ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಕ್ಕ ಪಾಠ ಕಲಿಸಿದ ಮೋದಿ; ಗುಜರಾತ್‌ನಲ್ಲಿ 2002ರ ನಂತರ ಗಲಭೆ ನಡೆದಿಲ್ಲ: ಅಮಿತ್ ಶಾ

ಸತೀಶ ಜಾ
Published 17 ಡಿಸೆಂಬರ್ 2023, 2:28 IST
Last Updated 17 ಡಿಸೆಂಬರ್ 2023, 2:28 IST
ಅಕ್ಷರ ಗಾತ್ರ

ನವದೆಹಲಿ: 2002ರಲ್ಲಿ ಗುಜರಾತ್‌ನ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಗಲಭೆಕೋರರಿಗೆ ಕಲಿಸಿದ ತಕ್ಕ ಪಾಠದಿಂದಾಗಿ ಅಂದಿನಿಂದ ಇಂದಿನವರೆಗೆ ರಾಜ್ಯದಲ್ಲಿ ಗಲಭೆ ಎಬ್ಬಿಸಲು ಯಾರೂ ಧೈರ್ಯ ಮಾಡಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ಅಹಮದಾಬಾದ್‌ನ ಸನಂದ್‌ನಲ್ಲಿ ನಡೆದ 'ವಿಕಸಿತ ಭಾರತ ಸಂಕಲ್ಪ ಯಾತ್ರೆ'ಯಲ್ಲಿ ಗೋಧ್ರಾ ಗಲಭೆ ವಿಚಾರವನ್ನು ಅಮಿತ್ ಶಾ ಪ್ರಸ್ತಾಪಿಸಿದರು.

2002ರಲ್ಲಿ ಗಲಭೆ ಎದ್ದಿತ್ತು. ನಂತರ ಗಲಭೆಕೋರರಿಗೆ ಮೋದಿ ತಕ್ಕ ಪಾಠ ಕಲಿಸಿದರು. ಅದಾದ ನಂತರ ರಾಜ್ಯದಲ್ಲಿ ಗಲಭೆ ನಡೆದಿದೆಯೇ? ಗುಜರಾತ್‌ನಲ್ಲಿ ಈವರೆಗೆ ಯಾರೂ ಗಲಭೆ ಮಾಡಲು ಧೈರ್ಯ ಮಾಡಿಲ್ಲ ಎಂದು ಅವರು ಹೇಳಿದರು.

ಗುಜರಾತ್‌ನಲ್ಲಿ ಈಗ ಶಾಂತಿ ನೆಲೆಸಿದ್ದು, ರಾಜ್ಯ ಅಭಿವೃದ್ಧಿ ಸಾಧಿಸಿದ್ದು, ಸಮೃದ್ಧವಾಗಿದೆ ಎಂದು ಅವರು ಉಲ್ಲೇಖ ಮಾಡಿದರು.

ಈ ಹಿಂದೆ ಬಾಂಬ್ ಸ್ಪೋಟಗಳು ಸಾಮಾನ್ಯವಾಗಿತ್ತು. ಈ ಕುರಿತು ಪತ್ರಕರ್ತರು ವರದಿ ಮಾಡುವುದನ್ನೇ ಮರೆತಿದ್ದರು. ಸರ್ಜಿಕಲ್ ದಾಳಿ ನಡೆಸಿದ ಪ್ರಧಾನಿ ಮೋದಿ, ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದರು. ಅವರು ದೇಶವನ್ನು ಸುರಕ್ಷಿತವಾಗಿರಿಸಿದರು ಎಂದು ಅಮಿತ್ ಶಾ ಹೇಳಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಿದ್ದ ವಿಶೇಷ ಸ್ಥಾನಮಾನ ರದ್ದು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಹಾಗೂ ಚಂದ್ರಯಾನ-3 ಯೋಜನೆ ಯಶಸ್ವಿಗೂ ಮೋದಿ ಅವರನ್ನು ಅಮಿತ್ ಶಾ ಶ್ಲಾಘಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT