<p><strong>ಮುಂಬೈ:</strong> ಕೇಂದ್ರ ಸಚಿವ ನಾರಾಯಣ ರಾಣೆ ಶೀಘ್ರದಲ್ಲೇ 'ಜನಾಶೀರ್ವಾದ ಯಾತ್ರೆ' ಪುನರಾರಂಭಿಸಲಿದ್ದಾರೆ ಎಂದು ನಿಕಟ ಮೂಲಗಳು ತಿಳಿಸಿವೆ.</p>.<p>ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ನಾರಾಯಣ ರಾಣೆ ಅವರನ್ನು ಮಂಗಳವಾರ ಬಂಧಿಸಿ ಬಳಿಕ ತಡರಾತ್ರಿ ಜಾಮೀನು ನೀಡಲಾಗಿತ್ತು.</p>.<p>ಇದನ್ನೂ ಓದಿ:<a href="https://www.prajavani.net/india-news/after-narayan-ranes-arrest-son-nitesh-tweets-video-hinting-at-strong-reply-860814.html" itemprop="url">ಕೇಂದ್ರ ಸಚಿವ ನಾರಾಯಣ ರಾಣೆ ಪುತ್ರನಿಂದ ಪ್ರತೀಕಾರದ ಸುಳಿವು </a></p>.<p>ನಾರಾಯಣ ರಾಣೆ ಪ್ರಯಾಣದ ಮಾರ್ಗದಲ್ಲಿ ಯಾವುದೇ ಬದಲಾವಣೆಯಿಲ್ಲ. ಅಲ್ಲದೆ ಜನಾಶೀರ್ವಾದ ಯಾತ್ರೆ ಪುನರಾರಂಭಿಸುವ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ನಿಕಟವರ್ತಿ ರಜನ್ ತೇಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ನಾರಾಯಣ ರಾಣೆ ಅವರು ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂಬು ಬಿಜೆಪಿ ವಕ್ತಾರ ಕೇಶವ ಉಪಾಧ್ಯೆ ತಿಳಿಸಿದ್ದಾರೆ.</p>.<p>ಇತ್ತೀಚಿಗೆ ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿರುವ ಬಿಜೆಪಿ ನಾಯಕ ರಾಣೆ, ಆಗಸ್ಟ್ 19ರಂದು ಮುಂಬೈಯಿಂದ ಜನಾಶೀರ್ವಾದ ಯಾತ್ರೆ ಆರಂಭಿಸಿದ್ದರು. ಏಳು ದಿನಗಳ ಯಾತ್ರೆ ಸಿಂಧುದುರ್ಗದಲ್ಲಿ ಮುಕ್ತಾಯಗೊಳ್ಳಬೇಕಿತ್ತು.</p>.<p>ರಾಯಗಡದಲ್ಲಿ ಯಾತ್ರೆಯ ವೇಳೆ ಮುಖ್ಯಮಂತ್ರಿ ‘ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕೆನ್ನೆಗೆ ಬಾರಿಸುತ್ತೇನೆ’ ಎಂದು ಹೇಳಿರುವುದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸ್ ಪ್ರಕರಣ ದಾಖಲಿಸಿತ್ತು.</p>.<p>ಇದು ಕೇಂದ್ರ ಹಾಗೂ ಮಹಾರಾಷ್ಟ್ರ ಸರ್ಕಾರದ ನಡುವಣ ನೇರ ರಾಜಕೀಯ ಹಣಾಹಣಿಗೆ ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಕೇಂದ್ರ ಸಚಿವ ನಾರಾಯಣ ರಾಣೆ ಶೀಘ್ರದಲ್ಲೇ 'ಜನಾಶೀರ್ವಾದ ಯಾತ್ರೆ' ಪುನರಾರಂಭಿಸಲಿದ್ದಾರೆ ಎಂದು ನಿಕಟ ಮೂಲಗಳು ತಿಳಿಸಿವೆ.</p>.<p>ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ನಾರಾಯಣ ರಾಣೆ ಅವರನ್ನು ಮಂಗಳವಾರ ಬಂಧಿಸಿ ಬಳಿಕ ತಡರಾತ್ರಿ ಜಾಮೀನು ನೀಡಲಾಗಿತ್ತು.</p>.<p>ಇದನ್ನೂ ಓದಿ:<a href="https://www.prajavani.net/india-news/after-narayan-ranes-arrest-son-nitesh-tweets-video-hinting-at-strong-reply-860814.html" itemprop="url">ಕೇಂದ್ರ ಸಚಿವ ನಾರಾಯಣ ರಾಣೆ ಪುತ್ರನಿಂದ ಪ್ರತೀಕಾರದ ಸುಳಿವು </a></p>.<p>ನಾರಾಯಣ ರಾಣೆ ಪ್ರಯಾಣದ ಮಾರ್ಗದಲ್ಲಿ ಯಾವುದೇ ಬದಲಾವಣೆಯಿಲ್ಲ. ಅಲ್ಲದೆ ಜನಾಶೀರ್ವಾದ ಯಾತ್ರೆ ಪುನರಾರಂಭಿಸುವ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ನಿಕಟವರ್ತಿ ರಜನ್ ತೇಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ನಾರಾಯಣ ರಾಣೆ ಅವರು ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂಬು ಬಿಜೆಪಿ ವಕ್ತಾರ ಕೇಶವ ಉಪಾಧ್ಯೆ ತಿಳಿಸಿದ್ದಾರೆ.</p>.<p>ಇತ್ತೀಚಿಗೆ ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿರುವ ಬಿಜೆಪಿ ನಾಯಕ ರಾಣೆ, ಆಗಸ್ಟ್ 19ರಂದು ಮುಂಬೈಯಿಂದ ಜನಾಶೀರ್ವಾದ ಯಾತ್ರೆ ಆರಂಭಿಸಿದ್ದರು. ಏಳು ದಿನಗಳ ಯಾತ್ರೆ ಸಿಂಧುದುರ್ಗದಲ್ಲಿ ಮುಕ್ತಾಯಗೊಳ್ಳಬೇಕಿತ್ತು.</p>.<p>ರಾಯಗಡದಲ್ಲಿ ಯಾತ್ರೆಯ ವೇಳೆ ಮುಖ್ಯಮಂತ್ರಿ ‘ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕೆನ್ನೆಗೆ ಬಾರಿಸುತ್ತೇನೆ’ ಎಂದು ಹೇಳಿರುವುದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸ್ ಪ್ರಕರಣ ದಾಖಲಿಸಿತ್ತು.</p>.<p>ಇದು ಕೇಂದ್ರ ಹಾಗೂ ಮಹಾರಾಷ್ಟ್ರ ಸರ್ಕಾರದ ನಡುವಣ ನೇರ ರಾಜಕೀಯ ಹಣಾಹಣಿಗೆ ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>