<p><strong>ನವದೆಹಲಿ/ಚಂಡೀಗಡ:</strong> ‘ಕೃಷಿ ಕ್ಷೇತ್ರದ ಸುಧಾರಣೆಗೆ ಸಂಬಂಧಿಸಿದಂತೆ ರೂಪಿಸಿರುವ ಮೂರು ಮಸೂದೆಗಳು ರೈತರ ರಕ್ಷಾ ಕವಚವಾಗಲಿವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ.</p>.<p>‘ಈ ವಿಷಯದಲ್ಲಿ ವಿರೋಧ ಪಕ್ಷಗಳು ರೈತರ ದಾರಿ ತಪ್ಪಿಸುತ್ತಿವೆ. ಈ ಮಸೂದೆಯನ್ನು ವಿರೋಧಿಸುವವರು ಮಧ್ಯವರ್ತಿಗಳನ್ನು ಬೆಂಬಲಿಸುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.</p>.<p>ಬಿಹಾರದಲ್ಲಿ ಕೈಗೊಂಡಿರುವ ಹಲವು ರೈಲು ಯೋಜನೆಗಳಿಗೆ ವರ್ಚ್ಯುವಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ‘ಹೊಸ ಕಾನೂನುಗಳಿಂದ ಕೃಷಿ ಉತ್ಪನ್ನಗಳನ್ನು ಯಾವುದೇ ಸ್ಥಳಗಳಲ್ಲಿ ಉತ್ತಮ ಬೆಲೆಗೆ ಮಾರಾಟ ಮಾಡುವ ಅವಕಾಶ ಇನ್ನು ಮುಂದೆ ರೈತರಿಗೆ ದೊರೆಯಲಿದೆ’ ಎಂದು ಪ್ರತಿಪಾದಿಸಿದ್ದಾರೆ.</p>.<p>‘ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸುವ ಪ್ರಕ್ರಿಯೆಯೂ ಮುಂದುವರಿಯಲಿದೆ. ಜತೆಗೆ, ಈಗಿರುವ ರೀತಿಯಲ್ಲಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ವ್ಯವಸ್ಥೆಯೂ ಇರಲಿದೆ’ ಎಂದು ಹೇಳಿದ್ದಾರೆ.</p>.<p>ವಿರೋಧ ಪಕ್ಷಗಳು ಕೃಷಿ ಮಸೂದೆಗಳನ್ನು ರೈತ ವಿರೋಧಿ ಎಂದು ಟೀಕಿಸಿವೆ. ಬಿಜೆಪಿ ಮಿತ್ರ ಪಕ್ಷ ಶಿರೋಮಣಿ ಅಕಾಲಿ ದಳವು ಈ ಮಸೂದೆಯನ್ನು ವಿರೋಧಿಸಿ ಸರ್ಕಾರದಿಂದ ಹೊರಬಂದಿದೆ. ಕೇಂದ್ರ ಸಚಿವ ಸಂಪುಟಕ್ಕೆ ಹರ್ಸಿಮ್ರತ್ ಕೌರ್ ಬಾದಲ್ ಅವರು ಗುರುವಾರ ರಾಜೀನಾಮೆ ನೀಡಿದ್ದರು.</p>.<p>ಲೋಕಸಭೆ ಈ ಮಸೂದೆಗಳಿಗೆ ಅನುಮೋದನೆ ನೀಡಿದ್ದು, ರಾಜ್ಯಸಭೆಯಲ್ಲಿ ಇನ್ನೂ ಮಂಡಿಸಬೇಕಾಗಿದೆ.</p>.<p><strong>ಪಂಜಾಬ್ನಲ್ಲಿ ವಿರೋಧ</strong></p>.<p>ಕೃಷಿ ಮಸೂದೆ ವಿರೋಧಿಸಿ ಪಂಜಾಬ್ನಲ್ಲಿ ಹಲವು ರೈತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ವ್ಯವಸ್ಥೆ ಇನ್ನು ಮುಂದೆ ರದ್ದಾಗಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.</p>.<p>‘ಕೃಷಿ ಪಂಜಾಬ್ನ ಆತ್ಮ’ ಎಂದು ಬಣ್ಣಿಸಿರುವ ಪಂಜಾಬ್ ಶಾಸಕ ಹಾಗೂ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು, ರೈತರ ಜತೆ ಸದಾ ನಿಲ್ಲುವುದಾಗಿ ತಿಳಿಸಿದ್ದಾರೆ.