ್ಯವುಲ ಕೇಶವ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ತೆಲುಗು ಸ್ಟಾರ್ ನಟ ನಂದಮೂರಿ ಬಾಲಕೃಷ್ಣ ಹಾಗೂ ಸಚಿವ ನಾರಾ ಲೋಕೇಶ್ ಅವರು ಸರ್ಕಾರದ 'ಸೂಪರ್ ಸಿಕ್ಸ್... ಸೂಪರ್ ಹಿಟ್' ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. </p><p>ಸ್ಥಳೀಯ ಸಂಸ್ಥೆಗಳ ಜೊತೆಗೆ ಆಂಧ್ರ ಸರ್ಕಾರ ಗುರುವಾರ 'ಸೂಪರ್ ಸಿಕ್ಸ್... ಸೂಪರ್ ಹಿಟ್‘ ಎಂಬ ಕಾರ್ಯಕ್ರಮವನ್ನು ಆಯೋಜನೆ ಮಾಡಿದೆ. ಇದರಲ್ಲಿ ಸ್ಥಳೀಯ ಬಡವರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಘೋಷಣೆ ಮಾಡಲಾಗಿದೆ.</p><p>ಹಿಂದೂಪುರ ಕ್ಷೇತ್ರದ ಶಾಸಕರಾಗಿರುವ ಬಾಲಕೃಷ್ಣ ಹಾಗೂ ಸಿಎಂ ಪುತ್ರ ಸಚಿವ ನಾರಾ ಲೋಕೇಶ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಆದರೆ ಅವರು ಗೈರಾಗಿರುವುದಕ್ಕೆ ಸಚಿವ ಪಯ್ಯವುಲ ಕೇಶವ ಅವರು ಸ್ಪಷ್ಟನೆ ನೀಡಿದ್ದಾರೆ.</p><p>ಬಾಲಕೃಷ್ಣ ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ ಎಂದಿದ್ದಾರೆ. ಹಾಗೇ ಸಚಿವ ನಾರಾ ಲೋಕೇಶ್ ಅವರು ನೇಪಾಳದಲ್ಲಿರುವ ಆಂಧ್ರದ ಜನರನ್ನು ರಾಜ್ಯಕ್ಕೆ ಕರೆತರುವ ಕೆಲಸದಲ್ಲಿ ಬ್ಯುಸಿಯಾಗಿರುವುದರಿಂದ ಅವರೂ ಕೂಡ ಬಂದಿಲ್ಲ ಎಂದು ಪಯ್ಯವುಲ ಕೇಶವ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>