<p>'ಕೊರೊನಾ ಪಿಡುಗಿನ ವಿರುದ್ಧ ನಾವು ಒಂದು ದೇಶವಾಗಿ ಹೇಗೆ ಹೋರಾಡಿದೆವು ಎನ್ನುವುದನ್ನು ಮುಂದಿನ ತಲೆಮಾರು ಪರಾಮರ್ಶಿಸಲಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p>ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆಗೆ ಮಂಗಳವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ಆರಂಭಿಸಿದ ಮೋದಿ,'ನಮ್ಮ ಕಾರ್ಯವೈಖರಿಯು ಸಹಕಾರದ ಒಕ್ಕೂಟ ವ್ಯವಸ್ಥೆಗೆ ಒಂದು ಮಾದರಿಯಾಗಿ ಉಳಿಯಲಿದೆ. ಮುಂದಿನ ತಲೆಮಾರು ಸಹ ಅದೇ ರೀತಿ ನೆನಪಿಸಿಕೊಳ್ಳಲಿದೆ' ಎಂದು ಆಶಯ ವ್ಯಕ್ತಪಡಿಸಿದರು.</p>.<p>ಕೊರೊನಾ ವೈರಸ್ ಪಿಡುಗಿಗೆ ಬಲಿಯಾದವರ ಬಗ್ಗೆ ಕಾನ್ಫ್ರೆನ್ಸ್ನ ಆರಂಭದಲ್ಲಿಯೇ ಸಂತಾಪ ವ್ಯಕ್ತಪಡಿಸಿದರು.</p>.<p>'ದೇಶವನ್ನು ಅಲ್ಲಾಕ್ ಮಾಡುವ ಮೊದಲ ಪ್ರಯತ್ನಕ್ಕೆ ಎರಡು ವಾರ ಆಗಿದೆ. ಈ ಅವಧಿಯಲ್ಲಿ ನಮಗೆ ಆದ ಅನುಭವಗಳು ಮುಂದಿನ ದಿನಕ್ಕೆ ಮಾರ್ಗದರ್ಶಿ ಆಗಬಲ್ಲದು. ನೀವು ನೀಡುವ ವಾಸ್ತವ ಚಿತ್ರಣ ಮತ್ತು ಸಲಹೆಗಳನ್ನು ಆಧರಿಸಿ ಮುಂದಿನ ಕಾರ್ಯತಂತ್ರ ರೂಪಿಸಲಾಗುವುದು' ಎಂದು ಮೋದಿ ಹೇಳಿದರು.</p>.<p>'ಕೊರೊನಾ ವೈರಸ್ ಪಿಡುಗಿನಿಂದ ಸತ್ತವರ ಸಂಖ್ಯೆ ನಮ್ಮ ದೇಶದಲ್ಲಿ ಗಮನಾರ್ಹ ಪ್ರಮಾಣದಲ್ಲಿಲ್ಲ. ಚೇತರಿಕೆ ಪ್ರಮಾಣವೂ ಶೇ 50ಕ್ಕಿಂತ ಹೆಚ್ಚು ಇದೆ' ಎಂದು ಮಾಹಿತಿ ನೀಡಿದರು.</p>.<p>'ಕೊರೊನಾ ಪಿಡುಗು ತಡೆಯಲು ಜನರು ಮುನ್ನೆಚ್ಚರಿಕೆ ತೆಗೆದುಕೊಳ್ಳುವುದನ್ನು ಮುಂದುವರಿಸಬೇಕು. ಮಾಸ್ಕ್ ಇಲ್ಲದೆ ಮನೆಯಿಂದ ಹೊರಗೆ ಹೋಗುವುದನ್ನು ಯೋಚಿಸುವುದೂ ಸಲ್ಲದು. ಕೈಗಳನ್ನು ಆಗಿಂದಾಗ್ಗೆ ತೊಳೆದುಕೊಳ್ಳುವುದು ಮುಖ್ಯ' ಎಂದು ಕಿವಿಮಾತು ಹೇಳಿದರು.</p>.<p>'ಆರ್ಥಿಕ ಚಟುವಟಿಕೆಗಳು ಮತ್ತೆ ಆರಂಭವಾಗಿವೆ. ವಿದ್ಯುತ್ ಬಳಕೆ ಪ್ರಮಾಣ ಹೆಚ್ಚಾಗಿದೆ. ರಫ್ತು ಪ್ರಮಾಣವೂ ಸಹಜ ಸ್ಥಿತಿಗೆ ಮರಳುತ್ತಿದೆ. ಪರಿಸ್ಥಿತಿ ಸುಧಾರಿಸುತ್ತಿರುವುದನ್ನು ಇದು ಸೂಚಿಸುತ್ತದೆ' ಎಂದು ಮೋದಿ ಅಭಿಪ್ರಾಯಪಟ್ಟರು.</p>.