ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಸಂಪುಟ ಅಂತಿಮಕ್ಕೆ ಕಸರತ್ತು: ಮೊದಲ ಹಂತದಲ್ಲಿಯೇ ಮಿತ್ರರಿಗೆ ಸಮಪಾಲು?

ಮೋದಿ ಪ್ರಮಾಣ ಇಂದು
Published : 8 ಜೂನ್ 2024, 23:45 IST
Last Updated : 8 ಜೂನ್ 2024, 23:45 IST
ಫಾಲೋ ಮಾಡಿ
Comments
ರಾಜನಾಥ್‌ ಸಿಂಗ್

ರಾಜನಾಥ್‌ ಸಿಂಗ್

ಬಿಜೆಪಿ ಬಳಿಯಲ್ಲಿಯೇ ಪ್ರಮುಖ ಖಾತೆಗಳು?
ರೈಲ್ವೆ, ಮಾಹಿತಿ ತಂತ್ರಜ್ಞಾನ ಸೇರಿದಂತೆ ಪ್ರಮುಖ ಖಾತೆಗಳನ್ನು ತಮ್ಮ ಪಕ್ಷಕ್ಕೆ ಬಿಟ್ಟುಕೊಡುವಂತೆ ಟಿಡಿಪಿ ಹಾಗೂ ಜೆಡಿಯು ಪಟ್ಟು ಹಿಡಿದಿವೆ. ಆದರೆ, ಪ್ರಮುಖ ಖಾತೆಗಳನ್ನು ಬಿಜೆಪಿಯೇ ಉಳಿಸಿಕೊಳ್ಳಲಿದೆ. ಗೃಹ, ಹಣಕಾಸು, ವಿದೇಶಾಂಗ ವ್ಯವಹಾರ, ರಕ್ಷಣೆ, ರಸ್ತೆ ಹಾಗೂ ಹೆದ್ದಾರಿ ವ್ಯವಹಾರ, ರೈಲ್ವೆ, ಮಾಹಿತಿ ತಂತ್ರಜ್ಞಾನ, ಶಿಕ್ಷಣ ಖಾತೆಗಳನ್ನು ಬಿಜೆಪಿ ಬಿಟ್ಟುಕೊಡುವ ಸಾಧ್ಯತೆ ಕಡಿಮೆ. ರೈಲ್ವೆ ಖಾತೆ ಮೇಲೆ ಜೆಡಿಯು ಹಾಗೂ ಮಾಹಿತಿ ತಂತ್ರಜ್ಞಾನ ಖಾತೆ ಮೇಲೆ ಟಿಡಿಪಿ ಕಣ್ಣಿಟ್ಟಿದೆ. ಗ್ರಾಮೀಣಾಭಿವೃದ್ಧಿ ಖಾತೆಯನ್ನು ಜೆಡಿಯುವಿಗೆ ನೀಡುವ ಸಂಭವ ಇದೆ. ಲೋಕಸಭಾಧ್ಯಕ್ಷ ಸ್ಥಾನವನ್ನು ತಮ್ಮ ಪಕ್ಷಕ್ಕೆ ನೀಡುವಂತೆ ಟಿಡಿಪಿ ಮುಖ್ಯಸ್ಥ ಎನ್‌.ಚಂದ್ರಬಾಬು ನಾಯ್ಡು ಒತ್ತಡ ಹೇರಿದ್ದಾರೆ. ಇದಕ್ಕೆ ಬಿಜೆಪಿ ವರಿಷ್ಠರು ಒಪ್ಪಿಲ್ಲ. ಕೃಷಿ ಖಾತೆ ಮೇಲೆ ಜೆಡಿಎಸ್‌ ಸಂಸದ ಎಚ್‌.ಡಿ.ಕುಮಾರಸ್ವಾಮಿ ಕಣ್ಣಿಟ್ಟಿದ್ದಾರೆ. ಈ ಖಾತೆ ಪಡೆಯಲು ಜೆಡಿಯು ಸಹ ಪ್ರಯತ್ನ ನಡೆಸಿದೆ.
ಮಂಜುನಾಥ್‌ಗೆ ಖಾತೆ ಕುಮಾರಸ್ವಾಮಿ ಹಟ
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಸಿ.ಎನ್‌.ಮಂಜುನಾಥ್ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಜೆಡಿಎಸ್‌ ಸಂಸದ ಎಚ್‌.ಡಿ.ಕುಮಾರಸ್ವಾಮಿ ಪಟ್ಟು ಹಿಡಿದಿದ್ದಾರೆ. ಎಚ್‌.ಡಿ.ದೇವೇಗೌಡರ ಕುಟುಂಬದ ಇಬ್ಬರಿಗೆ ಸಚಿವ ಸ್ಥಾನ ನೀಡಲು ಬಿಜೆಪಿ ವರಿಷ್ಠರು ಒಪ್ಪಿಲ್ಲ. ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಹೈವೋಲ್ಟೇಜ್‌ ಕ್ಷೇತ್ರವಾಗಿ ಪರಿವರ್ತನೆ ಹೊಂದಿತ್ತು. ಮಂಜುನಾಥ್ ಅವರು ಡಿ.ಕೆ. ಸುರೇಶ್ ಅವರನ್ನು 2.60 ಲಕ್ಷಗಳ ಭಾರಿ ಅಂತರದಿಂದ ಸೋಲಿಸಿದ್ದರು. ಮಂಜುನಾಥ್‌ ಗೆದ್ದರೆ ಕೇಂದ್ರ ಸಚಿವರಾಗುತ್ತಾರೆ ಎಂದು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಪ್ರಚಾರ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT