<p><strong>ಕೊಚ್ಚಿ (ಪಿಟಿಐ):</strong> ‘ಪಶ್ಚಿಮ ಏಷ್ಯಾದ ಬಿಕ್ಕಟ್ಟನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ರಾಜಕೀಯದಾಟ ನಡೆಸುತ್ತಿವೆ. ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿರುವ ನಮ್ಮ ಜನರ ಸುರಕ್ಷತೆಗೆ ಎಲ್ಲ ಯತ್ನಗಳನ್ನು ಮಾಡಲಾಗುತ್ತಿದೆ. ಕಾಂಗ್ರೆಸ್, ಎಡಪಕ್ಷಗಳು ಹಬ್ಬಿಸುವ ‘ವದಂತಿ’ಗಳಿಗೆ ಕಿವಿಗೊಡಬೇಡಿ’ ಎಂದು ಪ್ರಧಾನಿ ನರೇಂದ್ರ ಮೋದಿ ಜನರನ್ನು ಆಗ್ರಹಿಸಿದರು.</p>.<p>‘ಅಖಿಲ ಕೇರಳ ದೀವರ ಸಭಾ’ದ ಸುವರ್ಣ ಮಹೋತ್ಸವ ಆಚರಣೆ ಕಾರ್ಯಕ್ರಮ ಮತ್ತು ₹10 ಸಾವಿರ ಕೋಟಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಬುಧವಾರ ಮಾತನಾಡಿದರು. ಎನ್ಡಿಎ ರ್ಯಾಲಿಯಲ್ಲಿ ಭಾಗವಹಿಸಿದ ಅವರು ಈ ಮೂಲಕ ಚುನಾವಣಾ ಪ್ರಚಾರವನ್ನೂ ಆರಂಭಿಸಿದರು.</p>.<p>‘ನಿಮಗೆ ಆತಂಕವಾಗುವುದು ಸಹಜ. ನಿಮ್ಮ ಸಹೋದರ, ಸಹೋದರಿಯರು ಲಕ್ಷಗಟ್ಟಲೆ ಸಂಖ್ಯೆಯಲ್ಲಿ ಕೊಲ್ಲಿ ರಾಷ್ಟ್ರಗಳಲ್ಲಿದ್ದಾರೆ. ಅಲ್ಲಿನ ಸರ್ಕಾರಗಳು ನಮ್ಮ ಜನರಿಗೆ ರಕ್ಷಣೆ ನೀಡುತ್ತಿವೆ. ಆಹಾರ, ವೈದ್ಯಕೀಯ ಸೇವೆಯೂ ಸೇರಿ ಎಲ್ಲ ರೀತಿಯ ಸಹಕಾರ ನೀಡುತ್ತಿವೆ. ಇದಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ’ ಎಂದರು.</p>.<p>‘ನಮ್ಮ ರಾಯಭಾರ ಕಚೇರಿಗಳು ದಿನವಿಡೀ ಕೆಲಸ ಮಾಡುತ್ತಿವೆ. ಇಂದಿನ ಭಾರತವು ಇತರೆಡೆಗಳಲ್ಲಿ ಸಿಲುಕಿರುವ ನಮ್ಮ ದೇಶದ ಜನರನ್ನು ಕೈಬಿಡುವುದಿಲ್ಲ. ಕೇಂದ್ರ ಸರ್ಕಾರವು ಇವರ ಸುರಕ್ಷತೆಗೆ ಬೇಕಾದ ಎಲ್ಲ ಕಾರ್ಯಗಳನ್ನು ಮಾಡುತ್ತಿದೆ’ ಎಂದು ಭರವಸೆ ನೀಡಿದರು.</p>.<p>‘ಇಂಥ ಜಾಗತಿಕ ಬಿಕ್ಕಟ್ಟಿನ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷವು ರಾಜಕೀಯವಾಡುತ್ತಿದೆ. ಜೊತೆಗೆ, ಆತಂಕವನ್ನು ಇನ್ನಷ್ಟು ಹೆಚ್ಚಿಸುವ ರೀತಿಯಲ್ಲಿ ಅದು ಹೇಳಿಕೆಗಳನ್ನು ನೀಡುತ್ತಾ ಜನರನ್ನು ಸಂಕಷ್ಟಕ್ಕೆ ಈಡುಮಾಡುತ್ತಿದೆ. ಆ ಮೂಲಕ ನನ್ನನ್ನು ಜರಿಯುವುದು ಅವರ ಉದ್ದೇಶ’ ಎಂದರು.</p>.