<p><strong>ನವದೆಹಲಿ:</strong> ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಯು 2025–26ನೇ ಸಾಲಿನ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿ ವೇತನಕ್ಕೆ 40 ವಿದ್ಯಾರ್ಥಿಗಳನ್ನಷ್ಟೇ ಆಯ್ಕೆ ಮಾಡಿದೆ. ಅನುದಾನದ ಲಭ್ಯತೆ ನೋಡಿಕೊಂಡು ಉಳಿದ 66 ಮಂದಿಗೆ ವಿದ್ಯಾರ್ಥಿ ವೇತನ ನೀಡುವುದಾಗಿ ಹೇಳಿಕೊಂಡಿದೆ. </p><p>ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿ ಗಳಿಗೆ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಈ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಪರಿಶಿಷ್ಟ ಜಾತಿ, ಅಲೆಮಾರಿ ಮತ್ತು ಅರೆ ಅಲೆಮಾರಿ ಬುಡಕಟ್ಟುಗಳು, ಭೂರಹಿತ ಕೃಷಿ ಕಾರ್ಮಿಕರು ಮತ್ತು ಸಾಂಪ್ರದಾಯಿಕ ಕುಶಲಕರ್ಮಿಗಳ ವರ್ಗದ ವಿದ್ಯಾರ್ಥಿಗಳು ಈ ಯೋಜನೆಯ ಫಲಾನುಭವಿಗಳು. ಈ ವಿದ್ಯಾರ್ಥಿವೇತನದ ಮೂಲಕ ಸ್ನಾತಕೋತ್ತರ ಮತ್ತು ಪಿಎಚ್.ಡಿ ಅಧ್ಯಯನ ನಡೆಸಲು ಹಣಕಾಸಿನ ನೆರವು ನೀಡಲಾಗುತ್ತದೆ. </p><p>ಈ ಯೋಜನೆಗಾಗಿ ಈ ಸಲ ಮಾರ್ಚ್ 29ರಿಂದ ಏಪ್ರಿಲ್ 17ರ ನಡುವೆ 440 ವಿದ್ಯಾರ್ಥಿಗಳಿಂದ ಅರ್ಜಿ ಸ್ವೀಕರಿಸಲಾ ಗಿದೆ. ಈ ಪೈಕಿ, 106 ಮಂದಿಯನ್ನು ಆಯ್ಕೆ ಮಾಡಲಾಗಿದೆ. 64 ಮಂದಿಯನ್ನು ಆಯ್ಕೆಯಾಗದ ಪಟ್ಟಿಯಲ್ಲಿ ಸೇರಿಸಲಾಗಿದೆ (ಅಂದರೆ, ರಾಜ್ಯಗಳ ಪಟ್ಟಿ ಹಾಗೂ ಇತರ ಕೋಟಾ ಕಾರಣಕ್ಕೆ ಈ ತೀರ್ಮಾನಕ್ಕೆ ಬರಲಾಗಿದೆ) ಅರ್ಹತಾ ಮಾನದಂಡ ಪೂರೈಸದಿರುವುದು, ಅಪೂರ್ಣ ದಾಖಲಾತಿಹಾಗೂ ಇತರ ಕಾರಣಗಳಿಗಾಗಿ 270 ಮಂದಿಯ ಅರ್ಜಿಯನ್ನು ತಿರಸ್ಕರಿಸಲಾಗಿದೆ. </p><p>ಈ ಹಿಂದಿನ ವರ್ಷಗಳಲ್ಲಿ, ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಎಲ್ಲರಿಗೂ ವಿದ್ಯಾರ್ಥಿ ವೇತನದ ಪತ್ರಗಳನ್ನು ಒಂದೇ ಸಲ ನೀಡಲಾಗುತ್ತಿತ್ತು. ಆದರೆ, ಈ ಸಲ ಹಂತ ಹಂತವಾಗಿ ನೀಡುತ್ತಿರುವುದು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ. </p><p>ಫೆಬ್ರುವರಿಯಲ್ಲಿ ಮಂಡಿಸಿದ ಕೇಂದ್ರ ಬಜೆಟ್ನಲ್ಲಿ, ಈ ಯೋಜನೆಗಾಗಿ ₹130 ಕೋಟಿ ಮೀಸಲು ಇಡಲಾಗಿತ್ತು. ಕಳೆದ ವರ್ಷದ ಬಜೆಟ್ಗೆ ಹೋಲಿಸಿದರೆ ಈ ಮೊತ್ತ ಶೇ 38ರಷ್ಟು ಹೆಚ್ಚಳ ಆಗಿದೆ. 2024ರ ಡಿಸೆಂಬರ್ 19ರಿಂದ ಇಲ್ಲಿಯವರೆಗೆ ಸಚಿವಾಲಯವು 80 ವಿದ್ಯಾರ್ಥಿಗಳಿಗೆ ₹56 ಕೋಟಿ ವಿದ್ಯಾರ್ಥಿ ವೇತನ ನೀಡಿದೆ. </p><p>ಉಳಿದ 66 ಮಂದಿಗೆ ವಿದ್ಯಾರ್ಥಿ ವೇತನ ನೀಡಲು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯ ಅನುಮೋದನೆ ಬೇಕಿದೆ. ನಮ್ಮಲ್ಲಿ ಅನುದಾನ ಲಭ್ಯ ಇದೆ. ಆದರೆ, ಸಂಪುಟ ಸಮಿತಿಯ ಅನುಮೋದನೆ ಸಿಗದೆ ಏನೂ ಮಾಡುವಂತಿಲ್ಲ’ ಎಂದು ಸಚಿವಾಲಯದ ಅಧಿಕಾರಿ ಯೊಬ್ಬರು ತಿಳಿಸಿದರು. </p><p>ಇದಕ್ಕೂ ಮುನ್ನ, ಮೌಲಾನಾ ಅಜಾದ್ ರಾಷ್ಟ್ರೀಯ ಫೆಲೋಶಿಪ್ ಯೋಜನೆಯಲ್ಲೂ ಇದೇ ರೀತಿಯ ಸಮಸ್ಯೆ ಉಂಟಾಗಿತ್ತು. ಈ ವರ್ಷದ ಜನವರಿಯಿಂದ 1400 ಪಿಎಚ್.ಡಿ ವಿದ್ಯಾರ್ಥಿಗಳಿಗೆ ಸ್ಟೈಪೆಂಡ್ ಸಿಗದೆ ಪಡಿಪಾಟಲು ಅನುಭವಿಸಿದ್ದರು. ವಿವಿಧ ವಿದ್ಯಾರ್ಥಿ ವೇತನ ಯೋಜನೆಗಳಲ್ಲಿ ಉಂಟಾಗಿರುವ ಗೊಂದಲ ಪರಿಹರಿಸುವಂತೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷಗಳ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಯು 2025–26ನೇ ಸಾಲಿನ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿ ವೇತನಕ್ಕೆ 40 ವಿದ್ಯಾರ್ಥಿಗಳನ್ನಷ್ಟೇ ಆಯ್ಕೆ ಮಾಡಿದೆ. ಅನುದಾನದ ಲಭ್ಯತೆ ನೋಡಿಕೊಂಡು ಉಳಿದ 66 ಮಂದಿಗೆ ವಿದ್ಯಾರ್ಥಿ ವೇತನ ನೀಡುವುದಾಗಿ ಹೇಳಿಕೊಂಡಿದೆ. </p><p>ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿ ಗಳಿಗೆ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಈ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಪರಿಶಿಷ್ಟ ಜಾತಿ, ಅಲೆಮಾರಿ ಮತ್ತು ಅರೆ ಅಲೆಮಾರಿ ಬುಡಕಟ್ಟುಗಳು, ಭೂರಹಿತ ಕೃಷಿ ಕಾರ್ಮಿಕರು ಮತ್ತು ಸಾಂಪ್ರದಾಯಿಕ ಕುಶಲಕರ್ಮಿಗಳ ವರ್ಗದ ವಿದ್ಯಾರ್ಥಿಗಳು ಈ ಯೋಜನೆಯ ಫಲಾನುಭವಿಗಳು. ಈ ವಿದ್ಯಾರ್ಥಿವೇತನದ ಮೂಲಕ ಸ್ನಾತಕೋತ್ತರ ಮತ್ತು ಪಿಎಚ್.