<p><strong>ನವದೆಹಲಿ:</strong> ಎನ್ಡಿಎ ಮೈತ್ರಿಕೂಟದ ಸಂಸದರಿಗಾಗಿ ಬಿಜೆಪಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಭಾಗವಹಿಸಿದ್ದರು. ಈ ವೇಳೆ ಅವರು ಕೊನೆಯ ಸಾಲಿನಲ್ಲಿ ಸಾಮಾನ್ಯರಂತೆ ಕುಳಿತಿದ್ದರು ಎಂದು ಸಂಸದರು ಹೇಳಿದರು. </p><p>ಮೋದಿ ಅವರು ಭಾಗಿಯಾಗಿದ್ದ ಫೋಟೊವನ್ನು ಸಂಸದ ರವಿ ಕಿಶನ್ ಹಂಚಿಕೊಂಡಿದ್ದಾರೆ. ‘ಪ್ರಧಾನಿ ಮೋದಿ ಅವರು ಕಾರ್ಯಾಗಾರದಲ್ಲಿ ಕೊನೆಯ ಸಾಲಿನಲ್ಲಿ ಕುಳಿತಿರುವುದು ಬಿಜೆಪಿಯ ಶಕ್ತಿಯನ್ನು ಬಿಂಬಿಸುತ್ತದೆ. ಪ್ರತಿ ಕಾರ್ಯಕರ್ತನೂ ಬಿಜೆಪಿ ಭಾಗವಾಗಿರುತ್ತಾನೆ’ ಎಂದು ಅವರು ಬರೆದುಕೊಂಡಿದ್ದಾರೆ. </p>.<p>ಸಂಸತ್ತಿನ ಸಂಕೀರ್ಣದಲ್ಲಿರುವ ಜಿಎಂಸಿ ಬಾಲಯೋಗಿ ಸಭಾಂಗಣದಲ್ಲಿ ಬಿಜೆಪಿ ಆಯೋಜಿಸಿದ್ದ ಎರಡು ದಿನಗಳ ಕಾರ್ಯಾಗಾರದಲ್ಲಿ ಪಕ್ಷದ ಇತಿಹಾಸ, ಬೆಳವಣಿಗೆ ಸೇರಿದಂತೆ ಸಂಸದರ ದಕ್ಷತೆ ಹೆಚ್ಚಿಸಲು ಅಗತ್ಯವಿರುವ ಸಲಹೆಗಳನ್ನು ನೀಡಲಾಯಿತು. </p><p>ಸರಕು ಮತ್ತು ಸೇವಾ ತೆರಿಗೆಯಲ್ಲಿನ (ಜಿಎಸ್ಟಿ) ಇತ್ತೀಚಿನ ಸುಧಾರಣೆಗಳನ್ನು ಸಂಸದರು ಶ್ಲಾಘಿಸಿದರು. </p><p>‘2027ಕ್ಕೆ ಅಭಿವೃದ್ಧಿ ಹೊಂದಿದ ಭಾರತದ ಕಡೆಗೆ’ ಹಾಗೂ ‘ಸಂಸದರಿಂದ ಸಾಮಾಜಿಕ ಜಾಲತಾಣಗಳ ಪರಿಣಾಮಕಾರಿ ಬಳಕೆ’ ಎಂಬ ವಿಷಯಗಳ ಕುರಿತು ಕಾರ್ಯಾಗಾರದ ಮೊದಲ ದಿನ (ಭಾನುವಾರ) ಚರ್ಚಿಸಲಾಯಿತು. </p><p>ಕೃಷಿ, ರಕ್ಷಣೆ, ಶಿಕ್ಷಣ, ರೈಲ್ವೆ ಮತ್ತು ಸಾರಿಗೆ ಸೇರಿದಂತೆ ಅನೇಕ ಕ್ಷೇತ್ರಗಳ ಕುರಿತೂ ಸಂಸದರು ಚರ್ಚಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಎನ್ಡಿಎ ಮೈತ್ರಿಕೂಟದ ಸಂಸದರಿಗಾಗಿ ಬಿಜೆಪಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಭಾಗವಹಿಸಿದ್ದರು. ಈ ವೇಳೆ ಅವರು ಕೊನೆಯ ಸಾಲಿನಲ್ಲಿ ಸಾಮಾನ್ಯರಂತೆ ಕುಳಿತಿದ್ದರು ಎಂದು ಸಂಸದರು ಹೇಳಿದರು. </p><p>ಮೋದಿ ಅವರು ಭಾಗಿಯಾಗಿದ್ದ ಫೋಟೊವನ್ನು ಸಂಸದ ರವಿ ಕಿಶನ್ ಹಂಚಿಕೊಂಡಿದ್ದಾರೆ. ‘ಪ್ರಧಾನಿ ಮೋದಿ ಅವರು ಕಾರ್ಯಾಗಾರದಲ್ಲಿ ಕೊನೆಯ ಸಾಲಿನಲ್ಲಿ ಕುಳಿತಿರುವುದು ಬಿಜೆಪಿಯ ಶಕ್ತಿಯನ್ನು ಬಿಂಬಿಸುತ್ತದೆ. ಪ್ರತಿ ಕಾರ್ಯಕರ್ತನೂ ಬಿಜೆಪಿ ಭಾಗವಾಗಿರುತ್ತಾನೆ’ ಎಂದು ಅವರು ಬರೆದುಕೊಂಡಿದ್ದಾರೆ. </p>.<p>ಸಂಸತ್ತಿನ ಸಂಕೀರ್ಣದಲ್ಲಿರುವ ಜಿಎಂಸಿ ಬಾಲಯೋಗಿ ಸಭಾಂಗಣದಲ್ಲಿ ಬಿಜೆಪಿ ಆಯೋಜಿಸಿದ್ದ ಎರಡು ದಿನಗಳ ಕಾರ್ಯಾಗಾರದಲ್ಲಿ ಪಕ್ಷದ ಇತಿಹಾಸ, ಬೆಳವಣಿಗೆ ಸೇರಿದಂತೆ ಸಂಸದರ ದಕ್ಷತೆ ಹೆಚ್ಚಿಸಲು ಅಗತ್ಯವಿರುವ ಸಲಹೆಗಳನ್ನು ನೀಡಲಾಯಿತು. </p><p>ಸರಕು ಮತ್ತು ಸೇವಾ ತೆರಿಗೆಯಲ್ಲಿನ (ಜಿಎಸ್ಟಿ) ಇತ್ತೀಚಿನ ಸುಧಾರಣೆಗಳನ್ನು ಸಂಸದರು ಶ್ಲಾಘಿಸಿದರು. </p><p>‘2027ಕ್ಕೆ ಅಭಿವೃದ್ಧಿ ಹೊಂದಿದ ಭಾರತದ ಕಡೆಗೆ’ ಹಾಗೂ ‘ಸಂಸದರಿಂದ ಸಾಮಾಜಿಕ ಜಾಲತಾಣಗಳ ಪರಿಣಾಮಕಾರಿ ಬಳಕೆ’ ಎಂಬ ವಿಷಯಗಳ ಕುರಿತು ಕಾರ್ಯಾಗಾರದ ಮೊದಲ ದಿನ (ಭಾನುವಾರ) ಚರ್ಚಿಸಲಾಯಿತು. </p><p>ಕೃಷಿ, ರಕ್ಷಣೆ, ಶಿಕ್ಷಣ, ರೈಲ್ವೆ ಮತ್ತು ಸಾರಿಗೆ ಸೇರಿದಂತೆ ಅನೇಕ ಕ್ಷೇತ್ರಗಳ ಕುರಿತೂ ಸಂಸದರು ಚರ್ಚಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>