ರಾಯಪುರ (ಪಿಟಿಐ): ಛತ್ತೀಸಗಢದ ಧಮ್ತರಿ ಮತ್ತು ಗರಿಯಬಂದ್ ಜಿಲ್ಲೆಗಳ ಗಡಿಭಾಗದಲ್ಲಿ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲರೊಬ್ಬರು ಸಾವಿಗೀಡಾಗಿದ್ದಾರೆ.
‘ಧಮ್ತರಿಯ ಜಿಲ್ಲಾ ಮೀಸಲು ಪಡೆಯು ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಗುಂಡಿನ ಚಕಮಕಿ ನಡೆದಿದೆ’ ಎಂದು ಧಮ್ತರಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಂಜನೇಯ ವರ್ಷ್ನೆ ಶನಿವಾರ ತಿಳಿಸಿದ್ದಾರೆ.
‘ಮೃತ ನಕ್ಸಲನ ಗುರುತು ಪತ್ತೆಯಾಗಿಲ್ಲ. ಕಾರ್ಯಾಚರಣೆ ಮುಂದುವರಿದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.