<p><strong>ನವದೆಹಲಿ:</strong> ದೇಶದಲ್ಲಿ ಮುಂದಿನ ಎರಡು ಮೂರು ವರ್ಷಗಳಲ್ಲಿ ನಕ್ಸಲ್ ಸಮಸ್ಯೆ ಕೊನೆಗೊಳ್ಳುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.</p><p>ಶನಿವಾರ ತಡ ರಾತ್ರಿ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದರು.</p><p>ಛತ್ತೀಸಗಢ ರಾಜ್ಯದ ಒಂದು ಸಣ್ಣ ಪ್ರದೇಶವನ್ನು ಹೊರತುಪಡಿಸಿದರೆ ದೇಶದಲ್ಲಿ ನಕ್ಸಲ್ ಪಿಡುಗು ಇಲ್ಲ, ಎರಡು ಮೂರು ವರ್ಷಗಳಲ್ಲಿ ಈ ಸಮಸ್ಯೆ ಸಂಪೂರ್ಣವಾಗಿ ಕೊನೆಗೊಳ್ಳುತ್ತದೆ ಎಂದು ಹೇಳಿದರು. </p><p>ದೇಶದಾದ್ಯಂತ ನಕ್ಸಲ್ ಪಿಡುಗನ್ನು ನಿರ್ಮೂಲನೆ ಮಾಡಲಾಗಿದೆ. ಈ ಹಿಂದೆ ಕೆಲವರು ಪಶುಪತಿನಾಥದಿಂದ ತಿರುಪತಿಯವರೆಗೂ ನಕ್ಸಲ್ ಕಾರಿಡಾರ್ ಎಂದು ಹೇಳುತ್ತಿದ್ದರು. ಈ ಕೂಗು ಈಗ ಇಲ್ಲ ಎಂದರು. ಜಾರ್ಖಂಡ್ ನಕ್ಸಲ್ನಿಂದ ಸಂಪೂರ್ಣವಾಗಿ ಮುಕ್ತವಾಗಿದೆ. ಹಾಗೇ ಬಿಹಾರ, ಒಡಿಶಾ, ತೆಲಂಗಾಣ ಮತ್ತು ಆಂಧ್ರಪ್ರದೇಶಗಳು ಸಹ ಮುಕ್ತವಾಗಿವೆ. ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಗಳು ಸಹ ನಕ್ಸಲ್ನಿಂದ ಮುಕ್ತಿಪಡೆದಿವೆ ಎಂದರು.</p><p>ಛತ್ತೀಸಗಢ ರಾಜ್ಯದ ಕೆಲವು ಪ್ರದೇಶಗಳಲ್ಲಿ ನಕ್ಸಲರು ಇನ್ನೂ ಸಕ್ರಿಯರಾಗಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಇಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಇದ್ದ ಕಾರಣ ನಕ್ಸಲ್ ನಿರ್ಮೂಲನೆ ಮಾಡಲು ಸಾಧ್ಯವಾಗಿಲ್ಲ ಎಂದರು.</p><p>ಐದು ತಿಂಗಳ ಹಿಂದೆ ಛತ್ತೀಸಗಢದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ, ರಾಜ್ಯವನ್ನು ನಕ್ಸಲ್ನಿಂದ ಮುಕ್ತಗೊಳಿಸುವ ಕೆಲಸ ಆರಂಭವಾಗಿದೆ ಎಂದು ಹೇಳಿದರು.</p><p>ಕೇವಲ 5 ತಿಂಗಳ ಅವಧಿಯಲ್ಲಿ 125 ನಕ್ಸಲರನ್ನು ಹತ್ಯೆ ಮಾಡಲಾಗಿದೆ. 