<p><strong>ಚಂಡೀಗಢ:</strong> ನವಜೋತ್ ಸಿಂಗ್ ಸಿಧು ಅವರನ್ನು ಪಂಜಾಬ್ ಕಾಂಗ್ರೆಸ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದರೆ ಸಕ್ರಿಯ ರಾಜಕಾರಣಕ್ಕೆ ಮರಳುತ್ತಾರೆ ಎಂದು ಅವರ ಪತ್ನಿಯೂ ಆಗಿರುವ ಪಕ್ಷದ ನಾಯಕಿ ನವಜೋತ್ ಕೌರ್ ಸಿಧು ಹೇಳಿದ್ದಾರೆ.</p>.ಸಿಎಂ ಭಗವಂತ್ ಮಾನ್ ಒಮ್ಮೆ ಕಾಂಗ್ರೆಸ್ ಸೇರಲು ಬಯಸಿದ್ದರು: ನವಜೋತ್ ಸಿಂಗ್ ಸಿಧು.<p>ಯಾವ ಪಕ್ಷಕ್ಕೂ ಕೊಡಲು ನಮ್ಮಲ್ಲಿ ಹಣ ಇಲ್ಲ. ಆದರೆ ಪಂಜಾಬ್ ಅನ್ನು ‘ಸುವರ್ಣ ರಾಜ್ಯ’ವನ್ನಾಗಿ ಪರಿವರ್ತಿಸುತ್ತೇವೆ ಎಂದು ಹೇಳಿದ್ದಾರೆ.</p><p>‘ನಾವು ಯಾವತ್ತೂ ಪಂಜಾವ್ ಹಾಗೂ ಪಂಜಾಬಿತನದ ಬಗ್ಗೆ ಮಾತನಾಡುತ್ತೇವೆ. ಆದರೆ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಳ್ಳಲು ₹ 500 ಕೋಟಿ ನೀಡಲು ನಮ್ಮಲ್ಲಿ ಹಣವಿಲ್ಲ’ ಎಂದು ಅವರು ಶನಿವಾರ ಮಾಧ್ಯಮದವರೊಂದಿಗೆ ಹೇಳಿದ್ದಾರೆ. </p><p>ರಾಜ್ಯದ ಕಾನೂನು ಸುವ್ಯವಸ್ಥೆ ಸೇರಿ ಹಲವು ವಿಷಯಗಳ ಬಗ್ಗೆ ಚರ್ಚಿಸಲು ರಾಜ್ಯಪಾಲ ಗುಲಾಬ್ ಚಂದ್ ಕಟಿಯಾರ್ ಅವರನ್ನು ಭೇಟಿಯಾದ ಬಳಿಕ ಹೀಗೆ ಹೇಳಿದ್ದಾರೆ.</p>.ಬ್ರಿಜ್ ವಿರುದ್ಧದ ಪ್ರತಿಭಟನೆಯಲ್ಲಿ ಕುಸ್ತಿಪಟುಗಳೊಂದಿಗೆ ನವಜೋತ್ ಸಿಂಗ್ ಸಿಧು ಭಾಗಿ.<p>ಯಾರಾದರೂ ಹಣಕ್ಕೆ ಬೇಡಿಕೆ ಇಟ್ಟಿದ್ದಾರಾ ಎನ್ನುವ ಪ್ರಶ್ನೆಗೆ ‘ಇಲ್ಲ’ ಎಂದು ಉತ್ತರಿಸಿದ ಅವರು, ‘ಯಾರಾದರೂ ₹ 500 ಕೋಟಿಯ ಸೂಟ್ಕೇಸ್ ಕೊಟ್ಟರೆ ಅವರು ಸಿಎಂ ಆಗುತ್ತಾರೆ’ ಎಂದು ಹೇಳಿದ್ದಾರೆ.</p><p>‘ಒಂದು ವೇಳೆ ಪಕ್ಷ ಅವರಿಗೆ ಅವಕಾಶ ನೀಡಿದರೆ ಪಂಜಾಬ್ ಅನ್ನು ಅಭಿವೃದ್ಧಿ ಪಡಿಸುತ್ತಾರೆ. ಯಾವ ಪಕ್ಷಕ್ಕೂ ಕೊಡಲು ನಮ್ಮಲ್ಲಿ ಹಣವಿಲ್ಲ. ಆದರೆ ನಾವು ಅಭಿವೃದ್ಧಿ ಪಡಿಸುತ್ತೇವೆ. ನಾವು ಪಂಜಾಬ್ ಅನ್ನು ಸುವರ್ಣ ರಾಜ್ಯವನ್ನಾಗಿ ಪರಿವರ್ತಿಸುತ್ತೇವೆ’ ಎಂದು ಹೇಳಿದ್ದಾರೆ.