<p><strong>ನವದೆಹಲಿ</strong>: ಜಾರ್ಖಂಡ್ನಲ್ಲಿ ನಡೆದ ನಕ್ಸಲ್ ನಿಗ್ರಹ ಕಾರ್ಯಾಚರಣೆ ವೇಳೆ ಕಚ್ಚಾ ಬಾಂಬ್ ಸ್ಟೋಟದಿಂದ ತೀವ್ರವಾಗಿ ಗಾಯಗೊಂಡಿದ್ದ ಸಿಆರ್ಪಿಎಫ್ ಇನ್ಸ್ಪೆಕ್ಟರ್ ಗುರುವಾರ ಇಲ್ಲಿನ ಏಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.</p><p>ಅಕ್ಟೋಬರ್ 10ರಂದು ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯ ವೇಳೆ ನಕ್ಸಲರು ಹೂತಿಟ್ಟಿದ್ದ ಐಇಡಿ ಸ್ಟೋಟಗೊಂಡು ಇನ್ಸ್ಪೆಕ್ಟರ್ ಕೌಶಲ್ ಕುಮಾರ್ ಮಿಶ್ರಾ ಅವರ ಎಡಗಾಲಿಗೆ ತೀವ್ರ ಗಾಯವಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ತಕ್ಷಣ ಅವರನ್ನು ಜಾರ್ಖಂಡ್ನಿಂದ ವಿಮಾನದ ಮೂಲಕ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅವರು ಹೇಳಿದ್ದಾರೆ.</p><p>ಬಿಹಾರದ ಮೂಲದವರಾದ ಮಿಶ್ರಾ ಅವರು ಸಿಆರ್ಪಿಎಫ್ನ 60ನೇ ಬೆಟಾಲಿಯನ್ಗೆ ನಿಯೋಜನೆಗೊಂಡಿದ್ದರು. ಸಿಂಗ್ಭೂಮ್ನ ಉತ್ತರಾ ಸರಾಂಡದ ಅರಣ್ಯ ಭಾಗದಲ್ಲಿ ಗಸ್ತು ತಿರುಗುವ ವೇಳೆ ಸ್ಫೋಟ ಸಂಭವಿಸಿತ್ತು.</p><p>ಈ ಸ್ಫೋಟದಲ್ಲಿ ಕಾನ್ಸ್ಟೆಬಲ್ ಮಹೇಂದ್ರ ಲಸ್ಕರ್ (45) ಸೇರಿದಂತೆ ಇನ್ನಿಬ್ಬರು ಸಿಬ್ಬಂದಿ ಗಾಯಗೊಂಡಿದ್ದರು. ಸ್ಟೋಟ ನಡೆದ ಮರುದಿನ ಅಸ್ಸಾಂ ಮೂಲದ ಲಸ್ಕರ್ ಮೃತಪಟ್ಟಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಜಾರ್ಖಂಡ್ನಲ್ಲಿ ನಡೆದ ನಕ್ಸಲ್ ನಿಗ್ರಹ ಕಾರ್ಯಾಚರಣೆ ವೇಳೆ ಕಚ್ಚಾ ಬಾಂಬ್ ಸ್ಟೋಟದಿಂದ ತೀವ್ರವಾಗಿ ಗಾಯಗೊಂಡಿದ್ದ ಸಿಆರ್ಪಿಎಫ್ ಇನ್ಸ್ಪೆಕ್ಟರ್ ಗುರುವಾರ ಇಲ್ಲಿನ ಏಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.</p><p>ಅಕ್ಟೋಬರ್ 10ರಂದು ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯ ವೇಳೆ ನಕ್ಸಲರು ಹೂತಿಟ್ಟಿದ್ದ ಐಇಡಿ ಸ್ಟೋಟಗೊಂಡು ಇನ್ಸ್ಪೆಕ್ಟರ್ ಕೌಶಲ್ ಕುಮಾರ್ ಮಿಶ್ರಾ ಅವರ ಎಡಗಾಲಿಗೆ ತೀವ್ರ ಗಾಯವಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ತಕ್ಷಣ ಅವರನ್ನು ಜಾರ್ಖಂಡ್ನಿಂದ ವಿಮಾನದ ಮೂಲಕ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅವರು ಹೇಳಿದ್ದಾರೆ.</p><p>ಬಿಹಾರದ ಮೂಲದವರಾದ ಮಿಶ್ರಾ ಅವರು ಸಿಆರ್ಪಿಎಫ್ನ 60ನೇ ಬೆಟಾಲಿಯನ್ಗೆ ನಿಯೋಜನೆಗೊಂಡಿದ್ದರು. ಸಿಂಗ್ಭೂಮ್ನ ಉತ್ತರಾ ಸರಾಂಡದ ಅರಣ್ಯ ಭಾಗದಲ್ಲಿ ಗಸ್ತು ತಿರುಗುವ ವೇಳೆ ಸ್ಫೋಟ ಸಂಭವಿಸಿತ್ತು.</p><p>ಈ ಸ್ಫೋಟದಲ್ಲಿ ಕಾನ್ಸ್ಟೆಬಲ್ ಮಹೇಂದ್ರ ಲಸ್ಕರ್ (45) ಸೇರಿದಂತೆ ಇನ್ನಿಬ್ಬರು ಸಿಬ್ಬಂದಿ ಗಾಯಗೊಂಡಿದ್ದರು. ಸ್ಟೋಟ ನಡೆದ ಮರುದಿನ ಅಸ್ಸಾಂ ಮೂಲದ ಲಸ್ಕರ್ ಮೃತಪಟ್ಟಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>