<p><strong>ಹೈದರಾಬಾದ್</strong>: ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಯ 17 ಸದಸ್ಯರು (ನಕ್ಸಲರು) ಇಂದು ತೆಲಂಗಾಣದ ಭದ್ರಾದ್ರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುಂದೆ ಶರಣಾಗಿದ್ದಾರೆ.</p><p>ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ಇವರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ತೆಲಂಗಾಣ ಸರ್ಕಾರ ಕೈಗೊಂಡಿರುವ ‘ಆಪರೇಷನ್ ಚೇಯುತಾ’ ಕಾರ್ಯಕ್ರಮದಡಿ ನಕ್ಸಲರು ಶರಣಾಗತರಾಗಿದ್ದಾರೆ. ಸದ್ಯ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಎಸ್ಪಿ ಪಿಟಿಐಗೆ ತಿಳಿಸಿದ್ದಾರೆ.</p><p>ಇದರೊಂದಿಗೆ ಈ ವರ್ಷ ಛತ್ತೀಸಗಢ, ತೆಲಂಗಾಣ, ಮಧ್ಯಪ್ರದೇಶ, ಒಡಿಶಾ, ಜಾರ್ಖಂಡ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಪೊಲೀಸರಿಗೆ ಶರಣಾಗತರಾದ ನಕ್ಸಲರ ಸಂಖ್ಯೆ 282 ಆಗಿದೆ.</p><p>ಛತ್ತೀಸಗಢ–ತೆಲಂಗಾಣ ಗಡಿಗಳ ಕಾಡುಗಳಲ್ಲಿ ಹಾಗೂ ಮಾಹಾರಾಷ್ಟ್ರ, ಮಧ್ಯಪ್ರದೇಶ, ಜಾರ್ಖಂಡ್ನಲ್ಲಿ ಹೆಚ್ಚು ಸಕ್ರಿಯವಾಗಿರುವ ನಕ್ಸಲರ ನಿಗ್ರಹಕ್ಕೆ ಸಿಆರ್ಪಿಎಫ್ ಪಡೆಗಳ ಜೊತೆ ಸ್ಥಳೀಯ ಪೊಲೀಸ್ ಪಡೆಗಳು ವ್ಯಾಪಕ ಕಾರ್ಯಾಚರಣೆ ನಡೆಸುತ್ತಿವೆ. ಕಾರ್ಯಾಚರಣೆಯಲ್ಲಿ ಹಲವು ನಕ್ಸಲರು ಹತರಾದರೆ, ಅನೇಕರು ಪೊಲೀಸರಿಗೆ ಶರಣಾಗುತ್ತಿದ್ದಾರೆ.</p><p>ತೆಲಂಗಾಣದ ಕಾಡುಗಳಲ್ಲಿ ನಕ್ಸಲ್ ಚಲನವಲನದ ಕುರಿತು ಸ್ಥಳೀಯರು ಪೊಲೀಸರಿಗೆ ತಪ್ಪದೇ ಮಾಹಿತಿ ನೀಡಬೇಕು ಎಂದು ಕಟ್ಟುನಿಟ್ಟಿನ ಆದೇಶ ಮಾಡಲಾಗಿದೆ. ಇದರಿಂದ ಅಲ್ಲಿ ನಕ್ಸಲರಿಗೆ ತೀವ್ರ ಹಿನ್ನಡೆಯಾಗುತ್ತಿದೆ. ಶರಣಾಗತರ ಸಂಖ್ಯೆಯೂ ಹೆಚ್ಚುತ್ತಿದೆ.</p><p>ಇತ್ತೀಚೆಗೆ ತೆಲಂಗಾಣದಲ್ಲಿ ಸ್ಥಳೀಯರು ನೀಡಿದ ಮಾಹಿತಿಯಿಂದಲೇ ಮುಲುಗು ಜಿಲ್ಲೆಯಲ್ಲಿ 21 ನಕ್ಸಲರನ್ನು ಬಂಧಿಸಲು ಸಾಧ್ಯವಾಯಿತು ಎಂದು ಪೊಲೀಸರು ಹೇಳಿದ್ದಾರೆ.