<p>ಕೋಲ್ಕತ್ತ: ‘ನಾರದ ಮಾರುವೇಷದ ಕಾರ್ಯಾಚರಣೆ ಪ್ರಕರಣ ಸಂಬಂಧ ಬಂಧಕ್ಕೊಳಗಾದ ಟಿಎಂಸಿ ಶಾಸಕ ಮದನ್ ಮಿತ್ರಾ ಮತ್ತು ಟಿಎಂಸಿ ಮಾಜಿ ನಾಯಕ ಸೋವನ್ ಚಟರ್ಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರಿಬ್ಬರನ್ನು ಮಂಗಳವಾರ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>ನಾರದ ಮಾರುವೇಷದ ಕಾರ್ಯಾಚರಣೆ ಪ್ರಕರಣ ಸಂಬಂಧ ಮಿತ್ರಾ, ಚಟರ್ಜಿ ಮತ್ತು ಸಚಿವರಾದ ಫಿರ್ಹಾದ್ ಹಕೀಮ್ ಮತ್ತು ಸುಬ್ರತಾ ಮುಖರ್ಜಿ ಅವರನ್ನು ಸೋಮವಾರ ಬೆಳಿಗ್ಗೆ ಸಿಬಿಐ ಬಂಧಿಸಿತ್ತು. ಬಳಿಕ ಸೋಮವಾರ ರಾತ್ರಿ ನಾಲ್ಕು ಮಂದಿಯನ್ನು ಕೋಲ್ಕತ್ತದ ಪ್ರೆಸಿಡೆನ್ಸಿ ಜೈಲಿಗೆ ಕರೆದೊಯ್ಯಲಾಯಿತು.</p>.<p>‘ಮಂಗಳವಾರ ಬೆಳಿಗ್ಗೆ 3 ಗಂಟೆ ಸುಮಾರಿಗೆ ಮದನ್ ಮತ್ತು ಚಟರ್ಜಿ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಎಸ್ಎಸ್ಕೆಎಂ ಆಸ್ಪತ್ರೆಗೆ ದಾಖಲಿಸಲಾಯಿತು’ ಎಂದು ಅವರು ಹೇಳಿದರು.</p>.<p>‘ಇಬ್ಬರು ನಾಯಕರಿಗೆ ಆಮ್ಲಜನಕದ ನೆರವನ್ನು ನೀಡಲಾಗಿತ್ತು. ಈಗ ಅವರಿಬ್ಬರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ’ ಎಂದು ಆಸ್ಪತ್ರೆ ತಿಳಿಸಿದೆ.</p>.<p>‘ಸುಬ್ರತಾ ಮುಖರ್ಜಿ ಅವರ ಆರೋಗ್ಯವು ಹದಗೆಟ್ಟಿತ್ತು. ಅವರನ್ನು ಕೂಡ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಎಲ್ಲಾ ಪರಿಶೀಲನೆ ಬಳಿಕ ಜೈಲಿಗೆ ವಾಪಸ್ ಕರೆತರಲಾಯಿತು. ಫಿರ್ಹಾದ್ ಹಕೀಮ್ ಅವರು ಆರೋಗ್ಯವಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲ್ಕತ್ತ: ‘ನಾರದ ಮಾರುವೇಷದ ಕಾರ್ಯಾಚರಣೆ ಪ್ರಕರಣ ಸಂಬಂಧ ಬಂಧಕ್ಕೊಳಗಾದ ಟಿಎಂಸಿ ಶಾಸಕ ಮದನ್ ಮಿತ್ರಾ ಮತ್ತು ಟಿಎಂಸಿ ಮಾಜಿ ನಾಯಕ ಸೋವನ್ ಚಟರ್ಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರಿಬ್ಬರನ್ನು ಮಂಗಳವಾರ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>ನಾರದ ಮಾರುವೇಷದ ಕಾರ್ಯಾಚರಣೆ ಪ್ರಕರಣ ಸಂಬಂಧ ಮಿತ್ರಾ, ಚಟರ್ಜಿ ಮತ್ತು ಸಚಿವರಾದ ಫಿರ್ಹಾದ್ ಹಕೀಮ್ ಮತ್ತು ಸುಬ್ರತಾ ಮುಖರ್ಜಿ ಅವರನ್ನು ಸೋಮವಾರ ಬೆಳಿಗ್ಗೆ ಸಿಬಿಐ ಬಂಧಿಸಿತ್ತು. ಬಳಿಕ ಸೋಮವಾರ ರಾತ್ರಿ ನಾಲ್ಕು ಮಂದಿಯನ್ನು ಕೋಲ್ಕತ್ತದ ಪ್ರೆಸಿಡೆನ್ಸಿ ಜೈಲಿಗೆ ಕರೆದೊಯ್ಯಲಾಯಿತು.</p>.<p>‘ಮಂಗಳವಾರ ಬೆಳಿಗ್ಗೆ 3 ಗಂಟೆ ಸುಮಾರಿಗೆ ಮದನ್ ಮತ್ತು ಚಟರ್ಜಿ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಎಸ್ಎಸ್ಕೆಎಂ ಆಸ್ಪತ್ರೆಗೆ ದಾಖಲಿಸಲಾಯಿತು’ ಎಂದು ಅವರು ಹೇಳಿದರು.</p>.<p>‘ಇಬ್ಬರು ನಾಯಕರಿಗೆ ಆಮ್ಲಜನಕದ ನೆರವನ್ನು ನೀಡಲಾಗಿತ್ತು. ಈಗ ಅವರಿಬ್ಬರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ’ ಎಂದು ಆಸ್ಪತ್ರೆ ತಿಳಿಸಿದೆ.</p>.<p>‘ಸುಬ್ರತಾ ಮುಖರ್ಜಿ ಅವರ ಆರೋಗ್ಯವು ಹದಗೆಟ್ಟಿತ್ತು. ಅವರನ್ನು ಕೂಡ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಎಲ್ಲಾ ಪರಿಶೀಲನೆ ಬಳಿಕ ಜೈಲಿಗೆ ವಾಪಸ್ ಕರೆತರಲಾಯಿತು. ಫಿರ್ಹಾದ್ ಹಕೀಮ್ ಅವರು ಆರೋಗ್ಯವಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>