</p>.34 ವರ್ಷ ಹಳೆಯ ಹಲ್ಲೆ ಪ್ರಕರಣ: ನಾಳೆ ನವಜೋತ್ ಸಿಂಗ್ ಸಿಧು ಜೈಲಿನಿಂದ ಬಿಡುಗಡೆ.<p>‘ಪಂಜಾಬ್ ಕಾಂಗ್ರೆಸ್ನಲ್ಲಿ ಐದು ಮಂದಿ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಅವರು ಸಿಧುವನ್ನು ಮುಂದೆ ಬರಲು ಬಿಡುತ್ತಿಲ್ಲ’ ಎಂದು ಹೇಳಿದ್ದಾರೆ.</p><p>ನನ್ನ ಪತಿಗೆ ಕಾಂಗ್ರೆಸ್ ಹಾಗೂ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಗಟ್ಟಿ ಸಂಬಂಧವಿದೆ ಎಂದು ತಿಳಿಸಿದ್ದಾರೆ.</p><p>‘ಭಾರಿ ಒಳಜಗಳ ಇದ್ದು, ಈಗಾಗಲೇ ಐವರು ಆಕಾಂಕ್ಷಿಗಳು ಇರುವುದದರಿಂದ ಸಿಧುವನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿಸಲು ಅವರು ಬಿಡುವುದಿಲ್ಲ. ಹೈಕಮಾಂಡ್ಗೆ ಅದು ಅರ್ಥವಾದರೆ ಬೇರೆ ವಿಷಯ’ ಎಂದಿದ್ದಾರೆ.</p>.ನವಜೋತ್ ಸಿಂಗ್ ಸಿಧು ತಲೆ ಕತ್ತರಿಸಿದರೆ ₹5 ಲಕ್ಷ: ಬಜರಂಗದಳ.<p>ಒಂದು ವೇಳೆ ಬಿಜೆಪಿ ಸಿಧುಗೆ ಅವಕಾಶ ನೀಡಿದರೆ ಮತ್ತೆ ಬಿಜೆಪಿಗೆ ಸೇರುತ್ತಾರೆಯೇ ಎನ್ನುವ ಪ್ರಶ್ನೆಗೆ, ‘ಅವರ ಪರವಾಗಿ ನಾನು ಹೇಳಿಕೆ ನೀಡುವುದಿಲ್ಲ’ ಎಂದು ಹೇಳಿದ್ದಾರೆ.</p><p>ಪಂಜಾಬ್ ಕಾಂಗ್ರೆಸ್ನ ಮಾಜಿ ಅಧ್ಯಕ್ಷರೂ ಆಗಿರುವ ಸಿಧು, ಪಕ್ಷದ ಯಾವುದೇ ಕಾರ್ಯಕ್ರಮಗಲ್ಲಿ ಪಾಲ್ಗೊಳ್ಳುತ್ತಿಲ್ಲ. 2024ರ ಲೋಕಸಭಾ ಚುನಾವಣೆಯಲ್ಲೂ ಪಕ್ಷದ ಪರವಾಗಿ ಪ್ರಚಾರ ಮಾಡಿರಲಿಲ್ಲ.</p><p>2024ರ ಐಪಿಎಲ್ನಲ್ಲಿ ಮತ್ತೆ ಕಾಮೆಂಟೇಟರ್ ಆಗಿ ಮರಳಿದ್ದರು.</p>.