ರಾಣೆ ಹೇಳಿಕೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಾನೂನು ಸುವ್ಯವಸ್ಥೆ ಮತ್ತು ನಾಸಿಕ್ನಲ್ಲಿನ ಪರಿಸ್ಥಿತಿ ಪರಿಗಣಿಸಿ, ಪೊಲೀಸ್ ಆಯುಕ್ತ ದೀಪಕ್ ಪಾಂಡೆ ಈ ಬಗ್ಗೆ ತನಿಖೆ ನಡೆಸಿ, ಕೇಂದ್ರ ಸಚಿವರನ್ನು ತಕ್ಷಣ ಬಂಧಿಸಲು ಆದೇಶಿಸಿದ್ದಾರೆ. ಅದರಂತೆ, ನಾಸಿಕ್ ಡಿಸಿಪಿ (ಅಪರಾಧ ವಿಭಾಗ) ಸಂಜಯ್ ಬಾರ್ಕುಂಡ್ ನೇತೃತ್ವದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆನಂದ ವಾಘ್ ಮತ್ತು ಇತರ ಅಧಿಕಾರಿಗಳನ್ನು ಒಳಗೊಂಡ ತಂಡ ರಚಿಸಲಾಗಿದೆ. ಈ ತಂಡವು ರಾಣೆಯನ್ನು ಬಂಧಿಸಲು ರತ್ನಗಿರಿಯ ಚಿಪ್ಲುನ್ಗೆ ತೆರಳಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.