<p>‘ಭಾರತವು ಬೇರೆ ದೇಶಗಳ ಮೇಲೆ ಅವಲಂಬಿತವಾಗುವಂತೆ ಕಾಂಗ್ರೆಸ್ ಮತ್ತು ಎಡಪಕ್ಷಗಳು ಸರ್ಕಾರ ನಡೆಸಿದ್ದವು. ಆದರೆ, ನಾವು ದೇಶವನ್ನು ಆತ್ಮನಿರ್ಭರ ಮಾಡಿದ್ದೇವೆ. ಸೌರ ವಿದ್ಯುತ್ ಸಾಮರ್ಥ್ಯವನ್ನು ಹೆಚ್ಚಿಸಿದ್ದೇವೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅವಲಂಬನೆಯನ್ನು ತಗ್ಗಿಸಲು ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇಜನ ನೀಡಿದ್ದೇವೆ’ ಎಂದರು.</p>.<div><blockquote>ನಿಮ್ಮ ಸೇವೆ ಮಾಡಲು ನಮಗೆ ಅವಕಾಶ ನೀಡಿ. ‘ಮೋದಿಯ ಗ್ಯಾರಂಟಿ’ಯಿಂದ ಇದನ್ನು ಹೇಳುತ್ತಿದ್ದೇನೆ. ರಾಜ್ಯವನ್ನು ಭವಿಷ್ಯದ ತಾಂತ್ರಿಕ ಮತ್ತು ಕೃತಕ ಬುದ್ಧಿಮತ್ತೆಯ ಕೇಂದ್ರ ಮಾಡುತ್ತೇವೆ</blockquote><span class="attribution">ನರೇಂದ್ರ ಮೋದಿ ಪ್ರಧಾನಿ</span></div>.<h2> ‘ಕಾಂಗ್ರೆಸ್ ಯುವರಾಜನಿಗೆ ದೇಶದ ಅಭಿವೃದ್ಧಿ ಬಗ್ಗೆ ತಿಳಿದಿಲ್ಲ’</h2><p> ಕಾಂಗ್ರೆಸ್ನ ಯುವರಾಜನಿಗೆ ದೇಶದಲ್ಲಿ ಏನಾಗುತ್ತಿದೆ ಎಂಬುದೇ ತಿಳಿದಿಲ್ಲ. ಯಾಕೆಂದರೆ ದೇಶದ ಯುವಕರು ಮತ್ತು ವಿವಿಧ ಕಂಪನಿಗಳು ಕೇರಳವೂ ಸೇರಿ ವಿವಿಧ ರಾಜ್ಯಗಳಲ್ಲಿ ಡ್ರೋನ್ ತಯಾರಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಅವರಿಗೆ (ರಾಹುಲ್) ಹಲವು ಮಿತಿಗಳಿವೆ. ಆದ್ದರಿಂದ ದೇಶದ ಬೆಳವಣಿಗೆ ಬಗ್ಗೆ ಅವರಿಗೆ ತಿಳಿದಿಲ್ಲ ನರೇಂದ್ರ ಮೋದಿ ಪ್ರಧಾನಿ (ಇತ್ತೀಚೆಗೆ ರಾಹುಲ್ ಗಾಂಧಿ ಅವರು ಕೇರಳಕ್ಕೆ ಭೇಟಿ ನೀಡಿದಾಗ ಡ್ರೋನ್ ತಯಾರಿಕೆಯಲ್ಲಿ ಚೀನಾವು ಮುಂದಿದೆ. ಭಾರತವು ಅದಕ್ಕೆ ಹತ್ತಿರದಲ್ಲಿಯೂ ಇಲ್ಲ ಎಂದಿದ್ದರು. ಇದಕ್ಕೆ ಪ್ರಧಾನಿ ಪ್ರತಿಕ್ರಿಯಿಸಿದರು)</p>.<h2>ಮುಖ್ಯಮಂತ್ರಿ ಪಿಣರಾಯಿ ಗೈರು </h2><p>ಪ್ರಧಾನಿ ನರೇಂದ್ರ ಮೋದಿ ಅವರ ಕೇರಳ ಭೇಟಿ ವೇಳೆ ಲೋಕೋಪಯೋಗಿ ಸಚಿವ ಪಿ.ಎ. ಮೊಹಮ್ಮದ್ ರಿಯಾಸ್ ಅವರನ್ನು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸದ ಕಾರಣ ತಮಗೆ ಆಹ್ವಾನವಿದ್ದರೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿಲ್ಲ ಎನ್ನಲಾಗಿದೆ. </p><p>ರಿಯಾಸ್ ಅವರನ್ನು ಆಹ್ವಾನಿಸದೇ ಇರುವುದು ವಿವಾದಕ್ಕೆ ಕಾರಣವಾಗಿದೆ. ತಾವು ಗೈರಾದ ಬಗ್ಗೆ ಮುಖ್ಯಮಂತ್ರಿ ಯಾವುದೇ ಕಾರಣ ನೀಡಿಲ್ಲ. ಸಚಿವರಾದ ಎಂ.