<p><strong>ಭಾವನಗರ (ಗುಜರಾತ್): </strong>ಇತರ ದೇಶಗಳ ಮೇಲಿನ ಪರಾವಲಂಬನೆಯೇ ಭಾರತದ ಅತಿದೊಡ್ಡ ಶತ್ರುವಾಗಿದೆ. ಭಾರತವು ಚಿಪ್ಸ್ನಿಂದ (ಸೆಮಿಕಂಡಕ್ಟರ್) ಹಿಡಿದು ಶಿಪ್ವರೆಗೆ ಎಲ್ಲವನ್ನೂ ತಾನೇ ತಯಾರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.</p><p>ಈ ಮೂಲಕ ಆತ್ಮನಿರ್ಭರ ಭಾರತದ ಕನಸನ್ನು ಸಾಕಾರಗೊಳಿಸಲು ಮತ್ತೊಮ್ಮೆ ಕರೆ ನೀಡಿದ್ದಾರೆ. </p><p>ಗುಜರಾತ್ನ ಭಾವನಗರದ ಗಾಂಧಿ ಮೈದಾನದಲ್ಲಿ ನಡೆದ ‘ಸಮುದ್ರ ಸೆ ಸಮೃದ್ಧಿ’ ಕಾರ್ಯಕ್ರಮದಲ್ಲಿ ಪ್ರಧಾನಿ ಪಾಲ್ಗೊಂಡು, ₹34,200 ಕೋಟಿ ವೆಚ್ಚದ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿದರು. </p>.H–1B ವೀಸಾ ಶುಲ್ಕ ಹೆಚ್ಚಿಸಿದ ಟ್ರಂಪ್: ಮೋದಿ ದುರ್ಬಲ ಪ್ರಧಾನಿ ಎಂದು ‘ಕೈ’ ಕಿಡಿ.‘ಕಾಂತಾರ ಅಧ್ಯಾಯ 1‘ ಟ್ರೇಲರ್ ಬಿಡುಗಡೆ ಮಾಡಲಿರುವ ಸೂಪರ್ ಸ್ಟಾರ್ಸ್ . <p>ಈ ವೇಳೆ ಮಾತನಾಡಿದ ಅವರು, ‘ವಾಸ್ತವದಲ್ಲಿ ಭಾರತಕ್ಕೆ ವಿಶ್ವದಲ್ಲೇ ಯಾರೂ ಶತ್ರುಗಳಿಲ್ಲ. ನಮ್ಮ ಒಂದೇ ಶತ್ರುವೆಂದರೆ ಅದು ಇತರ ದೇಶಗಳ ಮೇಲಿನ ಅವಲಂಬನೆಯಾಗಿದೆ. ನಾವು ಈ ಪರವಾಲಂಬನೆಯನ್ನು ಸೋಲಿಸಬೇಕಿದೆ. ಮತ್ತೊಬ್ಬರ ಮೇಲೆ ಅವಲಂಬಿತರಾದಷ್ಟೂ ಸೋಲಿನ ಪ್ರಮಾಣ ಹೆಚ್ಚಾಗುತ್ತಲೇ ಇರುತ್ತದೆ ಎಂಬುದನ್ನು ನಾವು ಅರ್ಥೈಸಿಕೊಳ್ಳಬೇಕು’ ಎಂದಿದ್ದಾರೆ. </p><p>ಅಲ್ಲದೇ, ವಿಶ್ವದ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿರುವ ಭಾರತವು ಶಾಂತಿ, ಸ್ಥಿರತೆ, ಸಮೃದ್ಧಿಗಾಗಿ ಸ್ವಾಲಂಬನೆ ಸಾಧಿಸುವ ಅಗತ್ಯವಿದೆ. ದೇಶದ ಎಲ್ಲ ಸಮಸ್ಯೆಗಳಿಗೂ ಇರುವ ಏಕೈಕ ಔಷಧ ಎಂದರೆ ಅದು ಆತ್ಮನಿರ್ಭರ ಭಾರತ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ.</p><p>ಪರಾವಲಂಬನೆಯಿಂದಾಗಿ ದೇಶ ಎದುರಿಸುತ್ತಿರುವ ಸಂಕಷ್ಟವನ್ನು ಪಟ್ಟಿ ಮಾಡಿದ ಮೋದಿ, ‘ವಿಶ್ವದ ಬೇರೆ–ಬೇರೆ ಭಾಗಕ್ಕೆ ನಮ್ಮ ಸರಕು ಸಾಗಿಸಲು ವಿದೇಶಿ ಕಂಪನಿಗಳಿಗೆ ವರ್ಷಂಪ್ರತಿ ₹6 ಲಕ್ಷ ಕೋಟಿ ಪಾವತಿಸುತ್ತಿದ್ದೇವೆ. ಇದು ನಮ್ಮ ರಕ್ಷಣಾ ಬಜೆಟ್ಗೆ ಸಮನಾಗಿದೆ. 50 ವರ್ಷಗಳ ಹಿಂದೆ ದೇಶದ ಶೇkw 40ರಷ್ಟು ವ್ಯಾಪಾರ –ವಹಿವಾಟು ಭಾರತ ನಿರ್ಮಿತ ಹಡಗುಗಳ ಮೂಲಕ ನಡೆಯುತ್ತಿತ್ತು. ಆದರೆ, ಈಗ ಇದು ಶೇ 5ಕ್ಕೆ ಇಳಿದಿದೆ’ ಎಂದೂ ಹೇಳಿದ್ದಾರೆ.</p> .PHOTOS | ತಂಗಿ ಜತೆ ಕಡಲ ತೀರದಲ್ಲಿ ಪೋಟೊ ಕ್ಲಿಕ್ಕಿಸಿಕೊಂಡ ನಟಿ ಸಾಯಿ ಪಲ್ಲವಿ .ಗಾಯಕ ಜುಬೀನ್ ಗರ್ಗ್ ಸಾವು: ತನಿಖೆಗೆ ಆದೇಶಿಸಿದ ಅಸ್ಸಾಂ ಸರ್ಕಾರ.ಅನಗತ್ಯ ಟೀಕೆಗಳಿಗೆ ಕಿವಿಗೊಡಬೇಡಿ: ಪಾಕ್ ಪಂದ್ಯಕ್ಕೂ ಮುನ್ನ ಟೀಂಗೆ ಯಾದವ್ ಸಲಹೆ.ಮಹಾರಾಷ್ಟ್ರದ ಲಾತೂರ್ನಲ್ಲಿ ಭಾರಿ ಮಳೆ: ಕೊಚ್ಚಿ ಹೋಗಿದ್ದ ಐವರ ಮೃತದೇಹಗಳು ಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾವನಗರ (ಗುಜರಾತ್): </strong>ಇತರ ದೇಶಗಳ ಮೇಲಿನ ಪರಾವಲಂಬನೆಯೇ ಭಾರತದ ಅತಿದೊಡ್ಡ ಶತ್ರುವಾಗಿದೆ. ಭಾರತವು ಚಿಪ್ಸ್ನಿಂದ (ಸೆಮಿಕಂಡಕ್ಟರ್) ಹಿಡಿದು ಶಿಪ್ವರೆಗೆ ಎಲ್ಲವನ್ನೂ ತಾನೇ ತಯಾರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.</p><p>ಈ ಮೂಲಕ ಆತ್ಮನಿರ್ಭರ ಭಾರತದ ಕನಸನ್ನು ಸಾಕಾರಗೊಳಿಸಲು ಮತ್ತೊಮ್ಮೆ ಕರೆ ನೀಡಿದ್ದಾರೆ. </p><p>ಗುಜರಾತ್ನ ಭಾವನಗರದ ಗಾಂಧಿ ಮೈದಾನದಲ್ಲಿ ನಡೆದ ‘ಸಮುದ್ರ ಸೆ ಸಮೃದ್ಧಿ’ ಕಾರ್ಯಕ್ರಮದಲ್ಲಿ ಪ್ರಧಾನಿ ಪಾಲ್ಗೊಂಡು, ₹34,200 ಕೋಟಿ ವೆಚ್ಚದ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿದರು. </p>.H–1B ವೀಸಾ ಶುಲ್ಕ ಹೆಚ್ಚಿಸಿದ ಟ್ರಂಪ್: ಮೋದಿ ದುರ್ಬಲ ಪ್ರಧಾನಿ ಎಂದು ‘ಕೈ’ ಕಿಡಿ.