<p><strong>ನವದೆಹಲಿ:</strong> ದೇಶದಲ್ಲಿ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ 12ರಿಂದ 6ಕ್ಕೆ ಇಳಿದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ.</p>.<p>ನಕ್ಸಲಿಸಂ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಮತ್ತು ಮೂಲಸೌಕರ್ಯ ಅಭಿವೃದ್ಧಿಯಂತಹ ಪ್ರಯತ್ನಗಳೊಂದಿಗೆ ಮೋದಿ ಸರ್ಕಾರ 'ಸಶಕ್ತ, ಸುರಕ್ಷಿತ ಮತ್ತು ಸಮೃದ್ಧ ಭಾರತ'ವನ್ನು ನಿರ್ಮಿಸುತ್ತಿದೆ. 2026ರ ಮಾರ್ಚ್ 31ರೊಳಗೆ ನಕ್ಸಲಿಸಂ ಅನ್ನು ಶಾಶ್ವತವಾಗಿ ಕಿತ್ತೊಗೆಯಲು ಭಾರತ ದೃಢನಿಶ್ಚಯ ಮಾಡಿದೆ ಎಂದು ಅವರು ಹೇಳಿದ್ದಾರೆ.</p>.<p>'ನಕ್ಸಲ್ ಮುಕ್ತ ಭಾರತವನ್ನು ನಿರ್ಮಿಸುವತ್ತ ಹೆಜ್ಜೆ ಇಡುತ್ತಿರುವ ನಮ್ಮ ರಾಷ್ಟ್ರ ಇಂದು ಎಡಪಂಥೀಯ ಉಗ್ರವಾದದಿಂದ ಹೆಚ್ಚು ಪ್ರಭಾವಿತವಾಗಿರುವ ಜಿಲ್ಲೆಗಳ ಸಂಖ್ಯೆಯನ್ನು 12ರಿಂದ ಕೇವಲ 6ಕ್ಕೆ ಇಳಿಸುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ' ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.ಶಸ್ತ್ರಾಸ್ತ್ರಗಳಿಂದ ಬದಲಾವಣೆ ಅಸಾಧ್ಯ: ನಕ್ಸಲ್ ಹಿಂಸಾಚಾರದ ಕುರಿತು ಶಾ ಹೇಳಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಲ್ಲಿ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ 12ರಿಂದ 6ಕ್ಕೆ ಇಳಿದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ.</p>.<p>ನಕ್ಸಲಿಸಂ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಮತ್ತು ಮೂಲಸೌಕರ್ಯ ಅಭಿವೃದ್ಧಿಯಂತಹ ಪ್ರಯತ್ನಗಳೊಂದಿಗೆ ಮೋದಿ ಸರ್ಕಾರ 'ಸಶಕ್ತ, ಸುರಕ್ಷಿತ ಮತ್ತು ಸಮೃದ್ಧ ಭಾರತ'ವನ್ನು ನಿರ್ಮಿಸುತ್ತಿದೆ. 2026ರ ಮಾರ್ಚ್ 31ರೊಳಗೆ ನಕ್ಸಲಿಸಂ ಅನ್ನು ಶಾಶ್ವತವಾಗಿ ಕಿತ್ತೊಗೆಯಲು ಭಾರತ ದೃಢನಿಶ್ಚಯ ಮಾಡಿದೆ ಎಂದು ಅವರು ಹೇಳಿದ್ದಾರೆ.</p>.<p>'ನಕ್ಸಲ್ ಮುಕ್ತ ಭಾರತವನ್ನು ನಿರ್ಮಿಸುವತ್ತ ಹೆಜ್ಜೆ ಇಡುತ್ತಿರುವ ನಮ್ಮ ರಾಷ್ಟ್ರ ಇಂದು ಎಡಪಂಥೀಯ ಉಗ್ರವಾದದಿಂದ ಹೆಚ್ಚು ಪ್ರಭಾವಿತವಾಗಿರುವ ಜಿಲ್ಲೆಗಳ ಸಂಖ್ಯೆಯನ್ನು 12ರಿಂದ ಕೇವಲ 6ಕ್ಕೆ ಇಳಿಸುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ' ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.ಶಸ್ತ್ರಾಸ್ತ್ರಗಳಿಂದ ಬದಲಾವಣೆ ಅಸಾಧ್ಯ: ನಕ್ಸಲ್ ಹಿಂಸಾಚಾರದ ಕುರಿತು ಶಾ ಹೇಳಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>