<p><strong>ನವದೆಹಲಿ</strong>: ಕೋವಿಡ್ ವಿರುದ್ಧ ಮೋದಿ ಸರ್ಕಾರದ 'ಯೋಜಿತ ಹೋರಾಟ'ವು ಭಾರತವನ್ನು ಪ್ರಪಾತಕ್ಕೆ ತಳ್ಳಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.</p>.<p>ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಅವರು, 'ಕೋವಿಡ್ ವಿರುದ್ಧ ಮೋದಿ ಸರ್ಕಾರದ ಯೋಜಿತ ಹೋರಾಟವು ಭಾರತವನ್ನು ಪ್ರಪಾತಕ್ಕೆ ತಳ್ಳಿದೆ.<br />1. ಶೇ.24ರಷ್ಟು ಐತಿಹಾಸಿಕ ಜಿಡಿಪಿ ಕುಸಿತ<br />2. 12 ಕೋಟಿ ಉದ್ಯೋಗಗಳ ನಷ್ಟ<br />3. ₹15.5 ಲಕ್ಷ ಕೋಟಿ ಹೆಚ್ಚುವರಿ ಒತ್ತಡದ ಸಾಲ<br />4. ಜಾಗತಿಕವಾಗಿ ಅತಿ ಹೆಚ್ಚು ದೈನಂದಿನ ಕೋವಿಡ್ ಪ್ರಕರಣಗಳು ಮತ್ತು ಸಾವುಗಳು<br />ಆದರೆ, ಭಾರತ ಸರ್ಕಾರ ಮತ್ತು ಮಾಧ್ಯಮಗಳಿಗೆ ಮಾತ್ರ ಎಲ್ಲವೂ ಚೆನ್ನಾಗಿದೆ' ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ.</p>.<p>'ಕೊರೊನಾ ವೈರಸ್ ನಮಗೆ ದೊಡ್ಡ ಸವಾಲಾಗಿದೆ. ಆದರೆ, ಅದರ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಯೋಜಿತ ಹೋರಾಟ ನಡೆಯುತ್ತಿದೆ ಮತ್ತು ನಮ್ಮ ಪ್ರಯತ್ನಗಳನ್ನು ಇಡೀ ಜಗತ್ತು ಗುರುತಿಸುತ್ತಿದೆ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೋವಿಡ್ ವಿರುದ್ಧ ಮೋದಿ ಸರ್ಕಾರದ 'ಯೋಜಿತ ಹೋರಾಟ'ವು ಭಾರತವನ್ನು ಪ್ರಪಾತಕ್ಕೆ ತಳ್ಳಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.</p>.<p>ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಅವರು, 'ಕೋವಿಡ್ ವಿರುದ್ಧ ಮೋದಿ ಸರ್ಕಾರದ ಯೋಜಿತ ಹೋರಾಟವು ಭಾರತವನ್ನು ಪ್ರಪಾತಕ್ಕೆ ತಳ್ಳಿದೆ.<br />1. ಶೇ.24ರಷ್ಟು ಐತಿಹಾಸಿಕ ಜಿಡಿಪಿ ಕುಸಿತ<br />2. 12 ಕೋಟಿ ಉದ್ಯೋಗಗಳ ನಷ್ಟ<br />3. ₹15.5 ಲಕ್ಷ ಕೋಟಿ ಹೆಚ್ಚುವರಿ ಒತ್ತಡದ ಸಾಲ<br />4. ಜಾಗತಿಕವಾಗಿ ಅತಿ ಹೆಚ್ಚು ದೈನಂದಿನ ಕೋವಿಡ್ ಪ್ರಕರಣಗಳು ಮತ್ತು ಸಾವುಗಳು<br />ಆದರೆ, ಭಾರತ ಸರ್ಕಾರ ಮತ್ತು ಮಾಧ್ಯಮಗಳಿಗೆ ಮಾತ್ರ ಎಲ್ಲವೂ ಚೆನ್ನಾಗಿದೆ' ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ.</p>.<p>'ಕೊರೊನಾ ವೈರಸ್ ನಮಗೆ ದೊಡ್ಡ ಸವಾಲಾಗಿದೆ. ಆದರೆ, ಅದರ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಯೋಜಿತ ಹೋರಾಟ ನಡೆಯುತ್ತಿದೆ ಮತ್ತು ನಮ್ಮ ಪ್ರಯತ್ನಗಳನ್ನು ಇಡೀ ಜಗತ್ತು ಗುರುತಿಸುತ್ತಿದೆ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>