ಗುಂಡಿನ ಕಾಳಗ ಮುಗಿದ ಬಳಿಕ ಓರ್ವ ನಕ್ಸಲ್ ಮೃತದೇಹವನ್ನು ಸ್ಥಳದಿಂದ ವಶಕ್ಕೆ ಪಡೆಯಲಾಗಿದೆ. ಘಟನೆ ನಡೆದ ಸ್ಥಳ ರಾಜಧಾನಿ ರಾಯಪುರದಿಂದ 15 ಕಿ.ಮಿ ದೂರದಲ್ಲಿದೆ.
ಮೃತ ವ್ಯಕ್ತಿಯ ಗುರುತು ಪತ್ತೆಯಾಗಬೇಕಷ್ಟೇ. ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಧ ಕಾರ್ಯ ಜಾರಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ವರ್ಷದಲ್ಲಿ ಈವರೆಗೆ ಒಟ್ಟು 104 ನಕ್ಸಲರನ್ನು ಕೊಲ್ಲಲಾಗಿದೆ. ಶುಕ್ರವಾರ ಬಿಜಾಪುರ ಜಿಲ್ಲೆಯಲ್ಲಿ 12 ನಕ್ಸಲರನ್ನು ಹತ್ಯೆ ಮಾಡಲಾಗಿತ್ತು.