352ಕ್ಕೂ ಹೆಚ್ಚು ನಕ್ಸಲರನ್ನು ಬಂಧಿಸಲಾಗಿದೆ. ಸುಮಾರು 175 ಮಂದಿ ಶರಣಾಗಿದ್ದಾರೆ ಎಂದು ಅಮಿತ್ ಶಾ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಲ್ಲಿ ಮುಂದಿನ ಎರಡು ಮೂರು ವರ್ಷಗಳಲ್ಲಿ ನಕ್ಸಲ್ ಸಮಸ್ಯೆ ಕೊನೆಗೊಳ್ಳುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.</p><p>ಶನಿವಾರ ತಡ ರಾತ್ರಿ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದರು.</p><p>ಛತ್ತೀಸಗಢ ರಾಜ್ಯದ ಒಂದು ಸಣ್ಣ ಪ್ರದೇಶವನ್ನು ಹೊರತುಪಡಿಸಿದರೆ ದೇಶದಲ್ಲಿ ನಕ್ಸಲ್ ಪಿಡುಗು ಇಲ್ಲ, ಎರಡು ಮೂರು ವರ್ಷಗಳಲ್ಲಿ ಈ ಸಮಸ್ಯೆ ಸಂಪೂರ್ಣವಾಗಿ ಕೊನೆಗೊಳ್ಳುತ್ತದೆ ಎಂದು ಹೇಳಿದರು. </p><p>ದೇಶದಾದ್ಯಂತ ನಕ್ಸಲ್ ಪಿಡುಗನ್ನು ನಿರ್ಮೂಲನೆ ಮಾಡಲಾಗಿದೆ. ಈ ಹಿಂದೆ ಕೆಲವರು ಪಶುಪತಿನಾಥದಿಂದ ತಿರುಪತಿಯವರೆಗೂ ನಕ್ಸಲ್ ಕಾರಿಡಾರ್ ಎಂದು ಹೇಳುತ್ತಿದ್ದರು. ಈ ಕೂಗು ಈಗ ಇಲ್ಲ ಎಂದರು. ಜಾರ್ಖಂಡ್ ನಕ್ಸಲ್ನಿಂದ ಸಂಪೂರ್ಣವಾಗಿ ಮುಕ್ತವಾಗಿದೆ. ಹಾಗೇ ಬಿಹಾರ, ಒಡಿಶಾ, ತೆಲಂಗಾಣ ಮತ್ತು ಆಂಧ್ರಪ್ರದೇಶಗಳು ಸಹ ಮುಕ್ತವಾಗಿವೆ. ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಗಳು ಸಹ ನಕ್ಸಲ್ನಿಂದ ಮುಕ್ತಿಪಡೆದಿವೆ ಎಂದರು.</p><p>ಛತ್ತೀಸಗಢ ರಾಜ್ಯದ ಕೆಲವು ಪ್ರದೇಶಗಳಲ್ಲಿ ನಕ್ಸಲರು ಇನ್ನೂ ಸಕ್ರಿಯರಾಗಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಇಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಇದ್ದ ಕಾರಣ ನಕ್ಸಲ್ ನಿರ್ಮೂಲನೆ ಮಾಡಲು ಸಾಧ್ಯವಾಗಿಲ್ಲ ಎಂದರು.</p><p>ಐದು ತಿಂಗಳ ಹಿಂದೆ ಛತ್ತೀಸಗಢದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ, ರಾಜ್ಯವನ್ನು ನಕ್ಸಲ್ನಿಂದ ಮುಕ್ತಗೊಳಿಸುವ ಕೆಲಸ ಆರಂಭವಾಗಿದೆ ಎಂದು ಹೇಳಿದರು.</p><p>ಕೇವಲ 5 ತಿಂಗಳ ಅವಧಿಯಲ್ಲಿ 125 ನಕ್ಸಲರನ್ನು ಹತ್ಯೆ ಮಾಡಲಾಗಿದೆ. 352ಕ್ಕೂ ಹೆಚ್ಚು ನಕ್ಸಲರನ್ನು ಬಂಧಿಸಲಾಗಿದೆ. ಸುಮಾರು 175 ಮಂದಿ ಶರಣಾಗಿದ್ದಾರೆ ಎಂದು ಅಮಿತ್ ಶಾ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>