<p><strong>ನವದೆಹಲಿ:</strong> ಕರ್ನಾಟಕದ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ವಿದೇಶಗಳಿಗೆ ರವಾನೆ ಮಾಡುವ ಮೂಲಕ ಗಮನಸೆಳೆಯುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ, ಮನ್ ಕಿ ಬಾತ್ನಲ್ಲಿ ಹೇಳಿದ್ದಾರೆ.</p><p>ಕರ್ನಾಟಕದ ನಂಜನಗೂಡಿನ ಬಾಳೆಹಣ್ಣು, ಮೈಸೂರಿನ ವೀಳ್ಯೆದೆಲೆ ಹಾಗೂ ಇಂಡಿಯಲ್ಲಿ ಬೆಳೆಯುವ ನಿಂಬೆಹಣ್ಣುಗಳನ್ನು ಅಲ್ಲಿನ ರೈತರು ಮಾಲ್ಡೀವ್ಸ್ ಸೇರಿದಂತೆ ಹಲವು ದೇಶಗಳಿಗೆ ರಪ್ತು ಮಾಡುತ್ತಿದ್ದಾರೆ. ಆ ಉತ್ಪನ್ನಗಳು ರುಚಿಯ ಜತೆ ಗುಣಮಟ್ಟವನ್ನು ಕೂಡ ಹೊಂದಿವೆ. ಅವುಗಳಿಗೆ ಜಿಐ ಟ್ಯಾಗ್ ಕೂಡ ಇದೆ ಎಂದು ತಿಳಿಸಿದ್ದಾರೆ.</p><p>ಇಂದಿನ ರೈತರು ಗುಣಮಟ್ಟದ ಕೃಷಿಯ ಜತೆ ಉತ್ಪನ್ನದ ಪ್ರಮಾಣವನ್ನು ಕೂಡ ಹೆಚ್ಚಿಸುವ ಕೆಲಸ ಮಾಡುತ್ತಿದ್ದಾರೆ. ನೆಲ, ಜಲವನ್ನು ಸರಿಯಾಗಿ ಉಪಯೋಗಿಸಿಕೊಳ್ಳುವ ಮೂಲಕ ಉತ್ತಮ ಆದಾಯವನ್ನು ಕೂಡ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ. </p><p>ಒಡಿಶಾದ ಹಿರೋಡ್ ಪಟೇಲ್ ಎನ್ನುವ ಯುವ ಕೃಷಿಕನೊಬ್ಬ, ಹೊಸ ಮಾದರಿಯ ಕೃಷಿಯ ಮೂಲಕ ಗಮನ ಸೆಳೆಯುತ್ತಿದ್ದಾನೆ. ಕೃಷಿ ಹೊಂಡದಲ್ಲಿ ತರಕಾರಿ ಬೆಳೆದರೆ, ಅದರ ಸುತ್ತ ಬಾಳೆಹಣ್ಣು, ತೆಂಗನ್ನು ಬೆಳೆಯುತ್ತಿದ್ದಾನೆ. ಆ ಹೊಂಡದಲ್ಲೇ ಮೀನು ಸಾಕಾಣಿಕೆಯನ್ನು ಕೂಡ ಮಾಡುತ್ತಿದ್ದಾನೆ. ಅದನ್ನು ವೀಕ್ಷಿಸಲು ದೂರದೂರಿನಿಂದ ರೈತರು ಅವರ ತೋಟಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. </p>.<p>ಕೇರಳದ ತ್ರಿಶೂರ್ನ ಹಳ್ಳಿಯೊಂದರಲ್ಲಿ 570 ವಿವಿಧ ತಳಿಯ ಭತ್ತವನ್ನು ಯಶಸ್ವಿಯಾಗಿ ಬೆಳೆಯುವ ಮೂಲಕ ಅಲ್ಲಿನ ರೈತರು ಗಮನಸೆಳೆದಿದ್ದಾರೆ ಎಂದು ಹೇಳಿದ್ದಾರೆ. </p><p>ಕೃಷಿ ಉತ್ಪನ್ನಗಳ ರಫ್ತು ಹೆಚ್ಚಾಗುತ್ತಿರುವುದು ದೇಶದ ರೈತರ ಪರಿಶ್ರಮವನ್ನು ತೋರಿಸುತ್ತದೆ. ಅವರು ಮಣ್ಣಿನ ನಿಜವಾದ ಆರಾಧಕರು. ಅವರು ಮಣ್ಣನ್ನು ಚಿನ್ನವಾಗಿಸುವ ಸಾಮಥ್ಯ ಹೊಂದಿದ್ದಾರೆ ಎಂದು ಹೇಳಿದ್ದಾರೆ. </p><p>ಭಾರತವು ಪ್ರತಿವರ್ಷ 150 ಮಿಲಿಯನ್ ಟನ್ ಭತ್ತವನ್ನು ಉತ್ಪಾದಿಸುವ ಮೂಲಕ ಜಗತ್ತಿನ ಅತಿದೊಡ್ಡ ಭತ್ತ ಬೆಳೆಯುವ ದೇಶವಾಗಿದೆ. ಇದರಿಂದ ದೇಶದ ಅವಶ್ಯಕತೆಯನ್ನು ಮೀರಿ ನಾವು ಜಾಗತಿಕವಾಗಿ ರಫ್ತು ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.