<p><strong>ಚಂಡೀಗಡ:</strong> ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಶನಿವಾರ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ (ಪಿಪಿಸಿಸಿ) ಸುನಿಲ್ ಜಾಖಡ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.</p>.<p>ಅರ್ಧ ತಾಸಿಗೂ ಹೆಚ್ಚು ಹೊತ್ತು ಮಾತುಕತೆಯ ಬಳಿಕ ಪ್ರತಿಕ್ರಿಯಿಸಿರುವ ಸಿಧು, ಜಾಖಡ್ ತಮಗೆ ಹಿರಿಯ ಸೋದರನಾಗಿದ್ದು, ಮಾರ್ಗದರ್ಶಕ ಶಕ್ತಿ ಎಂದಿದ್ದಾರೆ.</p>.<p>ಇದನ್ನೂ ಓದಿ:<a href="https://cms.prajavani.net/india-news/amarinder-writes-to-sonia-expresses-reservation-over-sidhu-as-punjab-cong-chief-848815.html" itemprop="url">ಪಂಜಾಬ್ ಕಾಂಗ್ರೆಸ್ಗೆ ಸಿಧು ಹೆಸರು: ಸೋನಿಯಾಗೆ ಪತ್ರ ಬರೆದು ಅಮರಿಂದರ್ ಅತೃಪ್ತಿ </a></p>.<p>ಅತ್ತ ಸಿಧು ಸಮರ್ಥ ವ್ಯಕ್ತಿ ಎಂದು ಜಖರ್ ಬಣ್ಣಿಸಿದರು. ಆದರೆ ಸಿಧು ಹಾಗೂ ಸುನಿಲ್ ಭೇಟಿಯು ಕುತೂಹಲ ಮೂಡಿಸಿದೆ.</p>.<p>ಪಂಜಾಬ್ ಕಾಂಗ್ರೆಸ್ನ ಆಂತರಿಕ ಬಿಕ್ಕಟ್ಟು ಶಮನಗೊಳಿಸುವ ನಿಟ್ಟಿನಲ್ಲಿ ಸಿಧು ಅವರಿಗೆ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನೀಡಲು ಹೈಕಮಾಂಡ್ ಮುಂದಾಗಿದೆ ಎಂಬುದು ವರದಿಯಾಗಿದೆ.</p>.<p>ಮೂಲಗಳ ಪ್ರಕಾರ ಸಿಧು ಅವರಿಗೆ ಪಕ್ಷದಲ್ಲಿ ಪ್ರಮುಖ ಹುದ್ದೆ ನೀಡುವುದಕ್ಕೆ ಅಸಮಾಧಾನ ಸೂಚಿಸಿರುವ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ ಎನ್ನಲಾಗಿದೆ.</p>.<p>ಶುಕ್ರವಾರದಂದೇ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಂಜಾಬ್ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಹರೀಶ್ ರಾವತ್ ಉಪಸ್ಥಿತರಿದ್ದರು.</p>.<p>ಒಟ್ಟಿನಲ್ಲಿ ಅಮರಿಂದರ್ ಹಾಗೂ ಸಿಧು ಜೊತೆಯಾಗಿ ಕಾರ್ಯಾಚರಣೆ ಮುಂದುವರಿಸಲಿದ್ದಾರೆಯೇ ಎಂಬುದು ಕುತೂಹಲ ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ:</strong> ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಶನಿವಾರ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ (ಪಿಪಿಸಿಸಿ) ಸುನಿಲ್ ಜಾಖಡ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.</p>.<p>ಅರ್ಧ ತಾಸಿಗೂ ಹೆಚ್ಚು ಹೊತ್ತು ಮಾತುಕತೆಯ ಬಳಿಕ ಪ್ರತಿಕ್ರಿಯಿಸಿರುವ ಸಿಧು, ಜಾಖಡ್ ತಮಗೆ ಹಿರಿಯ ಸೋದರನಾಗಿದ್ದು, ಮಾರ್ಗದರ್ಶಕ ಶಕ್ತಿ ಎಂದಿದ್ದಾರೆ.</p>.<p>ಇದನ್ನೂ ಓದಿ:<a href="https://cms.prajavani.net/india-news/amarinder-writes-to-sonia-expresses-reservation-over-sidhu-as-punjab-cong-chief-848815.html" itemprop="url">ಪಂಜಾಬ್ ಕಾಂಗ್ರೆಸ್ಗೆ ಸಿಧು ಹೆಸರು: ಸೋನಿಯಾಗೆ ಪತ್ರ ಬರೆದು ಅಮರಿಂದರ್ ಅತೃಪ್ತಿ </a></p>.<p>ಅತ್ತ ಸಿಧು ಸಮರ್ಥ ವ್ಯಕ್ತಿ ಎಂದು ಜಖರ್ ಬಣ್ಣಿಸಿದರು. ಆದರೆ ಸಿಧು ಹಾಗೂ ಸುನಿಲ್ ಭೇಟಿಯು ಕುತೂಹಲ ಮೂಡಿಸಿದೆ.</p>.<p>ಪಂಜಾಬ್ ಕಾಂಗ್ರೆಸ್ನ ಆಂತರಿಕ ಬಿಕ್ಕಟ್ಟು ಶಮನಗೊಳಿಸುವ ನಿಟ್ಟಿನಲ್ಲಿ ಸಿಧು ಅವರಿಗೆ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನೀಡಲು ಹೈಕಮಾಂಡ್ ಮುಂದಾಗಿದೆ ಎಂಬುದು ವರದಿಯಾಗಿದೆ.</p>.<p>ಮೂಲಗಳ ಪ್ರಕಾರ ಸಿಧು ಅವರಿಗೆ ಪಕ್ಷದಲ್ಲಿ ಪ್ರಮುಖ ಹುದ್ದೆ ನೀಡುವುದಕ್ಕೆ ಅಸಮಾಧಾನ ಸೂಚಿಸಿರುವ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ ಎನ್ನಲಾಗಿದೆ.</p>.<p>ಶುಕ್ರವಾರದಂದೇ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಂಜಾಬ್ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಹರೀಶ್ ರಾವತ್ ಉಪಸ್ಥಿತರಿದ್ದರು.</p>.<p>ಒಟ್ಟಿನಲ್ಲಿ ಅಮರಿಂದರ್ ಹಾಗೂ ಸಿಧು ಜೊತೆಯಾಗಿ ಕಾರ್ಯಾಚರಣೆ ಮುಂದುವರಿಸಲಿದ್ದಾರೆಯೇ ಎಂಬುದು ಕುತೂಹಲ ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>