<p>ಭುವನೇಶ್ವರ: ಒಡಿಶಾದ ಕಂಧಮಾಲ್ನಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಕುಖ್ಯಾತ ನಕ್ಸಲ್ ನಾಯಕ ಗಣೇಶ್ ಉಯಿಕೆ ಸೇರಿದಂತೆ 4 ಮಂದಿ ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p> <p>ರಾಜ್ಯದಲ್ಲಿ ನಿಷೇಧಿತ ಸಿಪಿಐ(ಮಾವೋವಾದಿ) ಸಂಘಟನೆಯ ಕೇಂದ್ರ ಸಮಿತಿ ಸದಸ್ಯರಾದ ಉಯಿಕೆ ಬಗ್ಗೆ ಮಾಹಿತಿ ನೀಡಿದವರಿಗೆ ₹1.1 ಕೋಟಿ ಬಹುಮಾನ ಘೋಷಿಸಲಾಗಿತ್ತು ಎಂದು ನಕ್ಸಲ್ ನಿಗ್ರಹ ಕಾರ್ಯಾಚರಣೆಯ ನೇತೃತ್ವ ವಹಿಸಿರುವ ಅಧಿಕಾರಿ ತಿಳಿಸಿದ್ದಾರೆ.</p><p>ಚಕಪಾಡ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ.</p><p> ‘ಗುಂಡಿನ ಕಾಳಗದಲ್ಲಿ ಹತನಾದ ಒಬ್ಬ ನಕ್ಸಲನನ್ನು 69 ವರ್ಷದ ಉಯಿಕೆ ಎಂದು ಗುರುತಿಸಲಾಗಿದೆ. ಆತನನ್ನು ಪಕ್ಕ ಹನುಮಂತು ಎಂದೂ ಕರೆಯಲಾಗುತ್ತದೆ. ಗಣೇಶ್ ಅವರು ತೆಲಂಗಾಣದ ಚೆಂದೈರ್ ಮಂಡಲದ ಪುಲ್ಲೆಮಲ ಹಳ್ಳಿಯ ನಿವಾಸಿಯಾಗಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.</p><p>ಉಳಿದ ಮೂವರು ನಕ್ಸಲರ ಮೂಲ ಇನ್ನಷ್ಟೇ ತಿಳಿಯಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಈ ಕುರಿತಂತೆ ಎಕ್ಸ್ ಪೋಸ್ಟ್ನಲ್ಲಿ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ನಕ್ಸಲ್ ಮುಕ್ತ ಭಾರತದತ್ತ ಮಹತ್ವದ ಮೈಲಿಗಲ್ಲು’ ಎಂದು ಬಣ್ಣಿಸಿದ್ದಾರೆ. </p><p>ಈ ಕಾರ್ಯಾಚರಣೆಯ ಮೂಲಕ ಒಡಿಶಾ ಸಂಪೂರ್ಣ ನಕ್ಸಲ್ ಮುಕ್ತ ರಾಜ್ಯವಾಗುವತ್ತ ಸಾಗಿದೆ. ಮಾರ್ಚ್ 31ರ ಹೊತ್ತಿಗೆ ಇದನ್ನು ಸಾಧಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭುವನೇಶ್ವರ: ಒಡಿಶಾದ ಕಂಧಮಾಲ್ನಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಕುಖ್ಯಾತ ನಕ್ಸಲ್ ನಾಯಕ ಗಣೇಶ್ ಉಯಿಕೆ ಸೇರಿದಂತೆ 4 ಮಂದಿ ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p> <p>ರಾಜ್ಯದಲ್ಲಿ ನಿಷೇಧಿತ ಸಿಪಿಐ(ಮಾವೋವಾದಿ) ಸಂಘಟನೆಯ ಕೇಂದ್ರ ಸಮಿತಿ ಸದಸ್ಯರಾದ ಉಯಿಕೆ ಬಗ್ಗೆ ಮಾಹಿತಿ ನೀಡಿದವರಿಗೆ ₹1.1 ಕೋಟಿ ಬಹುಮಾನ ಘೋಷಿಸಲಾಗಿತ್ತು ಎಂದು ನಕ್ಸಲ್ ನಿಗ್ರಹ ಕಾರ್ಯಾಚರಣೆಯ ನೇತೃತ್ವ ವಹಿಸಿರುವ ಅಧಿಕಾರಿ ತಿಳಿಸಿದ್ದಾರೆ.</p><p>ಚಕಪಾಡ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ.</p><p> ‘ಗುಂಡಿನ ಕಾಳಗದಲ್ಲಿ ಹತನಾದ ಒಬ್ಬ ನಕ್ಸಲನನ್ನು 69 ವರ್ಷದ ಉಯಿಕೆ ಎಂದು ಗುರುತಿಸಲಾಗಿದೆ. ಆತನನ್ನು ಪಕ್ಕ ಹನುಮಂತು ಎಂದೂ ಕರೆಯಲಾಗುತ್ತದೆ. ಗಣೇಶ್ ಅವರು ತೆಲಂಗಾಣದ ಚೆಂದೈರ್ ಮಂಡಲದ ಪುಲ್ಲೆಮಲ ಹಳ್ಳಿಯ ನಿವಾಸಿಯಾಗಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.</p><p>ಉಳಿದ ಮೂವರು ನಕ್ಸಲರ ಮೂಲ ಇನ್ನಷ್ಟೇ ತಿಳಿಯಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಈ ಕುರಿತಂತೆ ಎಕ್ಸ್ ಪೋಸ್ಟ್ನಲ್ಲಿ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ನಕ್ಸಲ್ ಮುಕ್ತ ಭಾರತದತ್ತ ಮಹತ್ವದ ಮೈಲಿಗಲ್ಲು’ ಎಂದು ಬಣ್ಣಿಸಿದ್ದಾರೆ. </p><p>ಈ ಕಾರ್ಯಾಚರಣೆಯ ಮೂಲಕ ಒಡಿಶಾ ಸಂಪೂರ್ಣ ನಕ್ಸಲ್ ಮುಕ್ತ ರಾಜ್ಯವಾಗುವತ್ತ ಸಾಗಿದೆ. ಮಾರ್ಚ್ 31ರ ಹೊತ್ತಿಗೆ ಇದನ್ನು ಸಾಧಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>