<p><strong>ಕೋಲ್ಕತ್ತ</strong>: ‘ನಾಸಿಕ್ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ನ (ಟಿಸಿಎಸ್) ಘಟಕದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಮತ್ತು ಬಲವಂತದ ಮತಾಂತರದ ಜಾಲವನ್ನು ನಮ್ಮ ಸರ್ಕಾರ ಭೇದಿಸಲಿದೆ’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಫಡಣವೀಸ್, ‘ಇದು ಗಂಭೀರವಾದ ವಿಷಯವಾಗಿದ್ದು, ಇದರ ಹಿಂದೆ ದೊಡ್ಡ ಜಾಲವೇ ಇದೆ. ನಾವು ಆ ಜಾಲವನ್ನು ಮಟ್ಟಹಾಕುತ್ತೇವೆ. ಪ್ರಕರಣದಲ್ಲಿ ಭಾಗಿಯಾದ ಯಾರನ್ನೂ ರಕ್ಷಿಸುವುದಿಲ್ಲ. ತನಿಖೆ ಸಂಬಂಧ ಕೇಂದ್ರ ಸಂಸ್ಥೆಗಳ ನೆರವನ್ನೂ ಪಡೆಯುತ್ತಿದ್ದೇವೆ’ ಎಂದು ಹೇಳಿದ್ದಾರೆ.</p>.<p>‘ಬಹುರಾಷ್ಟ್ರೀಯ ಕಂಪನಿಯು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ತನಿಖೆಗೆ ಸಹಕಾರ ನೀಡಲು ಅಗತ್ಯ ಕ್ರಮ ಕೈಗೊಂಡಿದೆ’ ಎಂದು ತಿಳಿಸಿದ್ದಾರೆ.</p>.<p>ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಹೇಳಿಕೆ ಪ್ರಕಾರ, ಈ ಪ್ರಕರಣದಲ್ಲಿ ಭಾಗಿಯಾಗಿರುವ ಏಳು ಆರೋಪಿಗಳು ಮಹಿಳಾ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಸಂಘಟಿತ ಗ್ಯಾಂಗ್ನಂತೆ ಕಾರ್ಯನಿರ್ವಹಿಸುತ್ತಿದ್ದರು. ಈ ಆರೋಪಗಳಿಗೆ ಸಂಬಂಧಿಸಿದಂತೆ ಪೊಲೀಸರು ಒಂಬತ್ತು ಪ್ರಕರಣ ಗಳನ್ನು ದಾಖಲಿಸಿದ್ದಾರೆ.</p>.<h2>‘ಪ್ರಮುಖ ಆರೋಪಿ ಎಚ್ಆರ್ ಆಗಿರಲಿಲ್ಲ’</h2><p>ಮುಂಬೈ: ನಾಸಿಕ್ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪ್ರಮುಖ ಆರೋಪಿ ಎನ್ನಲಾದ ನಿದಾ ಖಾನ್ ಅವರು ಟಿಸಿಎಸ್ ಘಟಕದ ಮಾನವ ಸಂಪನ್ಮೂಲ ವಿಭಾಗದಲ್ಲಿ ಕೆಲಸ ಮಾಡುತ್ತಿರಲಿಲ್ಲ ಎಂಬ ಸಂಗತಿ ಗೊತ್ತಾಗಿದೆ.</p><p>ನಿದಾ ಖಾನ್ ಅವರ ಪತ್ತೆಗಾಗಿ ಎಸ್ಐಟಿ ಪೊಲೀಸರು ಠಾಣೆ ಜಿಲ್ಲೆಯ ಮುಂಬ್ರಾ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ‘ನಿದಾ ಖಾನ್ 2021ರ ಡಿಸೆಂಬರ್ನಲ್ಲಿ ಟಿಸಿಎಸ್ ಘಟಕದಲ್ಲಿ ಕೆಲಸಕ್ಕೆ ಸೇರಿದ್ದಳು. ಎಚ್ಆರ್ ಆಗಿರಲಿಲ್ಲ. ಆಕೆ, ಟೆಲಿಕಾಲರ್ ಆಗಿ ಕೆಲಸ ಮಾಡುತ್ತಿದ್ದಳು’ ಎಂದು ನಿದಾ ಅವರ ಕುಟುಂಬಸ್ಥರು ತಿಳಿಸಿದ್ದಾರೆ.