ಬಿ. ರಾಜೇಶ್ ಮತ್ತು ಕೆ. ಕೃಷ್ಣಮೂರ್ತಿ ಅವರಿಗೆ ಆಹ್ವಾನವಿತ್ತು. ಇವರಿಬ್ಬರು ಗೈರಾಗಿದ್ದರು.</p><p> ಈ ಕಾರ್ಯಕ್ರಮಕ್ಕೆ ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರನ್ನು ಆಹ್ವಾನಿಸಿದ್ದ ಬಗ್ಗೆ ಸಚಿವ ರಿಯಾಸ್ ಅಸಮಾಧಾನ ವ್ಯಕ್ತಪಡಿಸಿದರು. ‘ಆಹ್ವಾನ ನೀಡದೆ ಇರುವುದು ರಾಜಕೀಯ ಪ್ರೇರಿತ ನಡೆ’ ಎಂದರು. </p><p>ವಿವಾದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿಯ ರಾಜೀವ್ ಚಂದ್ರಶೇಖರ್ ‘ಶಿಷ್ಟಾಚಾರದ ಪ್ರಕಾರ ಮುಖ್ಯಮಂತ್ರಿ ಅವರಿಗೆ ಆಹ್ವಾನ ನೀಡಲಾಗಿತ್ತು. ಹಾಗೆಂದ ಮಾತ್ರಕ್ಕೆ ಸಿ.ಎಂ ಅಳಿಯನಿಗೂ (ರಿಯಾಸ್) ಕುಟುಂಬ ಸದಸ್ಯರಿಗೂ ಆಹ್ವಾನಿಸಬೇಕಾಗಿಲ್ಲ. ಇದರಿಂದ ಅವರಿಗೆ ಸಮಸ್ಯೆಯಾದರೆ ಆಗಲಿ ಬಿಡಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ (ಪಿಟಿಐ):</strong> ‘ಪಶ್ಚಿಮ ಏಷ್ಯಾದ ಬಿಕ್ಕಟ್ಟನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ರಾಜಕೀಯದಾಟ ನಡೆಸುತ್ತಿವೆ. ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿರುವ ನಮ್ಮ ಜನರ ಸುರಕ್ಷತೆಗೆ ಎಲ್ಲ ಯತ್ನಗಳನ್ನು ಮಾಡಲಾಗುತ್ತಿದೆ. ಕಾಂಗ್ರೆಸ್, ಎಡಪಕ್ಷಗಳು ಹಬ್ಬಿಸುವ ‘ವದಂತಿ’ಗಳಿಗೆ ಕಿವಿಗೊಡಬೇಡಿ’ ಎಂದು ಪ್ರಧಾನಿ ನರೇಂದ್ರ ಮೋದಿ ಜನರನ್ನು ಆಗ್ರಹಿಸಿದರು.</p>.<p>‘ಅಖಿಲ ಕೇರಳ ದೀವರ ಸಭಾ’ದ ಸುವರ್ಣ ಮಹೋತ್ಸವ ಆಚರಣೆ ಕಾರ್ಯಕ್ರಮ ಮತ್ತು ₹10 ಸಾವಿರ ಕೋಟಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಬುಧವಾರ ಮಾತನಾಡಿದರು. ಎನ್ಡಿಎ ರ್ಯಾಲಿಯಲ್ಲಿ ಭಾಗವಹಿಸಿದ ಅವರು ಈ ಮೂಲಕ ಚುನಾವಣಾ ಪ್ರಚಾರವನ್ನೂ ಆರಂಭಿಸಿದರು.</p>.