<p class="title"><strong>ಅಮರಾವತಿ</strong>: ವೈಎಸ್ಆರ್ ಕಾಂಗ್ರೆಸ್ನಿಂದ ಅಧಿಕಾರವನ್ನು ಮರಳಿ ಪಡೆಯುವ ಸಲುವಾಗಿ ಆಂಧ್ರದ ಶಾಸಕ ಹಾಗೂ ತೆಲುಗು ದೇಶಂ ಪಕ್ಷದ (ಟಿಡಿಪಿ) ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರು 2023ರ ಜನವರಿ 27ರಿಂದ 4 ಸಾವಿರ ಕಿ.ಮೀ ದೂರದ ‘ಪಾದಯಾತ್ರೆ’ ಆರಂಭಿಸಲಿದ್ದಾರೆ.</p>.<p class="bodytext">ಟಿಡಿಪಿ ವರಿಷ್ಠ ಹಾಗೂ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ರಾಜಕೀಯ ವಾರಸುದಾರರಾಗಿರುವ ನಾರಾ ಲೋಕೇಶ್ ಅವರ ಕಾರ್ಯತಂತ್ರದ ನಡೆ ಬಗ್ಗೆ ಕೆಲ ದಿನಗಳಿಂದ ಚರ್ಚೆಯಾಗುತ್ತಿದ್ದು, ಇದೀಗ ಅವರು ತಮ್ಮ ಪಾದಯಾತ್ರೆ ಯೋಜನೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ.</p>.<p>‘ಆಂಧ್ರದಾದ್ಯಂತ ಜ. 27ರಿಂದ ನಾನು ಸುಮಾರು 400 ದಿನಗಳ ಕಾಲ 4 ಸಾವಿರ ಕಿ.ಮೀ. ಗಳಷ್ಟು ಪಾದಯಾತ್ರೆ ಕೈಗೊಳ್ಳಲಿದ್ದೇನೆ. ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿಗೆ ನಮ್ಮ ಕೋಟೆಯನ್ನು ಒಡೆಯಲು ಬಿಡುವುದಿಲ್ಲ’ ಎಂದು ಲೋಕೇಶ್ ಮಂಗಳಗಿರಿಯಲ್ಲಿ ತಮ್ಮ ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದಾರೆ.</p>.<p>2019ರ ವಿಧಾನಸಭಾ ಚುನಾವಣೆಯಲ್ಲಿ ಅಮರಾವತಿಯ ಭಾಗವಾಗಿರುವ ಮಂಗಳಗಿರಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಲೋಕೇಶ್ ಸೋಲು ಅನುಭವಿಸಿದ್ದರು. 2024 ಏಪ್ರಿಲ್– ಮೇ ತಿಂಗಳಲ್ಲಿ ಆಂಧ್ರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಅಮರಾವತಿ</strong>: ವೈಎಸ್ಆರ್ ಕಾಂಗ್ರೆಸ್ನಿಂದ ಅಧಿಕಾರವನ್ನು ಮರಳಿ ಪಡೆಯುವ ಸಲುವಾಗಿ ಆಂಧ್ರದ ಶಾಸಕ ಹಾಗೂ ತೆಲುಗು ದೇಶಂ ಪಕ್ಷದ (ಟಿಡಿಪಿ) ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರು 2023ರ ಜನವರಿ 27ರಿಂದ 4 ಸಾವಿರ ಕಿ.ಮೀ ದೂರದ ‘ಪಾದಯಾತ್ರೆ’ ಆರಂಭಿಸಲಿದ್ದಾರೆ.</p>.<p class="bodytext">ಟಿಡಿಪಿ ವರಿಷ್ಠ ಹಾಗೂ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ರಾಜಕೀಯ ವಾರಸುದಾರರಾಗಿರುವ ನಾರಾ ಲೋಕೇಶ್ ಅವರ ಕಾರ್ಯತಂತ್ರದ ನಡೆ ಬಗ್ಗೆ ಕೆಲ ದಿನಗಳಿಂದ ಚರ್ಚೆಯಾಗುತ್ತಿದ್ದು, ಇದೀಗ ಅವರು ತಮ್ಮ ಪಾದಯಾತ್ರೆ ಯೋಜನೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ.</p>.<p>‘ಆಂಧ್ರದಾದ್ಯಂತ ಜ. 27ರಿಂದ ನಾನು ಸುಮಾರು 400 ದಿನಗಳ ಕಾಲ 4 ಸಾವಿರ ಕಿ.ಮೀ. ಗಳಷ್ಟು ಪಾದಯಾತ್ರೆ ಕೈಗೊಳ್ಳಲಿದ್ದೇನೆ. ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿಗೆ ನಮ್ಮ ಕೋಟೆಯನ್ನು ಒಡೆಯಲು ಬಿಡುವುದಿಲ್ಲ’ ಎಂದು ಲೋಕೇಶ್ ಮಂಗಳಗಿರಿಯಲ್ಲಿ ತಮ್ಮ ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದಾರೆ.</p>.<p>2019ರ ವಿಧಾನಸಭಾ ಚುನಾವಣೆಯಲ್ಲಿ ಅಮರಾವತಿಯ ಭಾಗವಾಗಿರುವ ಮಂಗಳಗಿರಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಲೋಕೇಶ್ ಸೋಲು ಅನುಭವಿಸಿದ್ದರು. 2024 ಏಪ್ರಿಲ್– ಮೇ ತಿಂಗಳಲ್ಲಿ ಆಂಧ್ರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>