‘ಪಾಕಿಸ್ತಾನ ಸೇನಾ ಮುಖ್ಯಸ್ಥರನ್ನು ಆಲಂಗಿಸಿದ್ದು ಭಾವನಾತ್ಮಕ ಕ್ಷಣ: ನವಜೋತ್ ಸಿಧು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ನವಜೋತ್ ಸಿಂಗ್ ಸಿಧು ಅವರನ್ನು ಪಂಜಾಬ್ ಕಾಂಗ್ರೆಸ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದರೆ ಸಕ್ರಿಯ ರಾಜಕಾರಣಕ್ಕೆ ಮರಳುತ್ತಾರೆ ಎಂದು ಅವರ ಪತ್ನಿಯೂ ಆಗಿರುವ ಪಕ್ಷದ ನಾಯಕಿ ನವಜೋತ್ ಕೌರ್ ಸಿಧು ಹೇಳಿದ್ದಾರೆ.</p>.ಸಿಎಂ ಭಗವಂತ್ ಮಾನ್ ಒಮ್ಮೆ ಕಾಂಗ್ರೆಸ್ ಸೇರಲು ಬಯಸಿದ್ದರು: ನವಜೋತ್ ಸಿಂಗ್ ಸಿಧು.<p>ಯಾವ ಪಕ್ಷಕ್ಕೂ ಕೊಡಲು ನಮ್ಮಲ್ಲಿ ಹಣ ಇಲ್ಲ. ಆದರೆ ಪಂಜಾಬ್ ಅನ್ನು ‘ಸುವರ್ಣ ರಾಜ್ಯ’ವನ್ನಾಗಿ ಪರಿವರ್ತಿಸುತ್ತೇವೆ ಎಂದು ಹೇಳಿದ್ದಾರೆ.</p><p>‘ನಾವು ಯಾವತ್ತೂ ಪಂಜಾವ್ ಹಾಗೂ ಪಂಜಾಬಿತನದ ಬಗ್ಗೆ ಮಾತನಾಡುತ್ತೇವೆ. ಆದರೆ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಳ್ಳಲು ₹ 500 ಕೋಟಿ ನೀಡಲು ನಮ್ಮಲ್ಲಿ ಹಣವಿಲ್ಲ’ ಎಂದು ಅವರು ಶನಿವಾರ ಮಾಧ್ಯಮದವರೊಂದಿಗೆ ಹೇಳಿದ್ದಾರೆ. </p><p>ರಾಜ್ಯದ ಕಾನೂನು ಸುವ್ಯವಸ್ಥೆ ಸೇರಿ ಹಲವು ವಿಷಯಗಳ ಬಗ್ಗೆ ಚರ್ಚಿಸಲು ರಾಜ್ಯಪಾಲ ಗುಲಾಬ್ ಚಂದ್ ಕಟಿಯಾರ್ ಅವರನ್ನು ಭೇಟಿಯಾದ ಬಳಿಕ ಹೀಗೆ ಹೇಳಿದ್ದಾರೆ.</p>.ಬ್ರಿಜ್ ವಿರುದ್ಧದ ಪ್ರತಿಭಟನೆಯಲ್ಲಿ ಕುಸ್ತಿಪಟುಗಳೊಂದಿಗೆ ನವಜೋತ್ ಸಿಂಗ್ ಸಿಧು ಭಾಗಿ.<p>ಯಾರಾದರೂ ಹಣಕ್ಕೆ ಬೇಡಿಕೆ ಇಟ್ಟಿದ್ದಾರಾ ಎನ್ನುವ ಪ್ರಶ್ನೆಗೆ ‘ಇಲ್ಲ’ ಎಂದು ಉತ್ತರಿಸಿದ ಅವರು, ‘ಯಾರಾದರೂ ₹ 500 ಕೋಟಿಯ ಸೂಟ್ಕೇಸ್ ಕೊಟ್ಟರೆ ಅವರು ಸಿಎಂ ಆಗುತ್ತಾರೆ’ ಎಂದು ಹೇಳಿದ್ದಾರೆ.</p><p>‘ಒಂದು ವೇಳೆ ಪಕ್ಷ ಅವರಿಗೆ ಅವಕಾಶ ನೀಡಿದರೆ ಪಂಜಾಬ್ ಅನ್ನು ಅಭಿವೃದ್ಧಿ ಪಡಿಸುತ್ತಾರೆ. ಯಾವ ಪಕ್ಷಕ್ಕೂ ಕೊಡಲು ನಮ್ಮಲ್ಲಿ ಹಣವಿಲ್ಲ. ಆದರೆ ನಾವು ಅಭಿವೃದ್ಧಿ ಪಡಿಸುತ್ತೇವೆ. ನಾವು ಪಂಜಾಬ್ ಅನ್ನು ಸುವರ್ಣ ರಾಜ್ಯವನ್ನಾಗಿ ಪರಿವರ್ತಿಸುತ್ತೇವೆ’ ಎಂದು ಹೇಳಿದ್ದಾರೆ.