</p><p>‘ನಿದಾ ಅವರು ಪ್ರಕರಣದ ಪ್ರಮುಖ ಸೂತ್ರಧಾರಿ’ ಎಂಬ ಮಾಧ್ಯಮಗಳ ವರದಿಯನ್ನು ಅವರ ವಕೀಲ ಬಾಬಾ ಸಯ್ಯದ್ ನಿರಾಕರಿಸಿದ್ದಾರೆ.</p><p>‘ಎಫ್ಐಆರ್ನಲ್ಲಿ ಧಾರ್ಮಿಕ ಮತಾಂತರದ ಯಾವುದೇ ಉಲ್ಲೇಖವಿಲ್ಲ. ಸಿಆರ್ನಲ್ಲಿ ನಿದಾ ಖಾನ್ ಅವರ ಹೆಸರು ಇದೆ. ಆದರೆ, ಅವರೇ ಪ್ರಕರಣದ ಸೂತ್ರಧಾರಿ ಎಂದು ಬಿಂಬಿಸಲಾಗುತ್ತಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬುದು ಮಾತ್ರ ಅವರ ಮೇಲಿರುವ ಏಕೈಕ ಆರೋಪವಾಗಿದೆ. ಅವರು ಬಹಿರಂಗವಾಗಿ ಕಾಣಿಸಿಕೊಂಡರೆ ಬಂಧಿಸಲಾಗುತ್ತದೆ. ಅವರಿಗೆ ಕಂಪನಿಯು ಕಳುಹಿಸಿರುವ ಅಮಾನತು ಪತ್ರದಲ್ಲೂ, ಪ್ರೊಸೆಸ್ ಅಸೋಸಿಯೇಟ್ ಎಂದೇ ಉಲ್ಲೇಖಿಸಲಾಗಿದೆ’ ಎಂದು ಸಯ್ಯದ್ ತಿಳಿಸಿದ್ದಾರೆ.</p><p>ಗರ್ಭಿಣಿಯಾಗಿರುವ ನಿದಾ ಖಾನ್, ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ‘ನಾಸಿಕ್ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ನ (ಟಿಸಿಎಸ್) ಘಟಕದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಮತ್ತು ಬಲವಂತದ ಮತಾಂತರದ ಜಾಲವನ್ನು ನಮ್ಮ ಸರ್ಕಾರ ಭೇದಿಸಲಿದೆ’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಫಡಣವೀಸ್, ‘ಇದು ಗಂಭೀರವಾದ ವಿಷಯವಾಗಿದ್ದು, ಇದರ ಹಿಂದೆ ದೊಡ್ಡ ಜಾಲವೇ ಇದೆ. ನಾವು ಆ ಜಾಲವನ್ನು ಮಟ್ಟಹಾಕುತ್ತೇವೆ. ಪ್ರಕರಣದಲ್ಲಿ ಭಾಗಿಯಾದ ಯಾರನ್ನೂ ರಕ್ಷಿಸುವುದಿಲ್ಲ. ತನಿಖೆ ಸಂಬಂಧ ಕೇಂದ್ರ ಸಂಸ್ಥೆಗಳ ನೆರವನ್ನೂ ಪಡೆಯುತ್ತಿದ್ದೇವೆ’ ಎಂದು ಹೇಳಿದ್ದಾರೆ.</p>.<p>‘ಬಹುರಾಷ್ಟ್ರೀಯ ಕಂಪನಿಯು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ತನಿಖೆಗೆ ಸಹಕಾರ ನೀಡಲು ಅಗತ್ಯ ಕ್ರಮ ಕೈಗೊಂಡಿದೆ’ ಎಂದು ತಿಳಿಸಿದ್ದಾರೆ.</p>.