ಕೇಶಕುತುಲ್–ಕೇಶಮುಂಡಿ ಅರಣ್ಯಗಳಲ್ಲಿ ಮಾವೋವಾದಿಗಳ ಮುಖಂಡ ಕವಾಸಿ ಪಂಡಾರು ಹಾಗೂ 15–20 ನಕ್ಸಲರು ಬೀಡುಬಿಟ್ಟಿದ್ದಾರೆ ಎಂಬ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ 5.30ರ ಸುಮಾರಿಗೆ ಜಿಲ್ಲಾ ಮೀಸಲು ಪಡೆಯ (ಡಿಆರ್ಜಿ) ತಂಡವು ಭೈರಂಗಢ ಪೊಲೀಸ್ ಠಾಣಾ ವ್ಯಾಪ್ತಿಯ ಕೇಶಕುತುಲ್ ಗ್ರಾಮದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ಕೈಗೊಂಡಿತ್ತು. ಆಗ ನಕ್ಸಲರು ಮತ್ತು ಭದ್ರತಾ ಪಡೆಗಳ ಮಧ್ಯೆ ಗುಂಡಿನ ಚಕಮಕಿ ನಡೆಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.