<p><strong>ಲಖನೌ:</strong> ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ದೂರದೃಷ್ಟಿಯುಳ್ಳ ಹಾಗೂ ಜನಪ್ರಿಯ ನಾಯಕರಲ್ಲೊಬ್ಬರಾಗಿದ್ದಾರೆ. ಅವರ ನಾಯಕತ್ವದಲ್ಲಿ ಭಾರತವು ಬೇರೆ ದೇಶಗಳಿಗೂ ಮಾದರಿಯಾಗುವಂತೆ ಬದಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಹೇಳಿದ್ದಾರೆ.</p><p>ಪ್ರಧಾನಿ ಮೋದಿ ಅವರ 75ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ. ಬಿಜೆಪಿಯು ಸೆ.17 ರಿಂದ ಅ.2 ರವರೆಗೆ ದೇಶದಾದ್ಯಂತ ‘ಸೇವಾ ಪಖವಾಡಾ’ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರಲ್ಲಿ ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. </p><p>‘ಸೇವಾ ಪಖವಾಡಾ’ ಕಾರ್ಯಕ್ರಮವು ಪ್ರಧಾನಿ ಮೋದಿ ಅವರ ಜನ್ಮದಿನದಂದೇ ಆರಂಭಗೊಂಡಿರುವುದು ನಮ್ಮ ಪುಣ್ಯ. ಕಳೆದ 11 ವರ್ಷಗಳಲ್ಲಿ ಮೋದಿ ಸರ್ಕಾರವು ಹಣಕಾಸು, ಶಿಕ್ಷಣ, ಆರೋಗ್ಯ, ಕೃಷಿ, ಗ್ರಾಮಾಭಿವೃದ್ಧಿ ಸೇರಿದಂತೆ ಎಲ್ಲಾ ವಿಭಾಗಗಳಲ್ಲೂ ಅಭೂತಪೂರ್ವ ದಾಖಲೆ ಮಾಡಿದೆ ಎಂದು ಯೋಗಿ ತಿಳಿಸಿದ್ದಾರೆ. </p><p>ಪ್ರಧಾನಿ ಮೋದಿ ಅವರ ಅವಧಿಯಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರ, ಕಾಶಿ ವಿಶ್ವನಾಥ ಕಾರಿಡಾರ್, ಕೇದಾರನಾಥ ಹಾಗೂ ಬದರಿನಾಥಗಳ ಅಭಿವೃದ್ದಿ ಹಾಗೂ ಉಜ್ಜಯನಿಯಲ್ಲಿ ಮಹಾಕಾಲ್ ಯೋಜನೆಯ ಮೂಲಕ ಭಾರತೀಯ ಸಂಸ್ಕೃತಿ ಹಾಗೂ ಧಾರ್ಮಿಕ ಪರಂಪರೆಯನ್ನು ಮರಳಿ ಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ.</p><p>ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್, ಬ್ರಿಜೇಶ್ ಪಾಠಕ್ ಹಾಗೂ ಬಿಜೆಪಿ ನಾಯಕರು ಮತ್ತು ಸಚಿವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ದೂರದೃಷ್ಟಿಯುಳ್ಳ ಹಾಗೂ ಜನಪ್ರಿಯ ನಾಯಕರಲ್ಲೊಬ್ಬರಾಗಿದ್ದಾರೆ. ಅವರ ನಾಯಕತ್ವದಲ್ಲಿ ಭಾರತವು ಬೇರೆ ದೇಶಗಳಿಗೂ ಮಾದರಿಯಾಗುವಂತೆ ಬದಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಹೇಳಿದ್ದಾರೆ.</p><p>ಪ್ರಧಾನಿ ಮೋದಿ ಅವರ 75ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ. ಬಿಜೆಪಿಯು ಸೆ.17 ರಿಂದ ಅ.2 ರವರೆಗೆ ದೇಶದಾದ್ಯಂತ ‘ಸೇವಾ ಪಖವಾಡಾ’ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರಲ್ಲಿ ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. </p><p>‘ಸೇವಾ ಪಖವಾಡಾ’ ಕಾರ್ಯಕ್ರಮವು ಪ್ರಧಾನಿ ಮೋದಿ ಅವರ ಜನ್ಮದಿನದಂದೇ ಆರಂಭಗೊಂಡಿರುವುದು ನಮ್ಮ ಪುಣ್ಯ. ಕಳೆದ 11 ವರ್ಷಗಳಲ್ಲಿ ಮೋದಿ ಸರ್ಕಾರವು ಹಣಕಾಸು, ಶಿಕ್ಷಣ, ಆರೋಗ್ಯ, ಕೃಷಿ, ಗ್ರಾಮಾಭಿವೃದ್ಧಿ ಸೇರಿದಂತೆ ಎಲ್ಲಾ ವಿಭಾಗಗಳಲ್ಲೂ ಅಭೂತಪೂರ್ವ ದಾಖಲೆ ಮಾಡಿದೆ ಎಂದು ಯೋಗಿ ತಿಳಿಸಿದ್ದಾರೆ. </p><p>ಪ್ರಧಾನಿ ಮೋದಿ ಅವರ ಅವಧಿಯಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರ, ಕಾಶಿ ವಿಶ್ವನಾಥ ಕಾರಿಡಾರ್, ಕೇದಾರನಾಥ ಹಾಗೂ ಬದರಿನಾಥಗಳ ಅಭಿವೃದ್ದಿ ಹಾಗೂ ಉಜ್ಜಯನಿಯಲ್ಲಿ ಮಹಾಕಾಲ್ ಯೋಜನೆಯ ಮೂಲಕ ಭಾರತೀಯ ಸಂಸ್ಕೃತಿ ಹಾಗೂ ಧಾರ್ಮಿಕ ಪರಂಪರೆಯನ್ನು ಮರಳಿ ಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ.</p><p>ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್, ಬ್ರಿಜೇಶ್ ಪಾಠಕ್ ಹಾಗೂ ಬಿಜೆಪಿ ನಾಯಕರು ಮತ್ತು ಸಚಿವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>