<p>ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಹೇಳಿಕೆ ಪ್ರಕಾರ, ಈ ಪ್ರಕರಣದಲ್ಲಿ ಭಾಗಿಯಾಗಿರುವ ಏಳು ಆರೋಪಿಗಳು ಮಹಿಳಾ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಸಂಘಟಿತ ಗ್ಯಾಂಗ್ನಂತೆ ಕಾರ್ಯನಿರ್ವಹಿಸುತ್ತಿದ್ದರು. ಈ ಆರೋಪಗಳಿಗೆ ಸಂಬಂಧಿಸಿದಂತೆ ಪೊಲೀಸರು ಒಂಬತ್ತು ಪ್ರಕರಣ ಗಳನ್ನು ದಾಖಲಿಸಿದ್ದಾರೆ.</p>.<h2>‘ಪ್ರಮುಖ ಆರೋಪಿ ಎಚ್ಆರ್ ಆಗಿರಲಿಲ್ಲ’</h2><p>ಮುಂಬೈ: ನಾಸಿಕ್ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪ್ರಮುಖ ಆರೋಪಿ ಎನ್ನಲಾದ ನಿದಾ ಖಾನ್ ಅವರು ಟಿಸಿಎಸ್ ಘಟಕದ ಮಾನವ ಸಂಪನ್ಮೂಲ ವಿಭಾಗದಲ್ಲಿ ಕೆಲಸ ಮಾಡುತ್ತಿರಲಿಲ್ಲ ಎಂಬ ಸಂಗತಿ ಗೊತ್ತಾಗಿದೆ.</p><p>ನಿದಾ ಖಾನ್ ಅವರ ಪತ್ತೆಗಾಗಿ ಎಸ್ಐಟಿ ಪೊಲೀಸರು ಠಾಣೆ ಜಿಲ್ಲೆಯ ಮುಂಬ್ರಾ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ‘ನಿದಾ ಖಾನ್ 2021ರ ಡಿಸೆಂಬರ್ನಲ್ಲಿ ಟಿಸಿಎಸ್ ಘಟಕದಲ್ಲಿ ಕೆಲಸಕ್ಕೆ ಸೇರಿದ್ದಳು. ಎಚ್ಆರ್ ಆಗಿರಲಿಲ್ಲ. ಆಕೆ, ಟೆಲಿಕಾಲರ್ ಆಗಿ ಕೆಲಸ ಮಾಡುತ್ತಿದ್ದಳು’ ಎಂದು ನಿದಾ ಅವರ ಕುಟುಂಬಸ್ಥರು ತಿಳಿಸಿದ್ದಾರೆ.</p><p>‘ನಿದಾ ಅವರು ಪ್ರಕರಣದ ಪ್ರಮುಖ ಸೂತ್ರಧಾರಿ’ ಎಂಬ ಮಾಧ್ಯಮಗಳ ವರದಿಯನ್ನು ಅವರ ವಕೀಲ ಬಾಬಾ ಸಯ್ಯದ್ ನಿರಾಕರಿಸಿದ್ದಾರೆ.</p><p>‘ಎಫ್ಐಆರ್ನಲ್ಲಿ ಧಾರ್ಮಿಕ ಮತಾಂತರದ ಯಾವುದೇ ಉಲ್ಲೇಖವಿಲ್ಲ. ಸಿಆರ್ನಲ್ಲಿ ನಿದಾ ಖಾನ್ ಅವರ ಹೆಸರು ಇದೆ. ಆದರೆ, ಅವರೇ ಪ್ರಕರಣದ ಸೂತ್ರಧಾರಿ ಎಂದು ಬಿಂಬಿಸಲಾಗುತ್ತಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬುದು ಮಾತ್ರ ಅವರ ಮೇಲಿರುವ ಏಕೈಕ ಆರೋಪವಾಗಿದೆ. ಅವರು ಬಹಿರಂಗವಾಗಿ ಕಾಣಿಸಿಕೊಂಡರೆ ಬಂಧಿಸಲಾಗುತ್ತದೆ. ಅವರಿಗೆ ಕಂಪನಿಯು ಕಳುಹಿಸಿರುವ ಅಮಾನತು ಪತ್ರದಲ್ಲೂ, ಪ್ರೊಸೆಸ್ ಅಸೋಸಿಯೇಟ್ ಎಂದೇ ಉಲ್ಲೇಖಿಸಲಾಗಿದೆ’ ಎಂದು ಸಯ್ಯದ್ ತಿಳಿಸಿದ್ದಾರೆ.</p><p>ಗರ್ಭಿಣಿಯಾಗಿರುವ ನಿದಾ ಖಾನ್, ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>