<p><strong>ನವದೆಹಲಿ:</strong> <a href="https://www.prajavani.net/tags/citizenshipamendmentbill" target="_blank">ಪೌರತ್ವ ತಿದ್ದುಪಡಿ ಮಸೂದೆ</a> ರಾಜ್ಯಸಭೆಯಲ್ಲಿ ಚರ್ಚೆ ಆರಂಭವಾಗುವುದಕ್ಕಿಂತ ಮುನ್ನ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷಗಳು ಪಾಕಿಸ್ತಾನದವರಂತೆ ಮಾತನಾಡುತ್ತಿವೆ ಎಂದಿದ್ದಾರೆ.</p>.<p>ಬಿಜೆಪಿ ಸಂಸದರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರುಪೌರತ್ವ ಮಸೂದೆಯನ್ನು ಸುವರ್ಣಾಕ್ಷರಗಳಲ್ಲಿ ಬರೆಯಲಾಗುವುದು. ಧಾರ್ಮಿಕ ದೌರ್ಜನ್ಯಕ್ಕೊಳಗಾಗಿವಲಸೆ ಹೋದಜನರಿಗೆ ಇದು ಶಾಶ್ವತ ಪರಿಹಾರ ನೀಡುತ್ತದೆ. ಆದರೆ ವಿಪಕ್ಷದಲ್ಲಿರುವ ಕೆಲವರು ಪೌರತ್ವ ಮಸೂದೆ ಬಗ್ಗೆ ಪಾಕಿಸ್ತಾನ ಹೇಳಿದ್ದ ರೀತಿಯಲ್ಲಿಯೇ ಮಾತನಾಡುತ್ತಿದ್ದಾರೆ ಎಂದಿದ್ದಾರೆ. </p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/amit-shah-tabled-citizenship-amendment-bill-in-rajya-sabha-689388.html" target="_blank">ಪೌರತ್ವ ತಿದ್ದುಪಡಿ ಮಸೂದೆ | ಭಾರತದ ಯಾವೊಬ್ಬ ಮುಸ್ಲಿಮನಿಗೂ ಭಯ ಬೇಡ: ಅಮಿತ್ ಶಾ</a></p>.<p>ರಾಜ್ಯಸಭೆಯಲ್ಲಿ ಪೂರ್ಣ ಬಹುಮತದಿಂದ ಮಸೂದೆ ಅಂಗೀಕಾರ ಆಗುತ್ತದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.</p>.<p>ಪೌರತ್ವ ತಿದ್ದುಪಡಿ ಮಸೂದೆಯು ಸೋಮವಾರ ಲೋಕಸಭೆಯಲ್ಲಿ ಅಂಗೀಕರಿಸಲ್ಪಟ್ಟಿತ್ತು.ಲೋಕಸಭೆಯಲ್ಲಿ ಹಾಜರಿದ್ದ 391 ಸದಸ್ಯರ ಪೈಕಿ ಮಸೂದೆ ಪರವಾಗಿ 293 ಸದಸ್ಯರು ಮತ ಹಾಕಿದರೆ, ಮಸೂದೆ ವಿರುದ್ಧವಾಗಿ 82 ಮತಗಳು ಚಲಾವಣೆಯಾಗಿದ್ದವು.</p>.<p><a href="https://www.prajavani.net/stories/national/what-is-citizenship-amendment-bill-what-does-it-do-and-why-congress-and-other-opposition-parties-689093.html" target="_blank">ಪೌರತ್ವ(ತಿದ್ದುಪಡಿ)ಮಸೂದೆ</a> 2019ರ ಮೂಲಕ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನ ದೇಶಗಳಲ್ಲಿ ಧಾರ್ಮಿಕ ದೌರ್ಜನ್ಯಕ್ಕೆ ಒಳಗಾಗಿ ವಲಸೆ ಬಂದಿರುವ ಮುಸ್ಲಿಮೇತರ ಹಿಂದೂ, ಸಿಖ್, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರೈಸ್ತ ಸಮುದಾಯದ ನಿರಾಶ್ರಿತರಿಗೆ ಭಾರತೀಯ ನಾಗರಿಕತ್ವ ಸಿಗಲಿದೆ.</p>.<p><strong>ಇದನ್ನೂ ಓದಿ:</strong><a href="https://WWW.prajavani.net/stories/national/citizenship-amendment-bill-narendra-modi-govt-fulfilling-jinnahs-dream-of-two-nation-theory-says-sp-689400.html" target="_blank">ಜಿನ್ನಾರ ದ್ವಿರಾಷ್ಟ್ರ ಸಿದ್ಧಾಂತ ಮೋದಿ ಅನುಷ್ಠಾನಗೊಳಿಸುತ್ತಿದ್ದಾರೆ: ಎಸ್ಪಿ</a></p>.