<p><strong>ನವದೆಹಲಿ</strong>: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರ ಹೃದಯವನ್ನು ಕದ್ದಿದ್ದಾರೆ ಹೊರತು ಮತಗಳನ್ನಲ್ಲ ಎಂದು ವಿರೋಧ ಪಕ್ಷಗಳ ಮತ ಕಳ್ಳತನ ಆರೋಪಕ್ಕೆ ದೆಹಲಿ ಸಿಎಂ ರೇಖಾ ಗುಪ್ತಾ ತಿರುಗೇಟು ನೀಡಿದ್ದಾರೆ.</p><p>ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶದಲ್ಲಿ ಅಭಿವೃದ್ಧಿಯ ಹೊಸ ಅಲೆ ಇದೆ. ಅನೇಕ ರಾಷ್ಟ್ರಗಳು ಭಾರತವನ್ನು ಮೆಚ್ಚಿಕೊಂಡಿವೆ ಹಾಗೂ ಗೌರವ ನೀಡುತ್ತಿವೆ ಎಂದು ತಿಳಿಸಿದ್ದಾರೆ.</p>.PHOTOS | ಮಗನ ಹುಟ್ಟುಹಬ್ಬದ ಸಂಭ್ರಮದಲ್ಲಿ ಕಿರುತೆರೆ ನಟಿ ಶ್ವೇತಾ ಚೆಂಗಪ್ಪ.ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು: ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ. <p>ದೇಶ ಏಕೆ ಪ್ರಗತಿಪಥದತ್ತ ಸಾಗುತ್ತಿದೆ. ಬಡವರಿಗೆ ಏಕೆ ಅನುಕೂಲವಾಗುತ್ತಿದೆ ಹಾಗೂ ಅನೇಕ ದೇಶಗಳು ಭಾರತವನ್ನು ಗೌರವಿಸುತ್ತದೆ ಎಂದು ಚಿಂತೆಗೀಡಾಗಿರುವ ವಿರೋಧ ಪಕ್ಷಗಳು ಮೋದಿಯನ್ನು ನಿಂದಿಸುವಲ್ಲಿ ನಿರತವಾಗಿದೆ ಎಂದು ಗುಪ್ತಾ ಕಿಡಿಕಾರಿದ್ದಾರೆ.</p><p>'ಮಖಂಚೋರ್' (ಬಾಲ್ಯದಲ್ಲಿ ಬೆಣ್ಣೆಯನ್ನು ಕದಿಯುತ್ತಿದ್ದ ಶ್ರೀಕೃಷ್ಣನನ್ನು ಪ್ರೀತಿಯಿಂದ ಕರೆಯಲಾಗುತ್ತಿತ್ತು) ಹಾಗೆಯೇ ಮೋದಿ ಕೂಡ ’ಮನ್ ಕಾ ಚೋರ್’ ಏಕೆಂದರೆ, ದೇಶದ ಜನರ ಮನಸ್ಸನ್ನುಕದ್ದಿದ್ದಾರೆ ಎಂದು ಗುಪ್ತಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.ಪ್ರಧಾನಿ ಮೋದಿ ಜನ್ಮದಿನ: ಹಾಡು ಬಿಡುಗಡೆ ಮಾಡಿದ ದೆಹಲಿ ಸಿಎಂ ರೇಖಾ ಗುಪ್ತಾ.ಉತ್ತಪ್ಪ, ಯುವರಾಜ್ ಸಿಂಗ್, ಸೋನು ಸೂದ್ಗೆ ಇ.ಡಿ ಸಮನ್ಸ್. <p>ಮೋದಿ ಅವರಿಗೆ ಮತ ಕದಿಯುವ ಅಗತ್ಯವಿಲ್ಲ ಎಂದು ಪ್ರತಿಪಾದಿಸಿದ ರೇಖಾ, ಅಧಿಕಾರ ಕಳೆದುಕೊಂಡು ಈಗ ಚುನಾವಣೆಗಳನ್ನು ಎದುರಿಸಲು ಹೆದರುತ್ತಿರುವ ಪಕ್ಷಗಳು ಮೋದಿ ವಿರುದ್ಧ ಆರೋಪವನ್ನು ಮಾಡುತ್ತಿವೆ ಎಂದು ರಾಹುಲ್ ಗಾಂಧಿ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. </p><p>ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ ಕಳ್ಳತನದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರಲು ಚುನಾವಣಾ ಆಯೋಗ ಮತ್ತು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ನಡುವೆ ಒಪ್ಪಂದ ನಡೆದಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.</p>.ಕೊತ್ತಲವಾಡಿ: ನಟನೆಗೆ ಬಂದಿಲ್ಲ ಸಂಭಾವನೆ; ನಿರ್ಮಾಪಕಿ ಪುಷ್ಪ ವಿರುದ್ಧ ನಟ ಅಸಮಾಧಾನ.Bihar Election 2025: ಚುನಾವಣಾ ಸಮಿತಿ ರಚಿಸಿದ ಕಾಂಗ್ರೆಸ್ .ಮಹಿಳೆಯರ ಮೇಲಿನ ದೌರ್ಜನ್ಯ ಸಹಿಸುವುದಿಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳಕರ ಎಚ್ಚರಿಕೆ.Wayanad Tragedy: ಸಂತ್ರಸ್ತರಿಗೆ ಕೇರಳ ಸರ್ಕಾರದಿಂದ ಹೊಸ ಮನೆಗಳ ಹಸ್ತಾಂತರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರ ಹೃದಯವನ್ನು ಕದ್ದಿದ್ದಾರೆ ಹೊರತು ಮತಗಳನ್ನಲ್ಲ ಎಂದು ವಿರೋಧ ಪಕ್ಷಗಳ ಮತ ಕಳ್ಳತನ ಆರೋಪಕ್ಕೆ ದೆಹಲಿ ಸಿಎಂ ರೇಖಾ ಗುಪ್ತಾ ತಿರುಗೇಟು ನೀಡಿದ್ದಾರೆ.</p><p>ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶದಲ್ಲಿ ಅಭಿವೃದ್ಧಿಯ ಹೊಸ ಅಲೆ ಇದೆ. ಅನೇಕ ರಾಷ್ಟ್ರಗಳು ಭಾರತವನ್ನು ಮೆಚ್ಚಿಕೊಂಡಿವೆ ಹಾಗೂ ಗೌರವ ನೀಡುತ್ತಿವೆ ಎಂದು ತಿಳಿಸಿದ್ದಾರೆ.</p>.PHOTOS | ಮಗನ ಹುಟ್ಟುಹಬ್ಬದ ಸಂಭ್ರಮದಲ್ಲಿ ಕಿರುತೆರೆ ನಟಿ ಶ್ವೇತಾ ಚೆಂಗಪ್ಪ.ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು: ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ. <p>ದೇಶ ಏಕೆ ಪ್ರಗತಿಪಥದತ್ತ ಸಾಗುತ್ತಿದೆ. ಬಡವರಿಗೆ ಏಕೆ ಅನುಕೂಲವಾಗುತ್ತಿದೆ ಹಾಗೂ ಅನೇಕ ದೇಶಗಳು ಭಾರತವನ್ನು ಗೌರವಿಸುತ್ತದೆ ಎಂದು ಚಿಂತೆಗೀಡಾಗಿರುವ ವಿರೋಧ ಪಕ್ಷಗಳು ಮೋದಿಯನ್ನು ನಿಂದಿಸುವಲ್ಲಿ ನಿರತವಾಗಿದೆ ಎಂದು ಗುಪ್ತಾ ಕಿಡಿಕಾರಿದ್ದಾರೆ.</p><p>'ಮಖಂಚೋರ್' (ಬಾಲ್ಯದಲ್ಲಿ ಬೆಣ್ಣೆಯನ್ನು ಕದಿಯುತ್ತಿದ್ದ ಶ್ರೀಕೃಷ್ಣನನ್ನು ಪ್ರೀತಿಯಿಂದ ಕರೆಯಲಾಗುತ್ತಿತ್ತು) ಹಾಗೆಯೇ ಮೋದಿ ಕೂಡ ’ಮನ್ ಕಾ ಚೋರ್’ ಏಕೆಂದರೆ, ದೇಶದ ಜನರ ಮನಸ್ಸನ್ನುಕದ್ದಿದ್ದಾರೆ ಎಂದು ಗುಪ್ತಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.ಪ್ರಧಾನಿ ಮೋದಿ ಜನ್ಮದಿನ: ಹಾಡು ಬಿಡುಗಡೆ ಮಾಡಿದ ದೆಹಲಿ ಸಿಎಂ ರೇಖಾ ಗುಪ್ತಾ.ಉತ್ತಪ್ಪ, ಯುವರಾಜ್ ಸಿಂಗ್, ಸೋನು ಸೂದ್ಗೆ ಇ.ಡಿ ಸಮನ್ಸ್. <p>ಮೋದಿ ಅವರಿಗೆ ಮತ ಕದಿಯುವ ಅಗತ್ಯವಿಲ್ಲ ಎಂದು ಪ್ರತಿಪಾದಿಸಿದ ರೇಖಾ, ಅಧಿಕಾರ ಕಳೆದುಕೊಂಡು ಈಗ ಚುನಾವಣೆಗಳನ್ನು ಎದುರಿಸಲು ಹೆದರುತ್ತಿರುವ ಪಕ್ಷಗಳು ಮೋದಿ ವಿರುದ್ಧ ಆರೋಪವನ್ನು ಮಾಡುತ್ತಿವೆ ಎಂದು ರಾಹುಲ್ ಗಾಂಧಿ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. </p><p>ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ ಕಳ್ಳತನದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರಲು ಚುನಾವಣಾ ಆಯೋಗ ಮತ್ತು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ನಡುವೆ ಒಪ್ಪಂದ ನಡೆದಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.</p>.ಕೊತ್ತಲವಾಡಿ: ನಟನೆಗೆ ಬಂದಿಲ್ಲ ಸಂಭಾವನೆ; ನಿರ್ಮಾಪಕಿ ಪುಷ್ಪ ವಿರುದ್ಧ ನಟ ಅಸಮಾಧಾನ.Bihar Election 2025: ಚುನಾವಣಾ ಸಮಿತಿ ರಚಿಸಿದ ಕಾಂಗ್ರೆಸ್ .ಮಹಿಳೆಯರ ಮೇಲಿನ ದೌರ್ಜನ್ಯ ಸಹಿಸುವುದಿಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳಕರ ಎಚ್ಚರಿಕೆ.Wayanad Tragedy: ಸಂತ್ರಸ್ತರಿಗೆ ಕೇರಳ ಸರ್ಕಾರದಿಂದ ಹೊಸ ಮನೆಗಳ ಹಸ್ತಾಂತರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>