<p>ಜಗದಲಪುರ (ಪಿಟಿಐ): ಭದ್ರತಾ ಪಡೆಗಳ ಧೈರ್ಯ, ಶೌರ್ಯ ಮತ್ತು ತ್ಯಾಗದ ಫಲವಾಗಿ ಮಾರ್ಚ್ 31ರ ಗಡುವಿಗೂ ಮುನ್ನವೇ ದೇಶವು ನಕ್ಸಲ್ ಮುಕ್ತವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಕ್ಸಲ್ ಮುಕ್ತ ಅಭಿಯಾನದಲ್ಲಿ ಕೆಲವು ದಿನಾಂಕಗಳು ಐತಿಹಾಸಿಕ ಮಹತ್ವವನ್ನು ಹೊಂದಿವೆ. 2023ರ ಡಿ.13ರಂದು ಛತ್ತೀಸಗಢದಲ್ಲಿ ಬಿಜೆಪಿ ಸರ್ಕಾರ ಸ್ಥಾಪನೆಯಾದಾಗ ನಕ್ಸಲ್ವಾದದ ನಿರ್ಮೂಲನೆಗೆ ಅಭಿಯಾನ ಆರಂಭಿಸಲಾಯಿತು’ ಎಂದರು.</p>.<p>2024ರ ಆಗಸ್ಟ್ 24ರಂದು ಎಲ್ಲಾ ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರ ಸಭೆ ಸೇರಿ 2026ರ ಮಾರ್ಚ್ 31ರ ಒಳಗಾಗಿ ದೇಶವನ್ನು ನಕ್ಸಲ್ ಮುಕ್ತ ಮಾಡಬೇಕು ಎಂಬ ನಿರ್ಣಯ ಕೈಗೊಳ್ಳಲಾಗಿತ್ತು ಎಂದರು.</p>.<p>‘ಮಾರ್ಚ್ 31ರ ಗಡುವಿಗೂ ಮುನ್ನವೇ ಭದ್ರತಾ ಪಡೆಗಳ ಧೈರ್ಯ, ಶೌರ್ಯ, ತ್ಯಾಗದ ಪರಿಣಾವಾಗಿ ದೇಶದಲ್ಲಿ ನಕ್ಸಲ್ವಾದವು ಸಂಪೂರ್ಣವಾಗಿ ನಿರ್ನಾಮವಾಗಿದೆ’ ಎಂದರು.</p>.<p>ಬಿಜೆಪಿ ಅಧಿಕಾರದಲ್ಲಿ ಇಲ್ಲದ ಹಲವು ರಾಜ್ಯಗಳ ಸರ್ಕಾರಗಳು ನಕ್ಸಲ್ ಮುಕ್ತ ಭಾರತಕ್ಕಾಗಿ ಬೆಂಬಲ ನೀಡಿದ್ದವು ಎಂದು ಯಾವುದೇ ಹಿಂಜರಿಕೆ ಇಲ್ಲದೆ ಹೇಳುತ್ತೇನೆ. ಆದರೆ ಈ ಹಿಂದಿನ ಛತ್ತೀಸಗಢ ಸರ್ಕಾರ ಮಾತ್ರ ಬೆಂಬಲ ನೀಡಿರಲಿಲ್ಲ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-51-244539453</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಗದಲಪುರ (ಪಿಟಿಐ): ಭದ್ರತಾ ಪಡೆಗಳ ಧೈರ್ಯ, ಶೌರ್ಯ ಮತ್ತು ತ್ಯಾಗದ ಫಲವಾಗಿ ಮಾರ್ಚ್ 31ರ ಗಡುವಿಗೂ ಮುನ್ನವೇ ದೇಶವು ನಕ್ಸಲ್ ಮುಕ್ತವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಕ್ಸಲ್ ಮುಕ್ತ ಅಭಿಯಾನದಲ್ಲಿ ಕೆಲವು ದಿನಾಂಕಗಳು ಐತಿಹಾಸಿಕ ಮಹತ್ವವನ್ನು ಹೊಂದಿವೆ. 2023ರ ಡಿ.13ರಂದು ಛತ್ತೀಸಗಢದಲ್ಲಿ ಬಿಜೆಪಿ ಸರ್ಕಾರ ಸ್ಥಾಪನೆಯಾದಾಗ ನಕ್ಸಲ್ವಾದದ ನಿರ್ಮೂಲನೆಗೆ ಅಭಿಯಾನ ಆರಂಭಿಸಲಾಯಿತು’ ಎಂದರು.</p>.<p>2024ರ ಆಗಸ್ಟ್ 24ರಂದು ಎಲ್ಲಾ ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರ ಸಭೆ ಸೇರಿ 2026ರ ಮಾರ್ಚ್ 31ರ ಒಳಗಾಗಿ ದೇಶವನ್ನು ನಕ್ಸಲ್ ಮುಕ್ತ ಮಾಡಬೇಕು ಎಂಬ ನಿರ್ಣಯ ಕೈಗೊಳ್ಳಲಾಗಿತ್ತು ಎಂದರು.</p>.<p>‘ಮಾರ್ಚ್ 31ರ ಗಡುವಿಗೂ ಮುನ್ನವೇ ಭದ್ರತಾ ಪಡೆಗಳ ಧೈರ್ಯ, ಶೌರ್ಯ, ತ್ಯಾಗದ ಪರಿಣಾವಾಗಿ ದೇಶದಲ್ಲಿ ನಕ್ಸಲ್ವಾದವು ಸಂಪೂರ್ಣವಾಗಿ ನಿರ್ನಾಮವಾಗಿದೆ’ ಎಂದರು.</p>.<p>ಬಿಜೆಪಿ ಅಧಿಕಾರದಲ್ಲಿ ಇಲ್ಲದ ಹಲವು ರಾಜ್ಯಗಳ ಸರ್ಕಾರಗಳು ನಕ್ಸಲ್ ಮುಕ್ತ ಭಾರತಕ್ಕಾಗಿ ಬೆಂಬಲ ನೀಡಿದ್ದವು ಎಂದು ಯಾವುದೇ ಹಿಂಜರಿಕೆ ಇಲ್ಲದೆ ಹೇಳುತ್ತೇನೆ. ಆದರೆ ಈ ಹಿಂದಿನ ಛತ್ತೀಸಗಢ ಸರ್ಕಾರ ಮಾತ್ರ ಬೆಂಬಲ ನೀಡಿರಲಿಲ್ಲ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-51-244539453</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>