<p class="title"><strong>ರಾಯಪುರ</strong> :’ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಳೆದ ಆರು ವರ್ಷಗಳ ಆಡಳಿತದಲ್ಲಿ ಅಸಂಘಟಿತ ಆರ್ಥಿಕತೆಯನ್ನು ನಾಶಪಡಿಸಿದೆ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದಾರೆ.</p>.<p class="title">ಛತ್ತೀಸಗಡದ 22 ಜಿಲ್ಲಾ ಕೇಂದ್ರಗಳಲ್ಲಿ ಪಕ್ಷದ ಕಚೇರಿ ನಿರ್ಮಾಣದ ಶಂಕುಸ್ಥಾಪನೆ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು. ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p class="title">‘ರೈತರು, ಕಾರ್ಮಿಕರು ಮತ್ತು ಸಣ್ಣ ಉದ್ಯಮಿಗಳ ಮೇಲೆ ದೇಶದ ಆರ್ಥಿಕತೆ ಪರಿಣಾಮ ಬೀರಿದೆ. ಇದೇ ರೀತಿ ಮುಂದುವರಿದರೆ ಮುಂಬರುವ ದಿನಗಳಲ್ಲಿ ಉದ್ಯೋಗ ಸೃಷ್ಟಿ ಸಾಧ್ಯವಾಗುವುದಿಲ್ಲ’ ಎಂದು ಅವರು ತಿಳಿಸಿದ್ದಾರೆ.</p>.<p class="title">‘ಅಸಂಘಟಿತ ಆರ್ಥಿಕತೆಯು ದೇಶದಲ್ಲಿ ಶೇಕಡ 90 ರಷ್ಟು ಉದ್ಯೋಗವನ್ನು ಸೃಷ್ಟಿಸುತ್ತದೆ. ಆದರೆ, ನೋಟು ರದ್ದತಿ ಮತ್ತು ಜಿಎಸ್ಟಿ ಜಾರಿಯಲ್ಲಿನ ಲೋಪ ಇದಕ್ಕೆ ಹೊಡೆತ ನೀಡಿದೆ’ ಎಂದರು. </p>.<p class="title">‘ಪ್ರಧಾನಿ ನರೇಂದ್ರ ಮೋದಿ ಕಳೆದ ಆರು ವರ್ಷಗಳಿಂದ ಅಸಂಘಟಿತ ಆರ್ಥಿಕತೆಯ ಮೇಲೆ ದಾಳಿ ನಡೆಸುತ್ತಿದ್ದಾರೆ. ಈ ವಲಯದಲ್ಲಿರುವ ಹಣವನ್ನು ದೊಡ್ಡ ಉದ್ಯಮಿಗಳಿಗೆ ವರ್ಗಾಯಿಸುವ ಇರಾದೆ ಮೋದಿ ಅವರದ್ದಾಗಿದೆ’ ಎಂದು ಅವರು ದೂರಿದ್ದಾರೆ.</p>.<p class="title">‘ದೇಶದ ಅಭಿವೃದ್ಧಿಗೆಸಂಘಟಿತ ಮತ್ತು ಅಸಂಘಟಿತ ಆರ್ಥಿಕತೆಗಳ ನಡುವಿನ ಸಮತೋಲನವನ್ನು ಪುನಃ ಸ್ಥಾಪಿಸುವ ಅಗತ್ಯವಿದೆ’ ಎಂದೂ ಅವರು ಹೇಳಿದ್ದಾರೆ.</p>.