</p>.34 ವರ್ಷ ಹಳೆಯ ಹಲ್ಲೆ ಪ್ರಕರಣ: ನಾಳೆ ನವಜೋತ್ ಸಿಂಗ್ ಸಿಧು ಜೈಲಿನಿಂದ ಬಿಡುಗಡೆ.<p>‘ಪಂಜಾಬ್ ಕಾಂಗ್ರೆಸ್ನಲ್ಲಿ ಐದು ಮಂದಿ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಅವರು ಸಿಧುವನ್ನು ಮುಂದೆ ಬರಲು ಬಿಡುತ್ತಿಲ್ಲ’ ಎಂದು ಹೇಳಿದ್ದಾರೆ.</p><p>ನನ್ನ ಪತಿಗೆ ಕಾಂಗ್ರೆಸ್ ಹಾಗೂ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಗಟ್ಟಿ ಸಂಬಂಧವಿದೆ ಎಂದು ತಿಳಿಸಿದ್ದಾರೆ.</p><p>‘ಭಾರಿ ಒಳಜಗಳ ಇದ್ದು, ಈಗಾಗಲೇ ಐವರು ಆಕಾಂಕ್ಷಿಗಳು ಇರುವುದದರಿಂದ ಸಿಧುವನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿಸಲು ಅವರು ಬಿಡುವುದಿಲ್ಲ. ಹೈಕಮಾಂಡ್ಗೆ ಅದು ಅರ್ಥವಾದರೆ ಬೇರೆ ವಿಷಯ’ ಎಂದಿದ್ದಾರೆ.</p>.ನವಜೋತ್ ಸಿಂಗ್ ಸಿಧು ತಲೆ ಕತ್ತರಿಸಿದರೆ ₹5 ಲಕ್ಷ: ಬಜರಂಗದಳ.<p>ಒಂದು ವೇಳೆ ಬಿಜೆಪಿ ಸಿಧುಗೆ ಅವಕಾಶ ನೀಡಿದರೆ ಮತ್ತೆ ಬಿಜೆಪಿಗೆ ಸೇರುತ್ತಾರೆಯೇ ಎನ್ನುವ ಪ್ರಶ್ನೆಗೆ, ‘ಅವರ ಪರವಾಗಿ ನಾನು ಹೇಳಿಕೆ ನೀಡುವುದಿಲ್ಲ’ ಎಂದು ಹೇಳಿದ್ದಾರೆ.</p><p>ಪಂಜಾಬ್ ಕಾಂಗ್ರೆಸ್ನ ಮಾಜಿ ಅಧ್ಯಕ್ಷರೂ ಆಗಿರುವ ಸಿಧು, ಪಕ್ಷದ ಯಾವುದೇ ಕಾರ್ಯಕ್ರಮಗಲ್ಲಿ ಪಾಲ್ಗೊಳ್ಳುತ್ತಿಲ್ಲ. 2024ರ ಲೋಕಸಭಾ ಚುನಾವಣೆಯಲ್ಲೂ ಪಕ್ಷದ ಪರವಾಗಿ ಪ್ರಚಾರ ಮಾಡಿರಲಿಲ್ಲ.</p><p>2024ರ ಐಪಿಎಲ್ನಲ್ಲಿ ಮತ್ತೆ ಕಾಮೆಂಟೇಟರ್ ಆಗಿ ಮರಳಿದ್ದರು.</p>.‘ಪಾಕಿಸ್ತಾನ ಸೇನಾ ಮುಖ್ಯಸ್ಥರನ್ನು ಆಲಂಗಿಸಿದ್ದು ಭಾವನಾತ್ಮಕ ಕ್ಷಣ: ನವಜೋತ್ ಸಿಧು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>