<p>ಪ್ರಸ್ತುತ ಮಸೂದೆ ಬಗ್ಗೆ ಮಂಗಳವಾರ ಪ್ರತಿಕ್ರಿಯಿಸಿದ್ದ ಪಾಕಿಸ್ತಾನ, ಭಾರತ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ಹೆಜ್ಜೆ ಇಟ್ಟಿದೆ ಎಂದಿತ್ತು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> <a href="https://www.prajavani.net/tags/citizenshipamendmentbill" target="_blank">ಪೌರತ್ವ ತಿದ್ದುಪಡಿ ಮಸೂದೆ</a> ರಾಜ್ಯಸಭೆಯಲ್ಲಿ ಚರ್ಚೆ ಆರಂಭವಾಗುವುದಕ್ಕಿಂತ ಮುನ್ನ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷಗಳು ಪಾಕಿಸ್ತಾನದವರಂತೆ ಮಾತನಾಡುತ್ತಿವೆ ಎಂದಿದ್ದಾರೆ.</p>.<p>ಬಿಜೆಪಿ ಸಂಸದರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರುಪೌರತ್ವ ಮಸೂದೆಯನ್ನು ಸುವರ್ಣಾಕ್ಷರಗಳಲ್ಲಿ ಬರೆಯಲಾಗುವುದು. ಧಾರ್ಮಿಕ ದೌರ್ಜನ್ಯಕ್ಕೊಳಗಾಗಿವಲಸೆ ಹೋದಜನರಿಗೆ ಇದು ಶಾಶ್ವತ ಪರಿಹಾರ ನೀಡುತ್ತದೆ. ಆದರೆ ವಿಪಕ್ಷದಲ್ಲಿರುವ ಕೆಲವರು ಪೌರತ್ವ ಮಸೂದೆ ಬಗ್ಗೆ ಪಾಕಿಸ್ತಾನ ಹೇಳಿದ್ದ ರೀತಿಯಲ್ಲಿಯೇ ಮಾತನಾಡುತ್ತಿದ್ದಾರೆ ಎಂದಿದ್ದಾರೆ. </p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/amit-shah-tabled-citizenship-amendment-bill-in-rajya-sabha-689388.html" target="_blank">ಪೌರತ್ವ ತಿದ್ದುಪಡಿ ಮಸೂದೆ | ಭಾರತದ ಯಾವೊಬ್ಬ ಮುಸ್ಲಿಮನಿಗೂ ಭಯ ಬೇಡ: ಅಮಿತ್ ಶಾ</a></p>.<p>ರಾಜ್ಯಸಭೆಯಲ್ಲಿ ಪೂರ್ಣ ಬಹುಮತದಿಂದ ಮಸೂದೆ ಅಂಗೀಕಾರ ಆಗುತ್ತದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.</p>.<p>ಪೌರತ್ವ ತಿದ್ದುಪಡಿ ಮಸೂದೆಯು ಸೋಮವಾರ ಲೋಕಸಭೆಯಲ್ಲಿ ಅಂಗೀಕರಿಸಲ್ಪಟ್ಟಿತ್ತು.ಲೋಕಸಭೆಯಲ್ಲಿ ಹಾಜರಿದ್ದ 391 ಸದಸ್ಯರ ಪೈಕಿ ಮಸೂದೆ ಪರವಾಗಿ 293 ಸದಸ್ಯರು ಮತ ಹಾಕಿದರೆ, ಮಸೂದೆ ವಿರುದ್ಧವಾಗಿ 82 ಮತಗಳು ಚಲಾವಣೆಯಾಗಿದ್ದವು.</p>.<p><a href="https://www.prajavani.net/stories/national/what-is-citizenship-amendment-bill-what-does-it-do-and-why-congress-and-other-opposition-parties-689093.html" target="_blank">ಪೌರತ್ವ(ತಿದ್ದುಪಡಿ)ಮಸೂದೆ</a> 2019ರ ಮೂಲಕ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನ ದೇಶಗಳಲ್ಲಿ ಧಾರ್ಮಿಕ ದೌರ್ಜನ್ಯಕ್ಕೆ ಒಳಗಾಗಿ ವಲಸೆ ಬಂದಿರುವ ಮುಸ್ಲಿಮೇತರ ಹಿಂದೂ, ಸಿಖ್, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರೈಸ್ತ ಸಮುದಾಯದ ನಿರಾಶ್ರಿತರಿಗೆ ಭಾರತೀಯ ನಾಗರಿಕತ್ವ ಸಿಗಲಿದೆ.</p>.<p><strong>ಇದನ್ನೂ ಓದಿ:</strong><a href="https://WWW.prajavani.net/stories/national/citizenship-amendment-bill-narendra-modi-govt-fulfilling-jinnahs-dream-of-two-nation-theory-says-sp-689400.html" target="_blank">ಜಿನ್ನಾರ ದ್ವಿರಾಷ್ಟ್ರ ಸಿದ್ಧಾಂತ ಮೋದಿ ಅನುಷ್ಠಾನಗೊಳಿಸುತ್ತಿದ್ದಾರೆ: ಎಸ್ಪಿ</a></p>.<p>ಪ್ರಸ್ತುತ ಮಸೂದೆ ಬಗ್ಗೆ ಮಂಗಳವಾರ ಪ್ರತಿಕ್ರಿಯಿಸಿದ್ದ ಪಾಕಿಸ್ತಾನ, ಭಾರತ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ಹೆಜ್ಜೆ ಇಟ್ಟಿದೆ ಎಂದಿತ್ತು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>