<p class="title">‘ದೇಶದ ಅಸಂಘಟಿತ ಆರ್ಥಿಕತೆಯು ಸುರಕ್ಷಿತವಾಗಿದ್ದರೆ, ಪ್ರತಿಕೂಲ ಸಂದರ್ಭಗಳನ್ನು ನಿಭಾಯಿಸುವುದು ಸುಲಭವಾಗುತ್ತದೆ’ ಎಂದು ಅವರು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ರಾಯಪುರ</strong> :’ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಳೆದ ಆರು ವರ್ಷಗಳ ಆಡಳಿತದಲ್ಲಿ ಅಸಂಘಟಿತ ಆರ್ಥಿಕತೆಯನ್ನು ನಾಶಪಡಿಸಿದೆ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದಾರೆ.</p>.<p class="title">ಛತ್ತೀಸಗಡದ 22 ಜಿಲ್ಲಾ ಕೇಂದ್ರಗಳಲ್ಲಿ ಪಕ್ಷದ ಕಚೇರಿ ನಿರ್ಮಾಣದ ಶಂಕುಸ್ಥಾಪನೆ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು. ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p class="title">‘ರೈತರು, ಕಾರ್ಮಿಕರು ಮತ್ತು ಸಣ್ಣ ಉದ್ಯಮಿಗಳ ಮೇಲೆ ದೇಶದ ಆರ್ಥಿಕತೆ ಪರಿಣಾಮ ಬೀರಿದೆ. ಇದೇ ರೀತಿ ಮುಂದುವರಿದರೆ ಮುಂಬರುವ ದಿನಗಳಲ್ಲಿ ಉದ್ಯೋಗ ಸೃಷ್ಟಿ ಸಾಧ್ಯವಾಗುವುದಿಲ್ಲ’ ಎಂದು ಅವರು ತಿಳಿಸಿದ್ದಾರೆ.</p>.<p class="title">‘ಅಸಂಘಟಿತ ಆರ್ಥಿಕತೆಯು ದೇಶದಲ್ಲಿ ಶೇಕಡ 90 ರಷ್ಟು ಉದ್ಯೋಗವನ್ನು ಸೃಷ್ಟಿಸುತ್ತದೆ. ಆದರೆ, ನೋಟು ರದ್ದತಿ ಮತ್ತು ಜಿಎಸ್ಟಿ ಜಾರಿಯಲ್ಲಿನ ಲೋಪ ಇದಕ್ಕೆ ಹೊಡೆತ ನೀಡಿದೆ’ ಎಂದರು. </p>.<p class="title">‘ಪ್ರಧಾನಿ ನರೇಂದ್ರ ಮೋದಿ ಕಳೆದ ಆರು ವರ್ಷಗಳಿಂದ ಅಸಂಘಟಿತ ಆರ್ಥಿಕತೆಯ ಮೇಲೆ ದಾಳಿ ನಡೆಸುತ್ತಿದ್ದಾರೆ. ಈ ವಲಯದಲ್ಲಿರುವ ಹಣವನ್ನು ದೊಡ್ಡ ಉದ್ಯಮಿಗಳಿಗೆ ವರ್ಗಾಯಿಸುವ ಇರಾದೆ ಮೋದಿ ಅವರದ್ದಾಗಿದೆ’ ಎಂದು ಅವರು ದೂರಿದ್ದಾರೆ.</p>.<p class="title">‘ದೇಶದ ಅಭಿವೃದ್ಧಿಗೆಸಂಘಟಿತ ಮತ್ತು ಅಸಂಘಟಿತ ಆರ್ಥಿಕತೆಗಳ ನಡುವಿನ ಸಮತೋಲನವನ್ನು ಪುನಃ ಸ್ಥಾಪಿಸುವ ಅಗತ್ಯವಿದೆ’ ಎಂದೂ ಅವರು ಹೇಳಿದ್ದಾರೆ.</p>.<p class="title">‘ದೇಶದ ಅಸಂಘಟಿತ ಆರ್ಥಿಕತೆಯು ಸುರಕ್ಷಿತವಾಗಿದ್ದರೆ, ಪ್ರತಿಕೂಲ ಸಂದರ್ಭಗಳನ್ನು ನಿಭಾಯಿಸುವುದು ಸುಲಭವಾಗುತ್ತದೆ’ ಎಂದು ಅವರು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>