<p>ರಾಂಚಿ: ಜಾರ್ಖಂಡ್ನ ಪಲಮು ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಭದ್ರತಾ ಪಡೆಯ ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ.</p>.<p>ಸಿಪಿಐ-ಮಾವೋವಾದಿಯಿಂದ ಬೇರ್ಪಟ್ಟಿರುವ ನಿಷೇಧಿತ ತೃತೀಯ ಸಮ್ಮೇಳನ್ ಪ್ರಸ್ತುತಿ ಸಮಿತಿಯ (ಟಿಎಸ್ಪಿಸಿ) ನಕ್ಸಲರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಕೆದಾಲ್ ಎಂಬ ಗ್ರಾಮದಲ್ಲಿ ರಾತ್ರಿ 12.30ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿತ್ತು ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. </p>.<p>ಮೃತ ಸಿಬ್ಬಂದಿಯನ್ನು ಕಾನ್ಸ್ಟೆಬಲ್ಗಳಾದ ಸಂತಾನ್ ಮೆಹ್ತಾ, ಸುನಿಲ್ ರಾಮ್ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಲಮು ಡಿಐಜಿ ನೌಶದ್ ಆಲಂ ಹೇಳಿದ್ದಾರೆ. </p>.<p>ಟಿಎಸ್ಪಿಸಿ ಸಂಘಟನೆಯ ಕಮಾಂಡರ್ ಶಶಿಕಾಂತ್ ಗಂಜು ಹಾಗೂ ಆತನ ಸಹಚರರು ಕೆದಾಲ್ ಗ್ರಾಮದಲ್ಲಿ ಅಡಗಿದ್ದಾರೆಂಬ ಮಾಹಿತಿಯ ಮೇರೆಗೆ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು.</p>.<p>ಈ ವೇಳೆ ಭದ್ರತಾ ಸಿಬ್ಬಂದಿ ಮೇಲೆ ಗುಂಡುಹಾರಿಸಿ ನಕ್ಸಲರು ಪರಾರಿಯಾಗಿದ್ದಾರೆ, ಶೋಧ ಮುಂದುವರಿಯುತ್ತಿದೆ ಎಂದು ಎಸ್ಪಿ ರೀಶ್ಮಾ ರಮೇಶನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಂಚಿ: ಜಾರ್ಖಂಡ್ನ ಪಲಮು ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಭದ್ರತಾ ಪಡೆಯ ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ.</p>.<p>ಸಿಪಿಐ-ಮಾವೋವಾದಿಯಿಂದ ಬೇರ್ಪಟ್ಟಿರುವ ನಿಷೇಧಿತ ತೃತೀಯ ಸಮ್ಮೇಳನ್ ಪ್ರಸ್ತುತಿ ಸಮಿತಿಯ (ಟಿಎಸ್ಪಿಸಿ) ನಕ್ಸಲರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಕೆದಾಲ್ ಎಂಬ ಗ್ರಾಮದಲ್ಲಿ ರಾತ್ರಿ 12.30ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿತ್ತು ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. </p>.<p>ಮೃತ ಸಿಬ್ಬಂದಿಯನ್ನು ಕಾನ್ಸ್ಟೆಬಲ್ಗಳಾದ ಸಂತಾನ್ ಮೆಹ್ತಾ, ಸುನಿಲ್ ರಾಮ್ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಲಮು ಡಿಐಜಿ ನೌಶದ್ ಆಲಂ ಹೇಳಿದ್ದಾರೆ. </p>.<p>ಟಿಎಸ್ಪಿಸಿ ಸಂಘಟನೆಯ ಕಮಾಂಡರ್ ಶಶಿಕಾಂತ್ ಗಂಜು ಹಾಗೂ ಆತನ ಸಹಚರರು ಕೆದಾಲ್ ಗ್ರಾಮದಲ್ಲಿ ಅಡಗಿದ್ದಾರೆಂಬ ಮಾಹಿತಿಯ ಮೇರೆಗೆ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು.</p>.<p>ಈ ವೇಳೆ ಭದ್ರತಾ ಸಿಬ್ಬಂದಿ ಮೇಲೆ ಗುಂಡುಹಾರಿಸಿ ನಕ್ಸಲರು ಪರಾರಿಯಾಗಿದ್ದಾರೆ, ಶೋಧ ಮುಂದುವರಿಯುತ್ತಿದೆ ಎಂದು ಎಸ್ಪಿ ರೀಶ್ಮಾ ರಮೇಶನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>