<p><strong>ಬಿಜಾಪುರ (ಛತ್ತೀಸಗಢ):</strong> ಇಲ್ಲಿನ ಗಂಗಲೂರು ಅರಣ್ಯ ಪ್ರದೇಶದಲ್ಲಿ ನಕ್ಸಲರು ಹಾಗೂ ಭದ್ರತಾ ಸಿಬ್ಬಂದಿಯ ನಡುವೆ ಬುಧವಾರ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ 12 ಮಂದಿ ನಕ್ಸಲರನ್ನು ಹೊಡೆದುರುಳಿಸಲಾಗಿದ್ದು, ಜಿಲ್ಲಾ ಮೀಸಲು ಪೊಲೀಸ್ ಪಡೆಯ (ಡಿಆರ್ಜಿ) ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ.</p>.<p>ರಾಜ್ಯ ಪೊಲೀಸರ ಡಿಆರ್ಜಿ ಘಟಕ ಹಾಗೂ ವಿಶೇಷ ಕಾರ್ಯಪಡೆ ಮತ್ತು ಸಿಆರ್ಪಿಎಫ್ನ ಕೋಬ್ರಾ ತುಕಡಿಯ ಸಿಬ್ಬಂದಿ ಜಂಟಿಯಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಗೆ ಮುಂದಾಗಿದ್ದರು. ಈ ವೇಳೆ ಗುಂಡಿನ ಚಕಮಕಿ ನಡೆದಿದೆ.</p>.<p>ಮುಖ್ಯ ಕಾನ್ಸ್ಟೆಬಲ್ ಮೋನು ವಡಾದಿ, ಕಾನ್ಸ್ಟೆಬಲ್ ದುಕಾರು ಗೋಂಡೆ ಹಾಗೂ ಜವಾನ್ ರಮೇಶ್ ಸೋಧಿ ಅವರು ಮೃತಪಟ್ಟಿದ್ದಾರೆ. ಡಿಆರ್ಜಿಯ ಇನ್ನಿಬ್ಬರು ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಘಟನಾ ಸ್ಥಳದಿಂದ ಸಿಂಗಲ್ ಲೋಡಿಂಗ್ ರೈಫಲ್ಸ್, ಇನ್ಸಾಸ್ ರೈಫಲ್ಸ್, .303 ರೈಫಲ್ಸ್ ಹಾಗೂ ಇತರೆ ಮದ್ದುಗುಂಡು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತ ನಕ್ಸಲರ ಗುರುತನ್ನು ಪತ್ತೆಹಚ್ಚಬೇಕಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದೂ ಮಾಹಿತಿ ನೀಡಿದ್ದಾರೆ.</p>.<p>ಈ ಕಾರ್ಯಾಚರಣೆಯೊಂದಿಗೆ ಪ್ರಸಕ್ತ ವರ್ಷದಲ್ಲಿ 275 ನಕ್ಸಲರನ್ನು ಛತ್ತೀಸಗಢದಲ್ಲಿ ಎನ್ಕೌಂಟರ್ ಮಾಡಿದಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಜಾಪುರ (ಛತ್ತೀಸಗಢ):</strong> ಇಲ್ಲಿನ ಗಂಗಲೂರು ಅರಣ್ಯ ಪ್ರದೇಶದಲ್ಲಿ ನಕ್ಸಲರು ಹಾಗೂ ಭದ್ರತಾ ಸಿಬ್ಬಂದಿಯ ನಡುವೆ ಬುಧವಾರ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ 12 ಮಂದಿ ನಕ್ಸಲರನ್ನು ಹೊಡೆದುರುಳಿಸಲಾಗಿದ್ದು, ಜಿಲ್ಲಾ ಮೀಸಲು ಪೊಲೀಸ್ ಪಡೆಯ (ಡಿಆರ್ಜಿ) ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ.</p>.<p>ರಾಜ್ಯ ಪೊಲೀಸರ ಡಿಆರ್ಜಿ ಘಟಕ ಹಾಗೂ ವಿಶೇಷ ಕಾರ್ಯಪಡೆ ಮತ್ತು ಸಿಆರ್ಪಿಎಫ್ನ ಕೋಬ್ರಾ ತುಕಡಿಯ ಸಿಬ್ಬಂದಿ ಜಂಟಿಯಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಗೆ ಮುಂದಾಗಿದ್ದರು. ಈ ವೇಳೆ ಗುಂಡಿನ ಚಕಮಕಿ ನಡೆದಿದೆ.</p>.<p>ಮುಖ್ಯ ಕಾನ್ಸ್ಟೆಬಲ್ ಮೋನು ವಡಾದಿ, ಕಾನ್ಸ್ಟೆಬಲ್ ದುಕಾರು ಗೋಂಡೆ ಹಾಗೂ ಜವಾನ್ ರಮೇಶ್ ಸೋಧಿ ಅವರು ಮೃತಪಟ್ಟಿದ್ದಾರೆ. ಡಿಆರ್ಜಿಯ ಇನ್ನಿಬ್ಬರು ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಘಟನಾ ಸ್ಥಳದಿಂದ ಸಿಂಗಲ್ ಲೋಡಿಂಗ್ ರೈಫಲ್ಸ್, ಇನ್ಸಾಸ್ ರೈಫಲ್ಸ್, .303 ರೈಫಲ್ಸ್ ಹಾಗೂ ಇತರೆ ಮದ್ದುಗುಂಡು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತ ನಕ್ಸಲರ ಗುರುತನ್ನು ಪತ್ತೆಹಚ್ಚಬೇಕಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದೂ ಮಾಹಿತಿ ನೀಡಿದ್ದಾರೆ.</p>.<p>ಈ ಕಾರ್ಯಾಚರಣೆಯೊಂದಿಗೆ ಪ್ರಸಕ್ತ ವರ್ಷದಲ್ಲಿ 275 ನಕ್ಸಲರನ್ನು ಛತ್ತೀಸಗಢದಲ್ಲಿ ಎನ್ಕೌಂಟರ್ ಮಾಡಿದಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>