</p><p>ಕೇಂದ್ರ ಗೃಹ ಇಲಾಖೆ 2026 ಮಾರ್ಚ್ ಒಳಗೆ ದೇಶವನ್ನು ನಕ್ಸಲ್ ಮುಕ್ತ ಮಾಡಲಾಗುವುದು ಎಂದು ಶಪಥ ತೊಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಯ 17 ಸದಸ್ಯರು (ನಕ್ಸಲರು) ಇಂದು ತೆಲಂಗಾಣದ ಭದ್ರಾದ್ರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುಂದೆ ಶರಣಾಗಿದ್ದಾರೆ.</p><p>ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ಇವರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ತೆಲಂಗಾಣ ಸರ್ಕಾರ ಕೈಗೊಂಡಿರುವ ‘ಆಪರೇಷನ್ ಚೇಯುತಾ’ ಕಾರ್ಯಕ್ರಮದಡಿ ನಕ್ಸಲರು ಶರಣಾಗತರಾಗಿದ್ದಾರೆ. ಸದ್ಯ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಎಸ್ಪಿ ಪಿಟಿಐಗೆ ತಿಳಿಸಿದ್ದಾರೆ.</p><p>ಇದರೊಂದಿಗೆ ಈ ವರ್ಷ ಛತ್ತೀಸಗಢ, ತೆಲಂಗಾಣ, ಮಧ್ಯಪ್ರದೇಶ, ಒಡಿಶಾ, ಜಾರ್ಖಂಡ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಪೊಲೀಸರಿಗೆ ಶರಣಾಗತರಾದ ನಕ್ಸಲರ ಸಂಖ್ಯೆ 282 ಆಗಿದೆ.</p><p>ಛತ್ತೀಸಗಢ–ತೆಲಂಗಾಣ ಗಡಿಗಳ ಕಾಡುಗಳಲ್ಲಿ ಹಾಗೂ ಮಾಹಾರಾಷ್ಟ್ರ, ಮಧ್ಯಪ್ರದೇಶ, ಜಾರ್ಖಂಡ್ನಲ್ಲಿ ಹೆಚ್ಚು ಸಕ್ರಿಯವಾಗಿರುವ ನಕ್ಸಲರ ನಿಗ್ರಹಕ್ಕೆ ಸಿಆರ್ಪಿಎಫ್ ಪಡೆಗಳ ಜೊತೆ ಸ್ಥಳೀಯ ಪೊಲೀಸ್ ಪಡೆಗಳು ವ್ಯಾಪಕ ಕಾರ್ಯಾಚರಣೆ ನಡೆಸುತ್ತಿವೆ. ಕಾರ್ಯಾಚರಣೆಯಲ್ಲಿ ಹಲವು ನಕ್ಸಲರು ಹತರಾದರೆ, ಅನೇಕರು ಪೊಲೀಸರಿಗೆ ಶರಣಾಗುತ್ತಿದ್ದಾರೆ.</p><p>ತೆಲಂಗಾಣದ ಕಾಡುಗಳಲ್ಲಿ ನಕ್ಸಲ್ ಚಲನವಲನದ ಕುರಿತು ಸ್ಥಳೀಯರು ಪೊಲೀಸರಿಗೆ ತಪ್ಪದೇ ಮಾಹಿತಿ ನೀಡಬೇಕು ಎಂದು ಕಟ್ಟುನಿಟ್ಟಿನ ಆದೇಶ ಮಾಡಲಾಗಿದೆ. ಇದರಿಂದ ಅಲ್ಲಿ ನಕ್ಸಲರಿಗೆ ತೀವ್ರ ಹಿನ್ನಡೆಯಾಗುತ್ತಿದೆ. ಶರಣಾಗತರ ಸಂಖ್ಯೆಯೂ ಹೆಚ್ಚುತ್ತಿದೆ.</p><p>ಇತ್ತೀಚೆಗೆ ತೆಲಂಗಾಣದಲ್ಲಿ ಸ್ಥಳೀಯರು ನೀಡಿದ ಮಾಹಿತಿಯಿಂದಲೇ ಮುಲುಗು ಜಿಲ್ಲೆಯಲ್ಲಿ 21 ನಕ್ಸಲರನ್ನು ಬಂಧಿಸಲು ಸಾಧ್ಯವಾಯಿತು ಎಂದು ಪೊಲೀಸರು ಹೇಳಿದ್ದಾರೆ.</p><p>ಕೇಂದ್ರ ಗೃಹ ಇಲಾಖೆ 2026 ಮಾರ್ಚ್ ಒಳಗೆ ದೇಶವನ್ನು ನಕ್ಸಲ್ ಮುಕ್ತ ಮಾಡಲಾಗುವುದು ಎಂದು ಶಪಥ ತೊಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>