<p><strong>ಗಯಾಜಿ(ಬಿಹಾರ):</strong> ಪ್ರಧಾನಿ ನರೇಂದ್ರ ಮೋದಿಯವರು ಬಿಹಾರದಲ್ಲಿ ₹ 6,880 ಕೋಟಿ ಮೌಲ್ಯದ ಯೋಜನೆಗಳಿಗೆ ಶುಕ್ರವಾರ ಚಾಲನೆ ನೀಡಿದ್ದಾರೆ. </p><p>ಬಿಹಾರದ ಗಯಾಜಿ ಬಳಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳನ್ನು ಲೋಕಾರ್ಪಣೆ ಮಾಡಿದ್ದಾರೆ. </p><p>‘ಕಾರ್ಯಕ್ರಮದಲ್ಲಿ ಬಕ್ಸಾರ್ ಉಷ್ಣ ವಿದ್ಯುತ್ ಸ್ಥಾವರ ಯೋಜನೆಗೆ ಚಾಲನೆ ನೀಡಿದ್ದು, 660 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯವಿರುವ ಈ ಯೋಜನೆಯಿಂದ ಬಿಹಾರದ ವಿದ್ಯುತ್ ಸಮಸ್ಯೆಗೆ ಪರಿಹಾರ ಸಿಗಲಿದೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.</p><p>ಇದೇ ವೇಳೆ ಮುಜಫರ್ಪುರ್ನಲ್ಲಿನ ಹೋಮಿ ಬಾಬಾ ಕ್ಯಾನ್ಸರ್ ಆಸ್ಪತ್ರೆ ಹಾಗೂ ಸಂಶೋಧನಾ ವಿಭಾಗ, ಮುಂಗೇರ್ನಲ್ಲಿ ನಮಾಮಿ ಗಂಗಾ ಯೋಜನೆ ಅಡಿಯಲ್ಲಿ ₹520 ಕೋಟಿ ವೆಚ್ಚದ ಒಳಚರಂಡಿ ಸಂಸ್ಕರಣಾ ಘಟಕ(ಎಸ್ಟಿಪಿ), ₹ 1,260 ಕೋಟಿ ಮೊತ್ತದ ನಗರೀಕರಣ ಯೋಜನೆಗಳು ಮತ್ತು ಎರಡು ಅಮೃತ್ ಭಾರತ ವೇಗದ ರೈಲುಗಳಿಗೆ ಚಾಲನೆ ನೀಡಿದ್ದಾರೆ. </p><p>ಕಾರ್ಯಕ್ರಮದಲ್ಲಿ ಬಿಹಾರ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ನಿತೀಶ್ ಕುಮಾರ್, ಡಿಸಿಎಂ ಸಮರ್ಥ್ ಚೌದರಿ ಹಾಗೂ ಕೇಂದ್ರ ಸಚಿವರು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಯಾಜಿ(ಬಿಹಾರ):</strong> ಪ್ರಧಾನಿ ನರೇಂದ್ರ ಮೋದಿಯವರು ಬಿಹಾರದಲ್ಲಿ ₹ 6,880 ಕೋಟಿ ಮೌಲ್ಯದ ಯೋಜನೆಗಳಿಗೆ ಶುಕ್ರವಾರ ಚಾಲನೆ ನೀಡಿದ್ದಾರೆ. </p><p>ಬಿಹಾರದ ಗಯಾಜಿ ಬಳಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳನ್ನು ಲೋಕಾರ್ಪಣೆ ಮಾಡಿದ್ದಾರೆ. </p><p>‘ಕಾರ್ಯಕ್ರಮದಲ್ಲಿ ಬಕ್ಸಾರ್ ಉಷ್ಣ ವಿದ್ಯುತ್ ಸ್ಥಾವರ ಯೋಜನೆಗೆ ಚಾಲನೆ ನೀಡಿದ್ದು, 660 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯವಿರುವ ಈ ಯೋಜನೆಯಿಂದ ಬಿಹಾರದ ವಿದ್ಯುತ್ ಸಮಸ್ಯೆಗೆ ಪರಿಹಾರ ಸಿಗಲಿದೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.</p><p>ಇದೇ ವೇಳೆ ಮುಜಫರ್ಪುರ್ನಲ್ಲಿನ ಹೋಮಿ ಬಾಬಾ ಕ್ಯಾನ್ಸರ್ ಆಸ್ಪತ್ರೆ ಹಾಗೂ ಸಂಶೋಧನಾ ವಿಭಾಗ, ಮುಂಗೇರ್ನಲ್ಲಿ ನಮಾಮಿ ಗಂಗಾ ಯೋಜನೆ ಅಡಿಯಲ್ಲಿ ₹520 ಕೋಟಿ ವೆಚ್ಚದ ಒಳಚರಂಡಿ ಸಂಸ್ಕರಣಾ ಘಟಕ(ಎಸ್ಟಿಪಿ), ₹ 1,260 ಕೋಟಿ ಮೊತ್ತದ ನಗರೀಕರಣ ಯೋಜನೆಗಳು ಮತ್ತು ಎರಡು ಅಮೃತ್ ಭಾರತ ವೇಗದ ರೈಲುಗಳಿಗೆ ಚಾಲನೆ ನೀಡಿದ್ದಾರೆ. </p><p>ಕಾರ್ಯಕ್ರಮದಲ್ಲಿ ಬಿಹಾರ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ನಿತೀಶ್ ಕುಮಾರ್, ಡಿಸಿಎಂ ಸಮರ್ಥ್ ಚೌದರಿ ಹಾಗೂ ಕೇಂದ್ರ ಸಚಿವರು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>