ಡಿ ಅಧ್ಯಯನ ನಡೆಸಲು ಹಣಕಾಸಿನ ನೆರವು ನೀಡಲಾಗುತ್ತದೆ. </p><p>ಈ ಯೋಜನೆಗಾಗಿ ಈ ಸಲ ಮಾರ್ಚ್ 29ರಿಂದ ಏಪ್ರಿಲ್ 17ರ ನಡುವೆ 440 ವಿದ್ಯಾರ್ಥಿಗಳಿಂದ ಅರ್ಜಿ ಸ್ವೀಕರಿಸಲಾ ಗಿದೆ. ಈ ಪೈಕಿ, 106 ಮಂದಿಯನ್ನು ಆಯ್ಕೆ ಮಾಡಲಾಗಿದೆ. 64 ಮಂದಿಯನ್ನು ಆಯ್ಕೆಯಾಗದ ಪಟ್ಟಿಯಲ್ಲಿ ಸೇರಿಸಲಾಗಿದೆ (ಅಂದರೆ, ರಾಜ್ಯಗಳ ಪಟ್ಟಿ ಹಾಗೂ ಇತರ ಕೋಟಾ ಕಾರಣಕ್ಕೆ ಈ ತೀರ್ಮಾನಕ್ಕೆ ಬರಲಾಗಿದೆ) ಅರ್ಹತಾ ಮಾನದಂಡ ಪೂರೈಸದಿರುವುದು, ಅಪೂರ್ಣ ದಾಖಲಾತಿಹಾಗೂ ಇತರ ಕಾರಣಗಳಿಗಾಗಿ 270 ಮಂದಿಯ ಅರ್ಜಿಯನ್ನು ತಿರಸ್ಕರಿಸಲಾಗಿದೆ. </p><p>ಈ ಹಿಂದಿನ ವರ್ಷಗಳಲ್ಲಿ, ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಎಲ್ಲರಿಗೂ ವಿದ್ಯಾರ್ಥಿ ವೇತನದ ಪತ್ರಗಳನ್ನು ಒಂದೇ ಸಲ ನೀಡಲಾಗುತ್ತಿತ್ತು. ಆದರೆ, ಈ ಸಲ ಹಂತ ಹಂತವಾಗಿ ನೀಡುತ್ತಿರುವುದು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ. </p><p>ಫೆಬ್ರುವರಿಯಲ್ಲಿ ಮಂಡಿಸಿದ ಕೇಂದ್ರ ಬಜೆಟ್ನಲ್ಲಿ, ಈ ಯೋಜನೆಗಾಗಿ ₹130 ಕೋಟಿ ಮೀಸಲು ಇಡಲಾಗಿತ್ತು. ಕಳೆದ ವರ್ಷದ ಬಜೆಟ್ಗೆ ಹೋಲಿಸಿದರೆ ಈ ಮೊತ್ತ ಶೇ 38ರಷ್ಟು ಹೆಚ್ಚಳ ಆಗಿದೆ. 2024ರ ಡಿಸೆಂಬರ್ 19ರಿಂದ ಇಲ್ಲಿಯವರೆಗೆ ಸಚಿವಾಲಯವು 80 ವಿದ್ಯಾರ್ಥಿಗಳಿಗೆ ₹56 ಕೋಟಿ ವಿದ್ಯಾರ್ಥಿ ವೇತನ ನೀಡಿದೆ. </p><p>ಉಳಿದ 66 ಮಂದಿಗೆ ವಿದ್ಯಾರ್ಥಿ ವೇತನ ನೀಡಲು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯ ಅನುಮೋದನೆ ಬೇಕಿದೆ. ನಮ್ಮಲ್ಲಿ ಅನುದಾನ ಲಭ್ಯ ಇದೆ. ಆದರೆ, ಸಂಪುಟ ಸಮಿತಿಯ ಅನುಮೋದನೆ ಸಿಗದೆ ಏನೂ ಮಾಡುವಂತಿಲ್ಲ’ ಎಂದು ಸಚಿವಾಲಯದ ಅಧಿಕಾರಿ ಯೊಬ್ಬರು ತಿಳಿಸಿದರು. </p><p>ಇದಕ್ಕೂ ಮುನ್ನ, ಮೌಲಾನಾ ಅಜಾದ್ ರಾಷ್ಟ್ರೀಯ ಫೆಲೋಶಿಪ್ ಯೋಜನೆಯಲ್ಲೂ ಇದೇ ರೀತಿಯ ಸಮಸ್ಯೆ ಉಂಟಾಗಿತ್ತು. ಈ ವರ್ಷದ ಜನವರಿಯಿಂದ 1400 ಪಿಎಚ್.ಡಿ ವಿದ್ಯಾರ್ಥಿಗಳಿಗೆ ಸ್ಟೈಪೆಂಡ್ ಸಿಗದೆ ಪಡಿಪಾಟಲು ಅನುಭವಿಸಿದ್ದರು. ವಿವಿಧ ವಿದ್ಯಾರ್ಥಿ ವೇತನ ಯೋಜನೆಗಳಲ್ಲಿ ಉಂಟಾಗಿರುವ ಗೊಂದಲ ಪರಿಹರಿಸುವಂತೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷಗಳ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>