<p><strong>ಇಂದೋರ್</strong>: ಮತಾಂತರಕ್ಕೆ ಪಿತೂರಿ ಮಾಡಿದ ಆರೋಪ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಕಾಂಗ್ರೆಸ್ ನಾಯಕನನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿಯಲ್ಲಿ ಬಂಧಿಸಲು ಇಂದೋರ್ ಜಿಲ್ಲಾಡಳಿತ ಆದೇಶಿಸಿದೆ.</p><p>ಸಾರ್ವಜನಿಕ ಶಾಂತಿಗೆ ಧಕ್ಕೆಯುಂಟುಮಾಡುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆಗೆ ಅಡ್ಡಿಪಡಿಸಲು ಉದ್ದೇಶಿಸಿದ ಆರೋಪದಲ್ಲಿ ಕಾಂಗ್ರೆಸ್ ಕೌನ್ಸಿಲರ್ ಅನ್ವರ್ ಖಾದ್ರಿ ಅವರನ್ನು ಎನ್ಎಸ್ಎ ಅಡಿಯಲ್ಲಿ ಬಂಧಿಸುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಶಿಶ್ ಸಿಂಗ್ ಆದೇಶಿಸಿದ್ದಾರೆ. ಅದರಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.</p><p>ಖಾದ್ರಿ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 18 ಪ್ರಕರಗಳಿವೆ. ಹಣದ ಆಮಿಷವೊಡ್ಡಿ ಜನರನ್ನು ಮತಾಂತರಗೊಳಿಸಲು ಸಂಚು ರೂಪಿಸಲು ಯತ್ನಿಸಿದ ಆರೋಪ ಪ್ರಕರಣ ಕಳೆದ ತಿಂಗಳು ದಾಖಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p><p>ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದು ಹಾಗೂ ಇತರ ಆರೋಪಗಳಿಗೆ ಸಂಬಂಧಿಸಿದ ಪ್ರತ್ಯೇಕ ಪ್ರಕರಣಗಳಲ್ಲಿ ಇತ್ತೀಚೆಗೆ ಬಂಧನಕ್ಕೊಳಗಾಗಿರುವ ಸಾಹಿಲ್ ಶೇಖ್ ಮತ್ತು ಅಲ್ತಾಫ್ ಶಾ ಎಂಬ ಇಬ್ಬರು ಆರೋಪಿಗಳು, ಖಾದ್ರಿ ಪಾತ್ರದ ಬಗ್ಗೆ ಪೊಲೀಸರೆದುರು ಹೇಳಿಕೆ ನೀಡಿದ್ದರು.</p><p>ಯುವತಿಯರನ್ನು ಪ್ರೀತಿಯ ಬಲೆಯಲ್ಲಿ ಬೀಳಿಸಿ, ಅವರನ್ನು ಮತಾಂತರಗೊಳಿಸುವಂತೆ ಖಾದ್ರಿ ಅವರು ತಮಗೆ ₹ 3 ಲಕ್ಷ ನೀಡಿದ್ದರು ಎಂದು ತಪ್ಪೊಪ್ಪಿಕೊಂಡಿದ್ದರು. ಅವರ ಹೇಳಿಕೆಗಳ ಆಧಾರದಲ್ಲಿ ಖಾದ್ರಿ ವಿರುದ್ಧ ಮತಾಂತರಕ್ಕೆ ಸಂಚು ರೂಪಿಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿವೆ.</p><p>ಇದರ ಬೆನ್ನಲ್ಲೇ, ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿಕಾರಿದೆ. ಕಾಂಗ್ರೆಸ್ ಕೌನ್ಸಿಲರ್ 'ಲವ್ ಜಿಹಾದ್' ಗ್ಯಾಂಗ್ ಮುನ್ನಡೆಸುತ್ತಿದ್ದಾರೆ ಎಂದು ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್</strong>: ಮತಾಂತರಕ್ಕೆ ಪಿತೂರಿ ಮಾಡಿದ ಆರೋಪ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಕಾಂಗ್ರೆಸ್ ನಾಯಕನನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿಯಲ್ಲಿ ಬಂಧಿಸಲು ಇಂದೋರ್ ಜಿಲ್ಲಾಡಳಿತ ಆದೇಶಿಸಿದೆ.</p><p>ಸಾರ್ವಜನಿಕ ಶಾಂತಿಗೆ ಧಕ್ಕೆಯುಂಟುಮಾಡುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆಗೆ ಅಡ್ಡಿಪಡಿಸಲು ಉದ್ದೇಶಿಸಿದ ಆರೋಪದಲ್ಲಿ ಕಾಂಗ್ರೆಸ್ ಕೌನ್ಸಿಲರ್ ಅನ್ವರ್ ಖಾದ್ರಿ ಅವರನ್ನು ಎನ್ಎಸ್ಎ ಅಡಿಯಲ್ಲಿ ಬಂಧಿಸುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಶಿಶ್ ಸಿಂಗ್ ಆದೇಶಿಸಿದ್ದಾರೆ. ಅದರಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.</p><p>ಖಾದ್ರಿ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 18 ಪ್ರಕರಗಳಿವೆ. ಹಣದ ಆಮಿಷವೊಡ್ಡಿ ಜನರನ್ನು ಮತಾಂತರಗೊಳಿಸಲು ಸಂಚು ರೂಪಿಸಲು ಯತ್ನಿಸಿದ ಆರೋಪ ಪ್ರಕರಣ ಕಳೆದ ತಿಂಗಳು ದಾಖಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p><p>ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದು ಹಾಗೂ ಇತರ ಆರೋಪಗಳಿಗೆ ಸಂಬಂಧಿಸಿದ ಪ್ರತ್ಯೇಕ ಪ್ರಕರಣಗಳಲ್ಲಿ ಇತ್ತೀಚೆಗೆ ಬಂಧನಕ್ಕೊಳಗಾಗಿರುವ ಸಾಹಿಲ್ ಶೇಖ್ ಮತ್ತು ಅಲ್ತಾಫ್ ಶಾ ಎಂಬ ಇಬ್ಬರು ಆರೋಪಿಗಳು, ಖಾದ್ರಿ ಪಾತ್ರದ ಬಗ್ಗೆ ಪೊಲೀಸರೆದುರು ಹೇಳಿಕೆ ನೀಡಿದ್ದರು.</p><p>ಯುವತಿಯರನ್ನು ಪ್ರೀತಿಯ ಬಲೆಯಲ್ಲಿ ಬೀಳಿಸಿ, ಅವರನ್ನು ಮತಾಂತರಗೊಳಿಸುವಂತೆ ಖಾದ್ರಿ ಅವರು ತಮಗೆ ₹ 3 ಲಕ್ಷ ನೀಡಿದ್ದರು ಎಂದು ತಪ್ಪೊಪ್ಪಿಕೊಂಡಿದ್ದರು. ಅವರ ಹೇಳಿಕೆಗಳ ಆಧಾರದಲ್ಲಿ ಖಾದ್ರಿ ವಿರುದ್ಧ ಮತಾಂತರಕ್ಕೆ ಸಂಚು ರೂಪಿಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿವೆ.</p><p>ಇದರ ಬೆನ್ನಲ್ಲೇ, ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿಕಾರಿದೆ. ಕಾಂಗ್ರೆಸ್ ಕೌನ್ಸಿಲರ್ 'ಲವ್ ಜಿಹಾದ್' ಗ್ಯಾಂಗ್ ಮುನ್ನಡೆಸುತ್ತಿದ್ದಾರೆ ಎಂದು ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>