<p>ನಾಳೆ (ಜೂನ್ 17) ಕೊರೊನಾ ಪಿಡುಗಿನಿಂದ ಅತಿಹೆಚ್ಚು ಹಾನಿ ಅನುಭವಿಸಿರುವ ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ತಮಿಳುನಾಡು, ಗುಜರಾತ್ ಸೇರಿದತೆ ಇತರ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>'ಕೊರೊನಾ ಪಿಡುಗಿನ ವಿರುದ್ಧ ನಾವು ಒಂದು ದೇಶವಾಗಿ ಹೇಗೆ ಹೋರಾಡಿದೆವು ಎನ್ನುವುದನ್ನು ಮುಂದಿನ ತಲೆಮಾರು ಪರಾಮರ್ಶಿಸಲಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p>ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆಗೆ ಮಂಗಳವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ಆರಂಭಿಸಿದ ಮೋದಿ,'ನಮ್ಮ ಕಾರ್ಯವೈಖರಿಯು ಸಹಕಾರದ ಒಕ್ಕೂಟ ವ್ಯವಸ್ಥೆಗೆ ಒಂದು ಮಾದರಿಯಾಗಿ ಉಳಿಯಲಿದೆ. ಮುಂದಿನ ತಲೆಮಾರು ಸಹ ಅದೇ ರೀತಿ ನೆನಪಿಸಿಕೊಳ್ಳಲಿದೆ' ಎಂದು ಆಶಯ ವ್ಯಕ್ತಪಡಿಸಿದರು.</p>.<p>ಕೊರೊನಾ ವೈರಸ್ ಪಿಡುಗಿಗೆ ಬಲಿಯಾದವರ ಬಗ್ಗೆ ಕಾನ್ಫ್ರೆನ್ಸ್ನ ಆರಂಭದಲ್ಲಿಯೇ ಸಂತಾಪ ವ್ಯಕ್ತಪಡಿಸಿದರು.</p>.<p>'ದೇಶವನ್ನು ಅಲ್ಲಾಕ್ ಮಾಡುವ ಮೊದಲ ಪ್ರಯತ್ನಕ್ಕೆ ಎರಡು ವಾರ ಆಗಿದೆ. ಈ ಅವಧಿಯಲ್ಲಿ ನಮಗೆ ಆದ ಅನುಭವಗಳು ಮುಂದಿನ ದಿನಕ್ಕೆ ಮಾರ್ಗದರ್ಶಿ ಆಗಬಲ್ಲದು. ನೀವು ನೀಡುವ ವಾಸ್ತವ ಚಿತ್ರಣ ಮತ್ತು ಸಲಹೆಗಳನ್ನು ಆಧರಿಸಿ ಮುಂದಿನ ಕಾರ್ಯತಂತ್ರ ರೂಪಿಸಲಾಗುವುದು' ಎಂದು ಮೋದಿ ಹೇಳಿದರು.</p>.<p>'ಕೊರೊನಾ ವೈರಸ್ ಪಿಡುಗಿನಿಂದ ಸತ್ತವರ ಸಂಖ್ಯೆ ನಮ್ಮ ದೇಶದಲ್ಲಿ ಗಮನಾರ್ಹ ಪ್ರಮಾಣದಲ್ಲಿಲ್ಲ. ಚೇತರಿಕೆ ಪ್ರಮಾಣವೂ ಶೇ 50ಕ್ಕಿಂತ ಹೆಚ್ಚು ಇದೆ' ಎಂದು ಮಾಹಿತಿ ನೀಡಿದರು.</p>.<p>'ಕೊರೊನಾ ಪಿಡುಗು ತಡೆಯಲು ಜನರು ಮುನ್ನೆಚ್ಚರಿಕೆ ತೆಗೆದುಕೊಳ್ಳುವುದನ್ನು ಮುಂದುವರಿಸಬೇಕು. ಮಾಸ್ಕ್ ಇಲ್ಲದೆ ಮನೆಯಿಂದ ಹೊರಗೆ ಹೋಗುವುದನ್ನು ಯೋಚಿಸುವುದೂ ಸಲ್ಲದು. ಕೈಗಳನ್ನು ಆಗಿಂದಾಗ್ಗೆ ತೊಳೆದುಕೊಳ್ಳುವುದು ಮುಖ್ಯ' ಎಂದು ಕಿವಿಮಾತು ಹೇಳಿದರು.</p>.<p>'ಆರ್ಥಿಕ ಚಟುವಟಿಕೆಗಳು ಮತ್ತೆ ಆರಂಭವಾಗಿವೆ. ವಿದ್ಯುತ್ ಬಳಕೆ ಪ್ರಮಾಣ ಹೆಚ್ಚಾಗಿದೆ. ರಫ್ತು ಪ್ರಮಾಣವೂ ಸಹಜ ಸ್ಥಿತಿಗೆ ಮರಳುತ್ತಿದೆ. ಪರಿಸ್ಥಿತಿ ಸುಧಾರಿಸುತ್ತಿರುವುದನ್ನು ಇದು ಸೂಚಿಸುತ್ತದೆ' ಎಂದು ಮೋದಿ ಅಭಿಪ್ರಾಯಪಟ್ಟರು.</p>.<p>ನಾಳೆ (ಜೂನ್ 17) ಕೊರೊನಾ ಪಿಡುಗಿನಿಂದ ಅತಿಹೆಚ್ಚು ಹಾನಿ ಅನುಭವಿಸಿರುವ ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ತಮಿಳುನಾಡು, ಗುಜರಾತ್ ಸೇರಿದತೆ ಇತರ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>