<p><strong>ವಯನಾಡ್</strong>: ಕಳೆದ ವಾರ ಕೇರಳದ ವಯನಾಡ್ನಲ್ಲಿನ ಕಾಫಿ ತೋಟವೊಂದರ ಕಾರ್ಮಿಕ ಮಹಿಳೆ ರಾಧಾ ಎನ್ನುವರ ಮೇಲೆ ದಾಳಿ ಮಾಡಿ ಕೊಂದಿದ್ದ ಹುಲಿಯ ಕಳೇಬರ ನಿನ್ನೆ ಬೆಳಗಿನ ಜಾವ ವಯನಾಡಿನ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿತ್ತು.</p><p>ಹುಲಿಯ ಕಳೇಬರ ಪತ್ತೆಯಾಗಿದ್ದರ ಬಗ್ಗೆ ಕೇರಳ ಅರಣ್ಯ ಇಲಾಖೆಯಿಂದ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ಟಿಸಿಎ) ವಿಸ್ತೃತ ವರದಿ ಕೇಳಿದೆ.</p><p>ಮತ್ತೊಂದು ಹುಲಿಯ ಜೊತೆ ಕಾದಾಟದಲ್ಲಿ ಕುತ್ತಿಗೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದರಿಂದ ನರಭಕ್ಷಕ ಹುಲಿ ಮೃತಪಟ್ಟಿದೆ ಎಂದು ಈಗಾಗಲೇ ಪ್ರಾಥಮಿಕ ತನಿಖೆಯಲ್ಲಿ ಕೇರಳ ಅರಣ್ಯ ಇಲಾಖೆ ಕಂಡುಕೊಂಡಿದೆ ಎಂದು ತಿಳಿದು ಬಂದಿತ್ತು.</p><p>ಆದರೆ, ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಎನ್ಟಿಸಿಎ ಒಂದು ವಾರದಲ್ಲಿ ವಿಸ್ತೃತ ವರದಿ ನೀಡುವಂತೆ ಕೇರಳ ಅರಣ್ಯ ಇಲಾಖೆಗೆ ತಾಕೀತು ಮಾಡಿದೆ. ಈ ಕುರಿತು ದಿ ಹಿಂದೂ ನ್ಯೂಸ್ ವೆಬ್ಸೈಟ್ ವರದಿ ಮಾಡಿದೆ.</p><p>ಮೃತ ಹುಲಿಯ ಮಾಹಿತಿಯು ಕೇರಳ ಅರಣ್ಯ ಅಧಿಕಾರಿಗಳ ಬಳಿ ಇರಲಿಲ್ಲ. ಆದ್ದರಿಂದ, ಇದು ಕೇರಳ ಭಾಗದ ಹುಲಿಯಾಗಿರಲಿಲ್ಲ. ಕರ್ನಾಟಕ ಅರಣ್ಯ ಪ್ರದೇಶಗಳಿಂದ ಇಲ್ಲಿಗೆ ಬಂದಿರಬಹುದು ಎಂದು ಅಂದಾಜಿಸಲಾಗಿದೆ. ಹುಲಿಯ ಸಾವಿಗೆ ಸಿಹಿ ಹಂಚಿ, ಪಟಾಕಿ ಸಿಡಿಸಿ ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದರು.</p>.ನರಭಕ್ಷಕ ಹುಲಿ ಹೊಟ್ಟೆಯೊಳಗೆ ಮೃತ ಮಹಿಳೆ ರಾಧಾ ಕೂದಲು, ಬಟ್ಟೆ, ಕಿವಿ ಓಲೆ ಪತ್ತೆ!.ರಿಷಿಕೇಶ: ಎರಡು ವರ್ಷಗಳ ಹಿಂದೆ ಸೆರೆಹಿಡಿಯಲಾಗಿದ್ದ ನರಭಕ್ಷಕ ಹುಲಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಯನಾಡ್</strong>: ಕಳೆದ ವಾರ ಕೇರಳದ ವಯನಾಡ್ನಲ್ಲಿನ ಕಾಫಿ ತೋಟವೊಂದರ ಕಾರ್ಮಿಕ ಮಹಿಳೆ ರಾಧಾ ಎನ್ನುವರ ಮೇಲೆ ದಾಳಿ ಮಾಡಿ ಕೊಂದಿದ್ದ ಹುಲಿಯ ಕಳೇಬರ ನಿನ್ನೆ ಬೆಳಗಿನ ಜಾವ ವಯನಾಡಿನ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿತ್ತು.</p><p>ಹುಲಿಯ ಕಳೇಬರ ಪತ್ತೆಯಾಗಿದ್ದರ ಬಗ್ಗೆ ಕೇರಳ ಅರಣ್ಯ ಇಲಾಖೆಯಿಂದ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ಟಿಸಿಎ) ವಿಸ್ತೃತ ವರದಿ ಕೇಳಿದೆ.</p><p>ಮತ್ತೊಂದು ಹುಲಿಯ ಜೊತೆ ಕಾದಾಟದಲ್ಲಿ ಕುತ್ತಿಗೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದರಿಂದ ನರಭಕ್ಷಕ ಹುಲಿ ಮೃತಪಟ್ಟಿದೆ ಎಂದು ಈಗಾಗಲೇ ಪ್ರಾಥಮಿಕ ತನಿಖೆಯಲ್ಲಿ ಕೇರಳ ಅರಣ್ಯ ಇಲಾಖೆ ಕಂಡುಕೊಂಡಿದೆ ಎಂದು ತಿಳಿದು ಬಂದಿತ್ತು.</p><p>ಆದರೆ, ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಎನ್ಟಿಸಿಎ ಒಂದು ವಾರದಲ್ಲಿ ವಿಸ್ತೃತ ವರದಿ ನೀಡುವಂತೆ ಕೇರಳ ಅರಣ್ಯ ಇಲಾಖೆಗೆ ತಾಕೀತು ಮಾಡಿದೆ. ಈ ಕುರಿತು ದಿ ಹಿಂದೂ ನ್ಯೂಸ್ ವೆಬ್ಸೈಟ್ ವರದಿ ಮಾಡಿದೆ.</p><p>ಮೃತ ಹುಲಿಯ ಮಾಹಿತಿಯು ಕೇರಳ ಅರಣ್ಯ ಅಧಿಕಾರಿಗಳ ಬಳಿ ಇರಲಿಲ್ಲ. ಆದ್ದರಿಂದ, ಇದು ಕೇರಳ ಭಾಗದ ಹುಲಿಯಾಗಿರಲಿಲ್ಲ. ಕರ್ನಾಟಕ ಅರಣ್ಯ ಪ್ರದೇಶಗಳಿಂದ ಇಲ್ಲಿಗೆ ಬಂದಿರಬಹುದು ಎಂದು ಅಂದಾಜಿಸಲಾಗಿದೆ. ಹುಲಿಯ ಸಾವಿಗೆ ಸಿಹಿ ಹಂಚಿ, ಪಟಾಕಿ ಸಿಡಿಸಿ ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದರು.</p>.ನರಭಕ್ಷಕ ಹುಲಿ ಹೊಟ್ಟೆಯೊಳಗೆ ಮೃತ ಮಹಿಳೆ ರಾಧಾ ಕೂದಲು, ಬಟ್ಟೆ, ಕಿವಿ ಓಲೆ ಪತ್ತೆ!.ರಿಷಿಕೇಶ: ಎರಡು ವರ್ಷಗಳ ಹಿಂದೆ ಸೆರೆಹಿಡಿಯಲಾಗಿದ್ದ ನರಭಕ್ಷಕ ಹುಲಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>