ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಧ್ವನಿ ಎತ್ತಲು ನಟಿ ನಂದಿತಾ ದಾಸ್‌ ಸಲಹೆ

Last Updated 23 ಜನವರಿ 2020, 11:33 IST
ಅಕ್ಷರ ಗಾತ್ರ

ಜೈಪುರ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟವನ್ನು ಬೆಂಬಲಿಸಿರುವ ನಟಿ ನಂದಿತಾ ದಾಸ್‌, ಕಾಯ್ದೆಗೆ ತೀವ್ರ ಪ್ರತಿರೋಧ ತೋರುವಂತಹ ‘ಶಹೀನ್‌ ಬಾಗ್‌‘ ಸ್ವರೂಪದ ಪ್ರದೇಶಗಳು ದೇಶದ ಎಲ್ಲ ಕಡೆಗಳಲ್ಲಿ ಸೃಷ್ಟಿಯಾಗಲಿವೆ ಎಂದು ಭವಿಷ್ಯ ನುಡಿದರು.

ಜೈಪುರ ಸಾಹಿತ್ಯ ಸಮ್ಮೇಳನದ ಗೋಷ್ಠಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು, ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು. ‘ನಾಲ್ಕು ತಲೆಮಾರುಗಳಿಂದಲೂ ಇಲ್ಲಿ ನೆಲೆಸಿರುವ ಜನರಿಗೆ ತಾವು ಭಾರತೀಯರು ಎಂಬುದನ್ನು ನಿರೂಪಿಸುವಂತೆ ಸರ್ಕಾರ ಕೇಳುತ್ತಿದೆ. ಈ ಧೋರಣೆ ವಿರುದ್ಧ ಪ್ರತಿಯೊಬ್ಬರೂ ಧ್ವನಿ ಎತ್ತಬೇಕು’ ಎಂದು ಪ್ರತಿಪಾದಿಸಿದರು.

‘ಆರ್ಥಿಕ ಹಿಂಜರಿತ, ನಿರುದ್ಯೋಗ ಹೆಚ್ಚಳ ಹಾಗೂ ಧರ್ಮದ ಆಧಾರದ ಮೇಲೆ ಜನರನ್ನು ಒಡೆದಾಳುವ ನೀತಿಯಿಂದಾಗಿ ಭಾರತ ಈಗ ಜಗತ್ತಿನೆಲ್ಲಡೆ ಸುದ್ದಿಯಲ್ಲಿದೆ’ ಎಂದು ಅಭಿಪ್ರಾಯಪಟ್ಟರು.

‘ನಮ್ಮ ಸಂವಿಧಾನ ಎಲ್ಲರಿಗೂ ಸಮಾನತೆ ಕಲ್ಪಿಸಿದೆ. ಧರ್ಮ, ಲಿಂಗ ಆಧಾರದ ಪ್ರತ್ಯೇಕತೆಯನ್ನು ನಾವು ಬಯಸುವುದಿಲ್ಲ’ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಜೈಪುರ ಸಾಹಿತ್ಯ ಸಮ್ಮೇಳನದ ಒಂದು ನೋಟ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT