<p><strong>ನವದೆಹಲಿ</strong>: ಕೋವಿಡ್–19 ವಿರುದ್ಧದ ಹೋರಾಟದಲ್ಲಿ ಲಸಿಕೆ ಕಾರ್ಯಕ್ರಮ ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ, ಅರ್ಹರಿಗೆ ಲಸಿಕೆ ನೀಡುವುದಕ್ಕೆ ಹಿನ್ನಡೆಯಾಗದಂತೆ ಎಲ್ಲ ರಾಜ್ಯಗಳು ಮುತುವರ್ಜಿ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p>ವಿವಿಧ ರಾಜ್ಯಗಳಲ್ಲಿನ ಕೋವಿಡ್–19 ಪರಿಸ್ಥಿತಿ ಹಾಗೂ ನಿರ್ವಹಣೆಗೆ ಸಂಬಂಧಿಸಿದ ಕೈಗೊಂಡ ಕ್ರಮಗಳ ಕುರಿತು ಗುರುವಾರ ನಡೆಸಿದ ಪರಿಶೀಲನಾ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.</p>.<p>ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಮೂಲಸೌಕರ್ಯ ವೃದ್ಧಿ, ಕೊರೊನಾ ಸೋಂಕು ಹರಡವುದನ್ನು ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ರಾಜ್ಯಗಳಿಗೆ ನೆರವು ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಪ್ರಕಟಣೆ ತಿಳಿಸಿದೆ.</p>.<p>12 ರಾಜ್ಯಗಳಲ್ಲಿ ಲಕ್ಷಕ್ಕೂ ಅಧಿಕ ಸಕ್ರಿಯ ಕೋವಿಡ್–19 ಪ್ರಕರಣಗಳು ಇವೆ. ರಾಜ್ಯಗಳಿಗೆ ಈ ವರೆಗೆ ಕೋವಿಡ್ ಲಸಿಕೆಯ 17.7 ಕೋಟಿ ಡೋಸ್ಗಳನ್ನು ಪೂರೈಕೆ ಮಾಡಲಾಗಿದೆ ಎಂದು ಅಧಿಕಾರಿಗಳು ಪ್ರಧಾನಿಯವರಿಗೆ ವಿವರಿಸಿದರು.</p>.<p>‘ಕೆಲವು ರಾಜ್ಯಗಳಲ್ಲಿ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಇಂಥ ಕಠಿಣ ನಿರ್ಬಂಧಗಳಿದ್ದರೂ, ಲಸಿಕೆ ಪಡೆಯಲು ಬರುವ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಲಸಿಕೆ ನೀಡುವ ಜವಾಬ್ದಾರಿ ಹೊತ್ತ ಸಿಬ್ಬಂದಿಯನ್ನು ಬೇರೆ ಕರ್ತವ್ಯಗಳಿಗೆ ನಿಯೋಜಿಸಬಾರದು ಎಂದೂ ಪ್ರಧಾನಿ ಸೂಚನೆ ನೀಡಿದರು’ ಎಂದು ಪ್ರಕಟಣೆ ತಿಳಿಸಿದೆ.</p>.<p>ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ನಿರ್ಮಲಾ ಸೀತಾರಾಮನ್, ಹರ್ಷವರ್ಧನ್, ಪೀಯೂಷ್ ಗೋಯಲ್, ಮನ್ಸುಖ್ ಮಾಂಡವೀಯ, ವಿವಿಧ ಸಚಿವಾಲಯಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೋವಿಡ್–19 ವಿರುದ್ಧದ ಹೋರಾಟದಲ್ಲಿ ಲಸಿಕೆ ಕಾರ್ಯಕ್ರಮ ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ, ಅರ್ಹರಿಗೆ ಲಸಿಕೆ ನೀಡುವುದಕ್ಕೆ ಹಿನ್ನಡೆಯಾಗದಂತೆ ಎಲ್ಲ ರಾಜ್ಯಗಳು ಮುತುವರ್ಜಿ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p>ವಿವಿಧ ರಾಜ್ಯಗಳಲ್ಲಿನ ಕೋವಿಡ್–19 ಪರಿಸ್ಥಿತಿ ಹಾಗೂ ನಿರ್ವಹಣೆಗೆ ಸಂಬಂಧಿಸಿದ ಕೈಗೊಂಡ ಕ್ರಮಗಳ ಕುರಿತು ಗುರುವಾರ ನಡೆಸಿದ ಪರಿಶೀಲನಾ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.</p>.<p>ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಮೂಲಸೌಕರ್ಯ ವೃದ್ಧಿ, ಕೊರೊನಾ ಸೋಂಕು ಹರಡವುದನ್ನು ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ರಾಜ್ಯಗಳಿಗೆ ನೆರವು ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಪ್ರಕಟಣೆ ತಿಳಿಸಿದೆ.</p>.<p>12 ರಾಜ್ಯಗಳಲ್ಲಿ ಲಕ್ಷಕ್ಕೂ ಅಧಿಕ ಸಕ್ರಿಯ ಕೋವಿಡ್–19 ಪ್ರಕರಣಗಳು ಇವೆ. ರಾಜ್ಯಗಳಿಗೆ ಈ ವರೆಗೆ ಕೋವಿಡ್ ಲಸಿಕೆಯ 17.7 ಕೋಟಿ ಡೋಸ್ಗಳನ್ನು ಪೂರೈಕೆ ಮಾಡಲಾಗಿದೆ ಎಂದು ಅಧಿಕಾರಿಗಳು ಪ್ರಧಾನಿಯವರಿಗೆ ವಿವರಿಸಿದರು.</p>.<p>‘ಕೆಲವು ರಾಜ್ಯಗಳಲ್ಲಿ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಇಂಥ ಕಠಿಣ ನಿರ್ಬಂಧಗಳಿದ್ದರೂ, ಲಸಿಕೆ ಪಡೆಯಲು ಬರುವ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಲಸಿಕೆ ನೀಡುವ ಜವಾಬ್ದಾರಿ ಹೊತ್ತ ಸಿಬ್ಬಂದಿಯನ್ನು ಬೇರೆ ಕರ್ತವ್ಯಗಳಿಗೆ ನಿಯೋಜಿಸಬಾರದು ಎಂದೂ ಪ್ರಧಾನಿ ಸೂಚನೆ ನೀಡಿದರು’ ಎಂದು ಪ್ರಕಟಣೆ ತಿಳಿಸಿದೆ.</p>.<p>ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ನಿರ್ಮಲಾ ಸೀತಾರಾಮನ್, ಹರ್ಷವರ್ಧನ್, ಪೀಯೂಷ್ ಗೋಯಲ್, ಮನ್ಸುಖ್ ಮಾಂಡವೀಯ, ವಿವಿಧ ಸಚಿವಾಲಯಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>