</p>.<p>‘ಪಂಜಾಬ್, ಪಂಜಾಬಿಯತ್ ಮತ್ತು ಪಂಜಾಬಿ’ ರೈತರ ಜಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.</p>.<p><strong>ರಾಜಕೀಯ ನಿರ್ಧಾರ</strong></p>.<p>‘ಕೇಂದ್ರ ಸಚಿವ ಸಂಪುಟಕ್ಕೆ ಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆ ನೀಡಿರುವುದು ಶಿರೋಮಣಿ ಅಕಾಲಿ ದಳದ ರಾಜಕೀಯ ನಿರ್ಧಾರ’ ಎಂದು ಪಂಜಾಬ್ ಬಿಜೆಪಿ ಘಟಕದ ಮುಖ್ಯಸ್ಥ ಅಶ್ವನಿ ಶರ್ಮಾ ಹೇಳಿದ್ದಾರೆ.</p>.<p>‘ಶಿರೋಮಣಿ ಅಕಾಲಿ ದಳ ಎನ್ಡಿಎ ಭಾಗವಾಗವಾಗಿದೆ. ಆದರೆ, ಅದು ಒಂದು ಪ್ರತ್ಯೇಕ ರಾಜಕೀಯ ಸಂಘಟನೆ. ಬಿಜೆಪಿ ಜತೆ ಮೈತ್ರಿ ಇದ್ದರೂ ರಾಜಕೀಯ ಕಾರಣಕ್ಕೆ ಸಚಿವ ಸ್ಥಾನಕ್ಕೆ ಕೌರ್ ರಾಜೀನಾಮೆ ನೀಡಿದ್ದಾರೆ’ ಎಂದು ಹೇಳಿದ್ದಾರೆ.</p>.<p>‘ರೈತರ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ಮೂರು ಮಸೂದೆಗಳನ್ನು ಮಂಡಿಸಿದೆ. ರೈತರ ಆದಾಯವನ್ನು ಹೆಚ್ಚಿಸುವಲ್ಲಿ ಈ ಮಸೂದೆಗಳು ಪ್ರಮುಖ ಪಾತ್ರ ವಹಿಸಲಿವೆ’ ಎಂದು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ/ಚಂಡೀಗಡ:</strong> ‘ಕೃಷಿ ಕ್ಷೇತ್ರದ ಸುಧಾರಣೆಗೆ ಸಂಬಂಧಿಸಿದಂತೆ ರೂಪಿಸಿರುವ ಮೂರು ಮಸೂದೆಗಳು ರೈತರ ರಕ್ಷಾ ಕವಚವಾಗಲಿವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ.</p>.<p>‘ಈ ವಿಷಯದಲ್ಲಿ ವಿರೋಧ ಪಕ್ಷಗಳು ರೈತರ ದಾರಿ ತಪ್ಪಿಸುತ್ತಿವೆ. ಈ ಮಸೂದೆಯನ್ನು ವಿರೋಧಿಸುವವರು ಮಧ್ಯವರ್ತಿಗಳನ್ನು ಬೆಂಬಲಿಸುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.</p>.<p>ಬಿಹಾರದಲ್ಲಿ ಕೈಗೊಂಡಿರುವ ಹಲವು ರೈಲು ಯೋಜನೆಗಳಿಗೆ ವರ್ಚ್ಯುವಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ‘ಹೊಸ ಕಾನೂನುಗಳಿಂದ ಕೃಷಿ ಉತ್ಪನ್ನಗಳನ್ನು ಯಾವುದೇ ಸ್ಥಳಗಳಲ್ಲಿ ಉತ್ತಮ ಬೆಲೆಗೆ ಮಾರಾಟ ಮಾಡುವ ಅವಕಾಶ ಇನ್ನು ಮುಂದೆ ರೈತರಿಗೆ ದೊರೆಯಲಿದೆ’ ಎಂದು ಪ್ರತಿಪಾದಿಸಿದ್ದಾರೆ.</p>.<p>‘ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸುವ ಪ್ರಕ್ರಿಯೆಯೂ ಮುಂದುವರಿಯಲಿದೆ. ಜತೆಗೆ, ಈಗಿರುವ ರೀತಿಯಲ್ಲಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ವ್ಯವಸ್ಥೆಯೂ ಇರಲಿದೆ’ ಎಂದು ಹೇಳಿದ್ದಾರೆ.</p>.<p>ವಿರೋಧ ಪಕ್ಷಗಳು ಕೃಷಿ ಮಸೂದೆಗಳನ್ನು ರೈತ ವಿರೋಧಿ ಎಂದು ಟೀಕಿಸಿವೆ. ಬಿಜೆಪಿ ಮಿತ್ರ ಪಕ್ಷ ಶಿರೋಮಣಿ ಅಕಾಲಿ ದಳವು ಈ ಮಸೂದೆಯನ್ನು ವಿರೋಧಿಸಿ ಸರ್ಕಾರದಿಂದ ಹೊರಬಂದಿದೆ. ಕೇಂದ್ರ ಸಚಿವ ಸಂಪುಟಕ್ಕೆ ಹರ್ಸಿಮ್ರತ್ ಕೌರ್ ಬಾದಲ್ ಅವರು ಗುರುವಾರ ರಾಜೀನಾಮೆ ನೀಡಿದ್ದರು.</p>.<p>ಲೋಕಸಭೆ ಈ ಮಸೂದೆಗಳಿಗೆ ಅನುಮೋದನೆ ನೀಡಿದ್ದು, ರಾಜ್ಯಸಭೆಯಲ್ಲಿ ಇನ್ನೂ ಮಂಡಿಸಬೇಕಾಗಿದೆ.</p>.<p><strong>ಪಂಜಾಬ್ನಲ್ಲಿ ವಿರೋಧ</strong></p>.<p>ಕೃಷಿ ಮಸೂದೆ ವಿರೋಧಿಸಿ ಪಂಜಾಬ್ನಲ್ಲಿ ಹಲವು ರೈತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ವ್ಯವಸ್ಥೆ ಇನ್ನು ಮುಂದೆ ರದ್ದಾಗಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.</p>.<p>‘ಕೃಷಿ ಪಂಜಾಬ್ನ ಆತ್ಮ’ ಎಂದು ಬಣ್ಣಿಸಿರುವ ಪಂಜಾಬ್ ಶಾಸಕ ಹಾಗೂ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು, ರೈತರ ಜತೆ ಸದಾ ನಿಲ್ಲುವುದಾಗಿ ತಿಳಿಸಿದ್ದಾರೆ.</p>.<p>‘ಪಂಜಾಬ್, ಪಂಜಾಬಿಯತ್ ಮತ್ತು ಪಂಜಾಬಿ’ ರೈತರ ಜಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.</p>.<p><strong>ರಾಜಕೀಯ ನಿರ್ಧಾರ</strong></p>.<p>‘ಕೇಂದ್ರ ಸಚಿವ ಸಂಪುಟಕ್ಕೆ ಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆ ನೀಡಿರುವುದು ಶಿರೋಮಣಿ ಅಕಾಲಿ ದಳದ ರಾಜಕೀಯ ನಿರ್ಧಾರ’ ಎಂದು ಪಂಜಾಬ್ ಬಿಜೆಪಿ ಘಟಕದ ಮುಖ್ಯಸ್ಥ ಅಶ್ವನಿ ಶರ್ಮಾ ಹೇಳಿದ್ದಾರೆ.</p>.<p>‘ಶಿರೋಮಣಿ ಅಕಾಲಿ ದಳ ಎನ್ಡಿಎ ಭಾಗವಾಗವಾಗಿದೆ. ಆದರೆ, ಅದು ಒಂದು ಪ್ರತ್ಯೇಕ ರಾಜಕೀಯ ಸಂಘಟನೆ. ಬಿಜೆಪಿ ಜತೆ ಮೈತ್ರಿ ಇದ್ದರೂ ರಾಜಕೀಯ ಕಾರಣಕ್ಕೆ ಸಚಿವ ಸ್ಥಾನಕ್ಕೆ ಕೌರ್ ರಾಜೀನಾಮೆ ನೀಡಿದ್ದಾರೆ’ ಎಂದು ಹೇಳಿದ್ದಾರೆ.</p>.<p>‘ರೈತರ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ಮೂರು ಮಸೂದೆಗಳನ್ನು ಮಂಡಿಸಿದೆ. ರೈತರ ಆದಾಯವನ್ನು ಹೆಚ್ಚಿಸುವಲ್ಲಿ ಈ ಮಸೂದೆಗಳು ಪ್ರಮುಖ ಪಾತ್ರ ವಹಿಸಲಿವೆ’ ಎಂದು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>