‘ಸದನದಲ್ಲಿ ಸಭಾಧ್ಯಕ್ಷರ ಪೀಠದ ಮುಂದೆ ಬಂದು ಧರಣಿ ನಡೆಸದೇ ಇರುವ ಮೂಲಕವೂ ಜನರ ಹೃದಯಗಳನ್ನು ಗೆಲ್ಲಬಹುದು. ಇಂದು ನಾನು ಎರಡು ಪಕ್ಷಗಳನ್ನು ಶ್ಲಾಘಿಸಲು ಬಯಸುತ್ತೇನೆ, ಅವುಗಳೆಂದರೆ ಎನ್ಸಿಪಿ ಮತ್ತು ಬಿಜೆಡಿ. ಈ ಪಕ್ಷಗಳುಸಂಸದೀಯ ಆದರ್ಶಗಳಿಗೆ ಬದ್ಧವಾಗಿವೆ. ಈ ಪಕ್ಷಗಳ ಸದಸ್ಯರು ಎಂದಿಗೂಸಭಾಧ್ಯಕ್ಷರ ಪೀಠದ ಮುಂದೆ ಬಂದು ಧರಣಿ ನಡೆಸಿಲ್ಲ. ಆದರೂ ಅವರು ತಮ್ಮ ವಿಷಯಗಳನ್ನು ಪರಿಣಾಮಕಾರಿಯಾಗಿ ಮಂಡಿಸಿದ್ದಾರೆ. ಇದರಿಂದ ನನ್ನ ಬಿಜೆಪಿಯೂ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳೂ ಪಾಠ ಕಲಿಯಬೇಕು’ ಎಂದು ಮೋದಿ ಹೇಳಿದ್ದಾರೆ.