‘ಕಾಂತಾರ ಅಧ್ಯಾಯ 1‘ ಟ್ರೇಲರ್ ಬಿಡುಗಡೆ ಮಾಡಲಿರುವ ಸೂಪರ್ ಸ್ಟಾರ್ಸ್ . <p>ಈ ವೇಳೆ ಮಾತನಾಡಿದ ಅವರು, ‘ವಾಸ್ತವದಲ್ಲಿ ಭಾರತಕ್ಕೆ ವಿಶ್ವದಲ್ಲೇ ಯಾರೂ ಶತ್ರುಗಳಿಲ್ಲ. ನಮ್ಮ ಒಂದೇ ಶತ್ರುವೆಂದರೆ ಅದು ಇತರ ದೇಶಗಳ ಮೇಲಿನ ಅವಲಂಬನೆಯಾಗಿದೆ. ನಾವು ಈ ಪರವಾಲಂಬನೆಯನ್ನು ಸೋಲಿಸಬೇಕಿದೆ. ಮತ್ತೊಬ್ಬರ ಮೇಲೆ ಅವಲಂಬಿತರಾದಷ್ಟೂ ಸೋಲಿನ ಪ್ರಮಾಣ ಹೆಚ್ಚಾಗುತ್ತಲೇ ಇರುತ್ತದೆ ಎಂಬುದನ್ನು ನಾವು ಅರ್ಥೈಸಿಕೊಳ್ಳಬೇಕು’ ಎಂದಿದ್ದಾರೆ. </p><p>ಅಲ್ಲದೇ, ವಿಶ್ವದ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿರುವ ಭಾರತವು ಶಾಂತಿ, ಸ್ಥಿರತೆ, ಸಮೃದ್ಧಿಗಾಗಿ ಸ್ವಾಲಂಬನೆ ಸಾಧಿಸುವ ಅಗತ್ಯವಿದೆ. ದೇಶದ ಎಲ್ಲ ಸಮಸ್ಯೆಗಳಿಗೂ ಇರುವ ಏಕೈಕ ಔಷಧ ಎಂದರೆ ಅದು ಆತ್ಮನಿರ್ಭರ ಭಾರತ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ.</p><p>ಪರಾವಲಂಬನೆಯಿಂದಾಗಿ ದೇಶ ಎದುರಿಸುತ್ತಿರುವ ಸಂಕಷ್ಟವನ್ನು ಪಟ್ಟಿ ಮಾಡಿದ ಮೋದಿ, ‘ವಿಶ್ವದ ಬೇರೆ–ಬೇರೆ ಭಾಗಕ್ಕೆ ನಮ್ಮ ಸರಕು ಸಾಗಿಸಲು ವಿದೇಶಿ ಕಂಪನಿಗಳಿಗೆ ವರ್ಷಂಪ್ರತಿ ₹6 ಲಕ್ಷ ಕೋಟಿ ಪಾವತಿಸುತ್ತಿದ್ದೇವೆ. ಇದು ನಮ್ಮ ರಕ್ಷಣಾ ಬಜೆಟ್ಗೆ ಸಮನಾಗಿದೆ. 50 ವರ್ಷಗಳ ಹಿಂದೆ ದೇಶದ ಶೇkw 40ರಷ್ಟು ವ್ಯಾಪಾರ –ವಹಿವಾಟು ಭಾರತ ನಿರ್ಮಿತ ಹಡಗುಗಳ ಮೂಲಕ ನಡೆಯುತ್ತಿತ್ತು. ಆದರೆ, ಈಗ ಇದು ಶೇ 5ಕ್ಕೆ ಇಳಿದಿದೆ’ ಎಂದೂ ಹೇಳಿದ್ದಾರೆ.</p> .PHOTOS | ತಂಗಿ ಜತೆ ಕಡಲ ತೀರದಲ್ಲಿ ಪೋಟೊ ಕ್ಲಿಕ್ಕಿಸಿಕೊಂಡ ನಟಿ ಸಾಯಿ ಪಲ್ಲವಿ .ಗಾಯಕ ಜುಬೀನ್ ಗರ್ಗ್ ಸಾವು: ತನಿಖೆಗೆ ಆದೇಶಿಸಿದ ಅಸ್ಸಾಂ ಸರ್ಕಾರ.ಅನಗತ್ಯ ಟೀಕೆಗಳಿಗೆ ಕಿವಿಗೊಡಬೇಡಿ: ಪಾಕ್ ಪಂದ್ಯಕ್ಕೂ ಮುನ್ನ ಟೀಂಗೆ ಯಾದವ್ ಸಲಹೆ.ಮಹಾರಾಷ್ಟ್ರದ ಲಾತೂರ್ನಲ್ಲಿ ಭಾರಿ ಮಳೆ: ಕೊಚ್ಚಿ ಹೋಗಿದ್ದ ಐವರ ಮೃತದೇಹಗಳು ಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>