<p><strong>ವಾರಾಣಸಿ</strong>: ದೇಶೀ ನಿರ್ಮಿತ ವೇಗದ ರೈಲು ‘ವಂದೇ ಭಾರತ ಎಕ್ಸ್ಪ್ರೆಸ್’ ಕುರಿತು ಲೇವಡಿ ಮಾಡಿದ ವಿರೋಧ ಪಕ್ಷಗಳ ನಾಯಕರನ್ನು ಪ್ರಧಾನಿ ನರೇಂದ್ರ ಮೋದಿ ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>ವಂದೇ ಭಾರತ ಎಕ್ಸ್ಪ್ರೆಸ್ ಬಗ್ಗೆ ಅಣಕಿಸುವ ಮೂಲಕ ವಿರೋಧ ಪಕ್ಷಗಳ ನಾಯಕರು ಅದಕ್ಕಾಗಿ ದುಡಿದ ಎಂಜಿನಿಯರ್ ಮತ್ತು ತಂತ್ರಜ್ಞರನ್ನು ಅವಮಾನಿಸಿದ್ದಾರೆ ಎಂದು ಹೇಳಿದ್ದಾರೆ.</p>.<p>ಮೊದಲ ದಿನ ವಾರಾಣಸಿಯಿಂದ ದೆಹಲಿಗೆ ಹಿಂದಿರುಗುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ರೈಲು ಮೂರು ಬಾರಿ ನಿಂತಿತ್ತು. ಇದನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಟೀಕೆ ಮಾಡಿದ್ದರು.</p>.<p>ಮಂಗಳವಾರ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡುತ್ತಿದ್ದ ಅವರು, ಸ್ಥೈರ್ಯ ಕುಸಿಯುವಂತೆ ಮಾಡುವ ಇಂತಹ ನಕಾರಾತ್ಮಕ ಹೇಳಿಕೆಗಳಿಗೆ ಕಿವಿಗೊಡದಂತೆ ಅವರು ಜನರಿಗೆ ಮನವಿ ಮಾಡಿದರು.</p>.<p><strong>27ರಂದು ಅಮೇಠಿಗೆ ಪ್ರಧಾನಿ:</strong><br /><strong>ಅಮೇಠಿ/ಉತ್ತರ ಪ್ರದೇಶ:</strong> ಪ್ರಧಾನಿ ನರೇಂದ್ರ ಮೋದಿ ಇದೇ 27ರಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತವರು ಕ್ಷೇತ್ರ ಅಮೇಠಿ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.ಮುನ್ಶಿಗಂಜ್ನಲ್ಲಿ ಬಿಜೆಪಿ ರ್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾರಾಣಸಿ</strong>: ದೇಶೀ ನಿರ್ಮಿತ ವೇಗದ ರೈಲು ‘ವಂದೇ ಭಾರತ ಎಕ್ಸ್ಪ್ರೆಸ್’ ಕುರಿತು ಲೇವಡಿ ಮಾಡಿದ ವಿರೋಧ ಪಕ್ಷಗಳ ನಾಯಕರನ್ನು ಪ್ರಧಾನಿ ನರೇಂದ್ರ ಮೋದಿ ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>ವಂದೇ ಭಾರತ ಎಕ್ಸ್ಪ್ರೆಸ್ ಬಗ್ಗೆ ಅಣಕಿಸುವ ಮೂಲಕ ವಿರೋಧ ಪಕ್ಷಗಳ ನಾಯಕರು ಅದಕ್ಕಾಗಿ ದುಡಿದ ಎಂಜಿನಿಯರ್ ಮತ್ತು ತಂತ್ರಜ್ಞರನ್ನು ಅವಮಾನಿಸಿದ್ದಾರೆ ಎಂದು ಹೇಳಿದ್ದಾರೆ.</p>.<p>ಮೊದಲ ದಿನ ವಾರಾಣಸಿಯಿಂದ ದೆಹಲಿಗೆ ಹಿಂದಿರುಗುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ರೈಲು ಮೂರು ಬಾರಿ ನಿಂತಿತ್ತು. ಇದನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಟೀಕೆ ಮಾಡಿದ್ದರು.</p>.<p>ಮಂಗಳವಾರ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡುತ್ತಿದ್ದ ಅವರು, ಸ್ಥೈರ್ಯ ಕುಸಿಯುವಂತೆ ಮಾಡುವ ಇಂತಹ ನಕಾರಾತ್ಮಕ ಹೇಳಿಕೆಗಳಿಗೆ ಕಿವಿಗೊಡದಂತೆ ಅವರು ಜನರಿಗೆ ಮನವಿ ಮಾಡಿದರು.</p>.<p><strong>27ರಂದು ಅಮೇಠಿಗೆ ಪ್ರಧಾನಿ:</strong><br /><strong>ಅಮೇಠಿ/ಉತ್ತರ ಪ್ರದೇಶ:</strong> ಪ್ರಧಾನಿ ನರೇಂದ್ರ ಮೋದಿ ಇದೇ 27ರಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತವರು ಕ್ಷೇತ್ರ ಅಮೇಠಿ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.ಮುನ್ಶಿಗಂಜ್ನಲ್ಲಿ ಬಿಜೆಪಿ ರ್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>