ಜಿಲ್ಲಾ ಸಶಸ್ತ್ರ ಪೊಲೀಸ್ ಮತ್ತು ವಿಶೇಷ ಆಕ್ರಮಣ ತಂಡ (ಎಸ್ಎಟಿ) ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ಕೈಗೊಂಡಿದ್ದ ವೇಳೆ ಪಹಾನ್ ನೇತೃತ್ವದ ನಕ್ಸಲ್ ಗುಂಪು ಗುಂಡಿನ ದಾಳಿ ನಡೆಸಿದೆ. ಆತ್ಮರಕ್ಷಣೆಗಾಗಿ ಪೊಲೀಸರ ತಂಡ ಪ್ರತಿದಾಳಿ ನಡೆಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮನ್ ಕುಮಾರ್ ಪಿಟಿಐಗೆ ತಿಳಿಸಿದರು.