<p><strong>ಇಂಫಾಲ್:</strong> ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆ ಇದ್ದು, ಇಂಫಾಲ್ ಮತ್ತು ಚುರಾಚಾಂದ್ಪುರ ಜಿಲ್ಲಾ ಕೇಂದ್ರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಇಂಫಾಲ್ನ ಕಂಗಲಾ ಕೋಟೆ ಮತ್ತು ಚುರಾಚಾಂದ್ಪುರದ ಶಾಂತಿ ಮೈದಾನದಲ್ಲಿ ಭಾರಿ ಸಂಖ್ಯೆಯ ಕೇಂದ್ರ ಮತ್ತು ರಾಜ್ಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲಿ ಪ್ರಧಾನ ಮಂತ್ರಿಯ ಕಾರ್ಯಕ್ರಮಕ್ಕಾಗಿ ಭವ್ಯ ವೇದಿಕೆಯನ್ನು ನಿರ್ಮಿಸಲಾಗುತ್ತಿದೆ. </p>.<p class="title">ಪ್ರಧಾನಿಯು ಮಿಜೋರಾಂ ಮೂಲಕ ಮಣಿಪುರಕ್ಕೆ ಆಗಮಿಸುವ ಸಾಧ್ಯತೆಯಿದೆ. ಈ ಬಗ್ಗೆ ಕೇಂದ್ರ ಸರ್ಕಾರವಾಗಲಿ, ರಾಜ್ಯದ ಆಡಳಿತವಾಗಲಿ ಯಾವುದೇ ಅಧೀಕೃತ ಹೇಳಿಕೆಯನ್ನು ನೀಡಿಲ್ಲ. ಆದಾಗ್ಯೂ, ಅವರ ಭೇಟಿಗಾಗಿ ರಾಜ್ಯದಲ್ಲಿ ಹಲವು ಪೂರ್ವಸಿದ್ಧತೆಗಳನ್ನು ಮಾಡಲಾಗುತ್ತಿದೆ. </p>.<p class="title">2023ರಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಕೋಮುಗಲಭೆ ಭುಗಿಲೆದ್ದ ನಂತರ, ಪ್ರಧಾನಿ ನೀಡುತ್ತಿರುವ ಮೊದಲ ಭೇಟಿ ಇದಾಗಲಿದೆ. ಹಿಂಸಾಚಾರದಿಂದಾಗಿ ಸುಮಾರು 250 ಜನರು ಮೃತಪಟ್ಟಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. </p>.ಮಣಿಪುರ | ಉನ್ನತಾಧಿಕಾರಿಗಳ ಜತೆ ರಾಜ್ಯಪಾಲ ಸಭೆ: ಪ್ರಧಾನಿ ಮೋದಿ ಭೇಟಿ ಸಾಧ್ಯತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್:</strong> ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆ ಇದ್ದು, ಇಂಫಾಲ್ ಮತ್ತು ಚುರಾಚಾಂದ್ಪುರ ಜಿಲ್ಲಾ ಕೇಂದ್ರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಇಂಫಾಲ್ನ ಕಂಗಲಾ ಕೋಟೆ ಮತ್ತು ಚುರಾಚಾಂದ್ಪುರದ ಶಾಂತಿ ಮೈದಾನದಲ್ಲಿ ಭಾರಿ ಸಂಖ್ಯೆಯ ಕೇಂದ್ರ ಮತ್ತು ರಾಜ್ಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲಿ ಪ್ರಧಾನ ಮಂತ್ರಿಯ ಕಾರ್ಯಕ್ರಮಕ್ಕಾಗಿ ಭವ್ಯ ವೇದಿಕೆಯನ್ನು ನಿರ್ಮಿಸಲಾಗುತ್ತಿದೆ. </p>.<p class="title">ಪ್ರಧಾನಿಯು ಮಿಜೋರಾಂ ಮೂಲಕ ಮಣಿಪುರಕ್ಕೆ ಆಗಮಿಸುವ ಸಾಧ್ಯತೆಯಿದೆ. ಈ ಬಗ್ಗೆ ಕೇಂದ್ರ ಸರ್ಕಾರವಾಗಲಿ, ರಾಜ್ಯದ ಆಡಳಿತವಾಗಲಿ ಯಾವುದೇ ಅಧೀಕೃತ ಹೇಳಿಕೆಯನ್ನು ನೀಡಿಲ್ಲ. ಆದಾಗ್ಯೂ, ಅವರ ಭೇಟಿಗಾಗಿ ರಾಜ್ಯದಲ್ಲಿ ಹಲವು ಪೂರ್ವಸಿದ್ಧತೆಗಳನ್ನು ಮಾಡಲಾಗುತ್ತಿದೆ. </p>.<p class="title">2023ರಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಕೋಮುಗಲಭೆ ಭುಗಿಲೆದ್ದ ನಂತರ, ಪ್ರಧಾನಿ ನೀಡುತ್ತಿರುವ ಮೊದಲ ಭೇಟಿ ಇದಾಗಲಿದೆ. ಹಿಂಸಾಚಾರದಿಂದಾಗಿ ಸುಮಾರು 250 ಜನರು ಮೃತಪಟ್ಟಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. </p>.ಮಣಿಪುರ | ಉನ್ನತಾಧಿಕಾರಿಗಳ ಜತೆ ರಾಜ್ಯಪಾಲ ಸಭೆ: ಪ್ರಧಾನಿ ಮೋದಿ ಭೇಟಿ ಸಾಧ್ಯತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>