</p><p>ಹಲವು ರೈತರು ಸಂಪ್ರದಾಯಿಕ ಕೃಷಿಯ ಜತೆ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಮೂಲಕ ಕೃಷಿ ಉತ್ಪನ್ನಗಳ ಮಾರುಕಟ್ಟೆಯನ್ನು ವಿಸ್ತರಿಸುತ್ತಿದ್ದಾರೆ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕರ್ನಾಟಕದ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ವಿದೇಶಗಳಿಗೆ ರವಾನೆ ಮಾಡುವ ಮೂಲಕ ಗಮನಸೆಳೆಯುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ, ಮನ್ ಕಿ ಬಾತ್ನಲ್ಲಿ ಹೇಳಿದ್ದಾರೆ.</p><p>ಕರ್ನಾಟಕದ ನಂಜನಗೂಡಿನ ಬಾಳೆಹಣ್ಣು, ಮೈಸೂರಿನ ವೀಳ್ಯೆದೆಲೆ ಹಾಗೂ ಇಂಡಿಯಲ್ಲಿ ಬೆಳೆಯುವ ನಿಂಬೆಹಣ್ಣುಗಳನ್ನು ಅಲ್ಲಿನ ರೈತರು ಮಾಲ್ಡೀವ್ಸ್ ಸೇರಿದಂತೆ ಹಲವು ದೇಶಗಳಿಗೆ ರಪ್ತು ಮಾಡುತ್ತಿದ್ದಾರೆ. ಆ ಉತ್ಪನ್ನಗಳು ರುಚಿಯ ಜತೆ ಗುಣಮಟ್ಟವನ್ನು ಕೂಡ ಹೊಂದಿವೆ. ಅವುಗಳಿಗೆ ಜಿಐ ಟ್ಯಾಗ್ ಕೂಡ ಇದೆ ಎಂದು ತಿಳಿಸಿದ್ದಾರೆ.</p><p>ಇಂದಿನ ರೈತರು ಗುಣಮಟ್ಟದ ಕೃಷಿಯ ಜತೆ ಉತ್ಪನ್ನದ ಪ್ರಮಾಣವನ್ನು ಕೂಡ ಹೆಚ್ಚಿಸುವ ಕೆಲಸ ಮಾಡುತ್ತಿದ್ದಾರೆ. ನೆಲ, ಜಲವನ್ನು ಸರಿಯಾಗಿ ಉಪಯೋಗಿಸಿಕೊಳ್ಳುವ ಮೂಲಕ ಉತ್ತಮ ಆದಾಯವನ್ನು ಕೂಡ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ. </p><p>ಒಡಿಶಾದ ಹಿರೋಡ್ ಪಟೇಲ್ ಎನ್ನುವ ಯುವ ಕೃಷಿಕನೊಬ್ಬ, ಹೊಸ ಮಾದರಿಯ ಕೃಷಿಯ ಮೂಲಕ ಗಮನ ಸೆಳೆಯುತ್ತಿದ್ದಾನೆ. ಕೃಷಿ ಹೊಂಡದಲ್ಲಿ ತರಕಾರಿ ಬೆಳೆದರೆ, ಅದರ ಸುತ್ತ ಬಾಳೆಹಣ್ಣು, ತೆಂಗನ್ನು ಬೆಳೆಯುತ್ತಿದ್ದಾನೆ. ಆ ಹೊಂಡದಲ್ಲೇ ಮೀನು ಸಾಕಾಣಿಕೆಯನ್ನು ಕೂಡ ಮಾಡುತ್ತಿದ್ದಾನೆ. ಅದನ್ನು ವೀಕ್ಷಿಸಲು ದೂರದೂರಿನಿಂದ ರೈತರು ಅವರ ತೋಟಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. </p>.<p>ಕೇರಳದ ತ್ರಿಶೂರ್ನ ಹಳ್ಳಿಯೊಂದರಲ್ಲಿ 570 ವಿವಿಧ ತಳಿಯ ಭತ್ತವನ್ನು ಯಶಸ್ವಿಯಾಗಿ ಬೆಳೆಯುವ ಮೂಲಕ ಅಲ್ಲಿನ ರೈತರು ಗಮನಸೆಳೆದಿದ್ದಾರೆ ಎಂದು ಹೇಳಿದ್ದಾರೆ. </p><p>ಕೃಷಿ ಉತ್ಪನ್ನಗಳ ರಫ್ತು ಹೆಚ್ಚಾಗುತ್ತಿರುವುದು ದೇಶದ ರೈತರ ಪರಿಶ್ರಮವನ್ನು ತೋರಿಸುತ್ತದೆ. ಅವರು ಮಣ್ಣಿನ ನಿಜವಾದ ಆರಾಧಕರು. ಅವರು ಮಣ್ಣನ್ನು ಚಿನ್ನವಾಗಿಸುವ ಸಾಮಥ್ಯ ಹೊಂದಿದ್ದಾರೆ ಎಂದು ಹೇಳಿದ್ದಾರೆ. </p><p>ಭಾರತವು ಪ್ರತಿವರ್ಷ 150 ಮಿಲಿಯನ್ ಟನ್ ಭತ್ತವನ್ನು ಉತ್ಪಾದಿಸುವ ಮೂಲಕ ಜಗತ್ತಿನ ಅತಿದೊಡ್ಡ ಭತ್ತ ಬೆಳೆಯುವ ದೇಶವಾಗಿದೆ. ಇದರಿಂದ ದೇಶದ ಅವಶ್ಯಕತೆಯನ್ನು ಮೀರಿ ನಾವು ಜಾಗತಿಕವಾಗಿ ರಫ್ತು ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.</p><p>ಹಲವು ರೈತರು ಸಂಪ್ರದಾಯಿಕ ಕೃಷಿಯ ಜತೆ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಮೂಲಕ ಕೃಷಿ ಉತ್ಪನ್ನಗಳ ಮಾರುಕಟ್ಟೆಯನ್ನು ವಿಸ್ತರಿಸುತ್ತಿದ್ದಾರೆ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>