<p><strong>ರಾಯಪುರ:</strong> ‘ನಕ್ಸಲಿಸಂ ಎಂಬುದು ‘ನಾಗರಹಾವು’ ಇದ್ದಂತೆ. ಅಭಿವೃದ್ಧಿಯ ಹಾದಿಯಲ್ಲಿ ಪದೇ ಪದೇ ಹೆಡೆ ಬಿಚ್ಚಿ ವಿಷಕಾರುತ್ತದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. </p><p>ಬಸ್ತಾರ್ ಒಲಿಂಪಿಕ್–2025 ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ‘ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯೊಂದಿಗೆ ಸಂಬಂಧ ಹೊಂದಿರುವವರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಶಾಂತಿ ಮಾತ್ರ ಅಭಿವೃದ್ಧಿಗೆ ದಾರಿ ಮಾಡಿಕೊಡುತ್ತದೆ’ ಎಂದು ಹೇಳಿದ್ದಾರೆ. </p><p>‘2026ರ ಮಾರ್ಚ್ 31ರೊಳಗೆ ದೇಶದಾದ್ಯಂತ ‘ಕೆಂಪು ಭಯೋತ್ಪಾದನೆ’ಯನ್ನು (ನಕ್ಸಲಿಸಂ) ಕೊನೆಗೊಳಿಸುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಕೇಂದ್ರ ಸರ್ಕಾರದ ಸಂಕಲ್ಪವಾಗಿದ್ದು, ಈ ಗುರಿ ತಲುಪಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಶಸ್ತ್ರಾಸ್ತ್ರ ಹಿಡಿದವರಿಗೂ ಅಥವಾ ಭದ್ರತಾ ಸಿಬ್ಬಂದಿಗೂ ಯಾರಿಗೂ ಕೂಡ ಎಡಪಂಥೀಯ ಚಳುವಳಿಯಿಂದ ಯಾವುದೇ ಪ್ರಯೋಜನವಾಗುವುದಿಲ್ಲ’ ಎಂದಿದ್ದಾರೆ. </p><p>‘ಏಳು ಜಿಲ್ಲೆಗಳನ್ನು ಒಳಗೊಂಡಿರುವ ಛತ್ತೀಸಗಢದ ನಕ್ಸಲ್ ಪೀಡಿತ ಬಸ್ತಾರ್ ವಿಭಾಗವನ್ನು ಮುಂದಿನ ಐದು ವರ್ಷಗಳಲ್ಲಿ ದೇಶದ ಅತ್ಯಂತ ಅಭಿವೃದ್ಧಿ ಹೊಂದಿದ ಬುಡಕಟ್ಟು ಪ್ರದೇಶವನ್ನಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ’ ಎಂದೂ ಅವರು ಭರವಸೆ ವ್ಯಕ್ತಪಡಿಸಿದ್ದಾರೆ. </p><p>ಬಸ್ತಾರ್ ವಿಭಾಗದ ಏಳು ಜಿಲ್ಲೆಗಳಾದ ಕಂಕೇರ್, ಕೊಂಡಗಾಂವ್, ಬಸ್ತಾರ್, ಸುಕ್ಮಾ, ಬಿಜಾಪುರ, ನಾರಾಯಣಪುರ ಮತ್ತು ದಂತೇವಾಡಗಳನ್ನು 2030ರ ಡಿಸೆಂಬರ್ ವೇಳೆಗೆ ದೇಶದ ಅತ್ಯಂತ ಮುಂದುವರಿದ ಬುಡಕಟ್ಟು ಜಿಲ್ಲೆಗಳಾಗಿ ಅಭಿವೃದ್ಧಿಪಡಿಸಲಾಗುವುದು ಎಂದೂ ಶಾ ಹೇಳಿದ್ದಾರೆ. </p><p>‘2024ರ ಬಸ್ತಾರ್ ಒಲಿಂಪಿಕ್ನಲ್ಲಿ ಭಾಗವಹಿಸಲು ನಾನು ಇಲ್ಲಿಗೆ ಬಂದಿದ್ದೆ. ಮತ್ತೆ ಈ ವರ್ಷವೂ (2025) ಬಂದಿದ್ದೇನೆ. ಹಾಗೆಯೇ 2026ರಲ್ಲಿಯೂ ಬರುತ್ತೇನೆ ಎಂದು ಭರವಸೆ ನೀಡುತ್ತೇನೆ. ಮುಂದಿನ ಬಾರಿ ನಾನು ಇಲ್ಲಿಗೆ ಬರುವಷ್ಟರಲ್ಲಿ ಛತ್ತೀಸಗಢ ಸೇರಿದಂರೆ ಇಡೀ ದೇಶದಾದ್ಯಂತ ನಕ್ಸಲಿಸಂ ಅನ್ನು ಸಂಪೂರ್ಣವಾಗಿ ತೊಡೆದುಹಾಕಿರುತ್ತೇವೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಪುರ:</strong> ‘ನಕ್ಸಲಿಸಂ ಎಂಬುದು ‘ನಾಗರಹಾವು’ ಇದ್ದಂತೆ. ಅಭಿವೃದ್ಧಿಯ ಹಾದಿಯಲ್ಲಿ ಪದೇ ಪದೇ ಹೆಡೆ ಬಿಚ್ಚಿ ವಿಷಕಾರುತ್ತದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. </p><p>ಬಸ್ತಾರ್ ಒಲಿಂಪಿಕ್–2025 ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ‘ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯೊಂದಿಗೆ ಸಂಬಂಧ ಹೊಂದಿರುವವರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಶಾಂತಿ ಮಾತ್ರ ಅಭಿವೃದ್ಧಿಗೆ ದಾರಿ ಮಾಡಿಕೊಡುತ್ತದೆ’ ಎಂದು ಹೇಳಿದ್ದಾರೆ. </p><p>‘2026ರ ಮಾರ್ಚ್ 31ರೊಳಗೆ ದೇಶದಾದ್ಯಂತ ‘ಕೆಂಪು ಭಯೋತ್ಪಾದನೆ’ಯನ್ನು (ನಕ್ಸಲಿಸಂ) ಕೊನೆಗೊಳಿಸುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಕೇಂದ್ರ ಸರ್ಕಾರದ ಸಂಕಲ್ಪವಾಗಿದ್ದು, ಈ ಗುರಿ ತಲುಪಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಶಸ್ತ್ರಾಸ್ತ್ರ ಹಿಡಿದವರಿಗೂ ಅಥವಾ ಭದ್ರತಾ ಸಿಬ್ಬಂದಿಗೂ ಯಾರಿಗೂ ಕೂಡ ಎಡಪಂಥೀಯ ಚಳುವಳಿಯಿಂದ ಯಾವುದೇ ಪ್ರಯೋಜನವಾಗುವುದಿಲ್ಲ’ ಎಂದಿದ್ದಾರೆ. </p><p>‘ಏಳು ಜಿಲ್ಲೆಗಳನ್ನು ಒಳಗೊಂಡಿರುವ ಛತ್ತೀಸಗಢದ ನಕ್ಸಲ್ ಪೀಡಿತ ಬಸ್ತಾರ್ ವಿಭಾಗವನ್ನು ಮುಂದಿನ ಐದು ವರ್ಷಗಳಲ್ಲಿ ದೇಶದ ಅತ್ಯಂತ ಅಭಿವೃದ್ಧಿ ಹೊಂದಿದ ಬುಡಕಟ್ಟು ಪ್ರದೇಶವನ್ನಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ’ ಎಂದೂ ಅವರು ಭರವಸೆ ವ್ಯಕ್ತಪಡಿಸಿದ್ದಾರೆ. </p><p>ಬಸ್ತಾರ್ ವಿಭಾಗದ ಏಳು ಜಿಲ್ಲೆಗಳಾದ ಕಂಕೇರ್, ಕೊಂಡಗಾಂವ್, ಬಸ್ತಾರ್, ಸುಕ್ಮಾ, ಬಿಜಾಪುರ, ನಾರಾಯಣಪುರ ಮತ್ತು ದಂತೇವಾಡಗಳನ್ನು 2030ರ ಡಿಸೆಂಬರ್ ವೇಳೆಗೆ ದೇಶದ ಅತ್ಯಂತ ಮುಂದುವರಿದ ಬುಡಕಟ್ಟು ಜಿಲ್ಲೆಗಳಾಗಿ ಅಭಿವೃದ್ಧಿಪಡಿಸಲಾಗುವುದು ಎಂದೂ ಶಾ ಹೇಳಿದ್ದಾರೆ. </p><p>‘2024ರ ಬಸ್ತಾರ್ ಒಲಿಂಪಿಕ್ನಲ್ಲಿ ಭಾಗವಹಿಸಲು ನಾನು ಇಲ್ಲಿಗೆ ಬಂದಿದ್ದೆ. ಮತ್ತೆ ಈ ವರ್ಷವೂ (2025) ಬಂದಿದ್ದೇನೆ. ಹಾಗೆಯೇ 2026ರಲ್ಲಿಯೂ ಬರುತ್ತೇನೆ ಎಂದು ಭರವಸೆ ನೀಡುತ್ತೇನೆ. ಮುಂದಿನ ಬಾರಿ ನಾನು ಇಲ್ಲಿಗೆ ಬರುವಷ್ಟರಲ್ಲಿ ಛತ್ತೀಸಗಢ ಸೇರಿದಂರೆ ಇಡೀ ದೇಶದಾದ್ಯಂತ ನಕ್ಸಲಿಸಂ ಅನ್ನು ಸಂಪೂರ್ಣವಾಗಿ ತೊಡೆದುಹಾಕಿರುತ್ತೇವೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>