<p>‘ನಿಮಗೆ ಆತಂಕವಾಗುವುದು ಸಹಜ. ನಿಮ್ಮ ಸಹೋದರ, ಸಹೋದರಿಯರು ಲಕ್ಷಗಟ್ಟಲೆ ಸಂಖ್ಯೆಯಲ್ಲಿ ಕೊಲ್ಲಿ ರಾಷ್ಟ್ರಗಳಲ್ಲಿದ್ದಾರೆ. ಅಲ್ಲಿನ ಸರ್ಕಾರಗಳು ನಮ್ಮ ಜನರಿಗೆ ರಕ್ಷಣೆ ನೀಡುತ್ತಿವೆ. ಆಹಾರ, ವೈದ್ಯಕೀಯ ಸೇವೆಯೂ ಸೇರಿ ಎಲ್ಲ ರೀತಿಯ ಸಹಕಾರ ನೀಡುತ್ತಿವೆ. ಇದಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ’ ಎಂದರು.</p>.<p>‘ನಮ್ಮ ರಾಯಭಾರ ಕಚೇರಿಗಳು ದಿನವಿಡೀ ಕೆಲಸ ಮಾಡುತ್ತಿವೆ. ಇಂದಿನ ಭಾರತವು ಇತರೆಡೆಗಳಲ್ಲಿ ಸಿಲುಕಿರುವ ನಮ್ಮ ದೇಶದ ಜನರನ್ನು ಕೈಬಿಡುವುದಿಲ್ಲ. ಕೇಂದ್ರ ಸರ್ಕಾರವು ಇವರ ಸುರಕ್ಷತೆಗೆ ಬೇಕಾದ ಎಲ್ಲ ಕಾರ್ಯಗಳನ್ನು ಮಾಡುತ್ತಿದೆ’ ಎಂದು ಭರವಸೆ ನೀಡಿದರು.</p>.<p>‘ಇಂಥ ಜಾಗತಿಕ ಬಿಕ್ಕಟ್ಟಿನ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷವು ರಾಜಕೀಯವಾಡುತ್ತಿದೆ. ಜೊತೆಗೆ, ಆತಂಕವನ್ನು ಇನ್ನಷ್ಟು ಹೆಚ್ಚಿಸುವ ರೀತಿಯಲ್ಲಿ ಅದು ಹೇಳಿಕೆಗಳನ್ನು ನೀಡುತ್ತಾ ಜನರನ್ನು ಸಂಕಷ್ಟಕ್ಕೆ ಈಡುಮಾಡುತ್ತಿದೆ. ಆ ಮೂಲಕ ನನ್ನನ್ನು ಜರಿಯುವುದು ಅವರ ಉದ್ದೇಶ’ ಎಂದರು.</p>.<p>‘ಭಾರತವು ಬೇರೆ ದೇಶಗಳ ಮೇಲೆ ಅವಲಂಬಿತವಾಗುವಂತೆ ಕಾಂಗ್ರೆಸ್ ಮತ್ತು ಎಡಪಕ್ಷಗಳು ಸರ್ಕಾರ ನಡೆಸಿದ್ದವು. ಆದರೆ, ನಾವು ದೇಶವನ್ನು ಆತ್ಮನಿರ್ಭರ ಮಾಡಿದ್ದೇವೆ. ಸೌರ ವಿದ್ಯುತ್ ಸಾಮರ್ಥ್ಯವನ್ನು ಹೆಚ್ಚಿಸಿದ್ದೇವೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅವಲಂಬನೆಯನ್ನು ತಗ್ಗಿಸಲು ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇಜನ ನೀಡಿದ್ದೇವೆ’ ಎಂದರು.</p>.<div><blockquote>ನಿಮ್ಮ ಸೇವೆ ಮಾಡಲು ನಮಗೆ ಅವಕಾಶ ನೀಡಿ. ‘ಮೋದಿಯ ಗ್ಯಾರಂಟಿ’ಯಿಂದ ಇದನ್ನು ಹೇಳುತ್ತಿದ್ದೇನೆ. ರಾಜ್ಯವನ್ನು ಭವಿಷ್ಯದ ತಾಂತ್ರಿಕ ಮತ್ತು ಕೃತಕ ಬುದ್ಧಿಮತ್ತೆಯ ಕೇಂದ್ರ ಮಾಡುತ್ತೇವೆ</blockquote><span class="attribution">ನರೇಂದ್ರ ಮೋದಿ ಪ್ರಧಾನಿ</span></div>.