ಶ್ರೀನಗರದ ಈದ್ಗಾದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಆಗ ಸಯ್ಯದ್ ರೂಹುಲ್ಲಾ ಮೆಹದಿ ಪರ ಅವರು ಪ್ರಚಾರ ಮಾಡಿದರು. ‘ನರೇಂದ್ರ ಹಿಂದೂ ಹಾಗೂ ಮುಸಲ್ಮಾನರ ನಡುವೆ ದ್ವೇಷ ಹರಡುತ್ತಿದ್ದಾರೆ. ಅವರು ದೇಶದ ಪ್ರಧಾನಿ ಹಾಗೆ ವರ್ತಿಸುತ್ತಿಲ್ಲ. ವಿದೇಶಕ್ಕೆ ಹೋದಾಗ ಅವರು ಹಿಂದೂ, ಮುಸ್ಲಿಂ, ಸಿಖ್, ಕ್ರೈಸ್ತರು ಹಾಗೂ ಬೌದ್ಧರ ಪ್ರಧಾನಿ. ಆದರೆ ಮತ ಕೇಳುವಾಗ ಅವರು ನಮ್ಮನ್ನು ವಿಭಜಿಸುವ ಯತ್ನ ಮಾಡುತ್ತಾರೆ’ ಎಂದರು.
2019ರ ಪುಲ್ವಾಮ ದಾಳಿಯಲ್ಲಿ 40 ಸಿಆರ್ಪಿಎಫ್ ಯೋಧರ ಸಾವಿಗೆ ಪ್ರಧಾನಿ ನರೇಂದ್ರ ಮೋದಿಯೇ ಹೊಣೆ ಎಂದೂ ಅವರು ದೂರಿದರು.