<h2> ‘ಕಾಂಗ್ರೆಸ್ ಯುವರಾಜನಿಗೆ ದೇಶದ ಅಭಿವೃದ್ಧಿ ಬಗ್ಗೆ ತಿಳಿದಿಲ್ಲ’</h2><p> ಕಾಂಗ್ರೆಸ್ನ ಯುವರಾಜನಿಗೆ ದೇಶದಲ್ಲಿ ಏನಾಗುತ್ತಿದೆ ಎಂಬುದೇ ತಿಳಿದಿಲ್ಲ. ಯಾಕೆಂದರೆ ದೇಶದ ಯುವಕರು ಮತ್ತು ವಿವಿಧ ಕಂಪನಿಗಳು ಕೇರಳವೂ ಸೇರಿ ವಿವಿಧ ರಾಜ್ಯಗಳಲ್ಲಿ ಡ್ರೋನ್ ತಯಾರಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಅವರಿಗೆ (ರಾಹುಲ್) ಹಲವು ಮಿತಿಗಳಿವೆ. ಆದ್ದರಿಂದ ದೇಶದ ಬೆಳವಣಿಗೆ ಬಗ್ಗೆ ಅವರಿಗೆ ತಿಳಿದಿಲ್ಲ ನರೇಂದ್ರ ಮೋದಿ ಪ್ರಧಾನಿ (ಇತ್ತೀಚೆಗೆ ರಾಹುಲ್ ಗಾಂಧಿ ಅವರು ಕೇರಳಕ್ಕೆ ಭೇಟಿ ನೀಡಿದಾಗ ಡ್ರೋನ್ ತಯಾರಿಕೆಯಲ್ಲಿ ಚೀನಾವು ಮುಂದಿದೆ. ಭಾರತವು ಅದಕ್ಕೆ ಹತ್ತಿರದಲ್ಲಿಯೂ ಇಲ್ಲ ಎಂದಿದ್ದರು. ಇದಕ್ಕೆ ಪ್ರಧಾನಿ ಪ್ರತಿಕ್ರಿಯಿಸಿದರು)</p>.<h2>ಮುಖ್ಯಮಂತ್ರಿ ಪಿಣರಾಯಿ ಗೈರು </h2><p>ಪ್ರಧಾನಿ ನರೇಂದ್ರ ಮೋದಿ ಅವರ ಕೇರಳ ಭೇಟಿ ವೇಳೆ ಲೋಕೋಪಯೋಗಿ ಸಚಿವ ಪಿ.ಎ. ಮೊಹಮ್ಮದ್ ರಿಯಾಸ್ ಅವರನ್ನು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸದ ಕಾರಣ ತಮಗೆ ಆಹ್ವಾನವಿದ್ದರೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿಲ್ಲ ಎನ್ನಲಾಗಿದೆ. </p><p>ರಿಯಾಸ್ ಅವರನ್ನು ಆಹ್ವಾನಿಸದೇ ಇರುವುದು ವಿವಾದಕ್ಕೆ ಕಾರಣವಾಗಿದೆ. ತಾವು ಗೈರಾದ ಬಗ್ಗೆ ಮುಖ್ಯಮಂತ್ರಿ ಯಾವುದೇ ಕಾರಣ ನೀಡಿಲ್ಲ. ಸಚಿವರಾದ ಎಂ.ಬಿ. ರಾಜೇಶ್ ಮತ್ತು ಕೆ. ಕೃಷ್ಣಮೂರ್ತಿ ಅವರಿಗೆ ಆಹ್ವಾನವಿತ್ತು. ಇವರಿಬ್ಬರು ಗೈರಾಗಿದ್ದರು.</p><p> ಈ ಕಾರ್ಯಕ್ರಮಕ್ಕೆ ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರನ್ನು ಆಹ್ವಾನಿಸಿದ್ದ ಬಗ್ಗೆ ಸಚಿವ ರಿಯಾಸ್ ಅಸಮಾಧಾನ ವ್ಯಕ್ತಪಡಿಸಿದರು. ‘ಆಹ್ವಾನ ನೀಡದೆ ಇರುವುದು ರಾಜಕೀಯ ಪ್ರೇರಿತ ನಡೆ’ ಎಂದರು. </p><p>ವಿವಾದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿಯ ರಾಜೀವ್ ಚಂದ್ರಶೇಖರ್ ‘ಶಿಷ್ಟಾಚಾರದ ಪ್ರಕಾರ ಮುಖ್ಯಮಂತ್ರಿ ಅವರಿಗೆ ಆಹ್ವಾನ ನೀಡಲಾಗಿತ್ತು. ಹಾಗೆಂದ ಮಾತ್ರಕ್ಕೆ ಸಿ.ಎಂ ಅಳಿಯನಿಗೂ (ರಿಯಾಸ್) ಕುಟುಂಬ ಸದಸ್ಯರಿಗೂ ಆಹ್ವಾನಿಸಬೇಕಾಗಿಲ್ಲ. ಇದರಿಂದ ಅವರಿಗೆ ಸಮಸ್ಯೆಯಾದರೆ ಆಗಲಿ ಬಿಡಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>