<p><strong>ನಾರಾಯಣಪುರ</strong>: ಒಟ್ಟು ₹37.5 ಲಕ್ಷ ಇನಾಮು ಘೋಷಣೆಯಾಗಿದ್ದ 22 ಮಂದಿ ನಕ್ಸಲರು ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ.</p><p>ಮಾವೋವಾದಿಗಳ ಮಾಡ್ ವಿಭಾಗದ ಕುತುಲ್, ನೆಲ್ನಾರ್ ಮತ್ತು ಇಂದ್ರಾವತಿ ಪ್ರದೇಶ ಸಮಿತಿಗಳಿಗೆ ಸೇರಿದ ಈ ನಕ್ಸಲರು ಹಿರಿಯ ಪೊಲೀಸ್ ಅಧಿಕಾರಿಗಳು, ಗಡಿ ಭದ್ರತಾ ಪಡೆ (ಬಿಎಸ್ಎಫ್) ಮತ್ತು ಇಂಡೊ ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ.</p><p>ಹುರುಳಿಲ್ಲದ ಮಾವೋವಾದಿ ಸಿದ್ಧಾಂತ ಮತ್ತು ನಿಷೇಧಿತ ಸಂಘಟನೆಯಲ್ಲಿ ಬೆಳೆಯುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳಿಂದ ನಿರಾಶೆಗೊಂಡಿರುವುದಾಗಿ ಅವರು ತಿಳಿಸಿದ್ದಾರೆ ಎಂದು ನಾರಾಯಣಪುರ ಪೊಲೀಸ್ ವರಿಷ್ಠಾಧಿಕಾರಿ ರಾಬಿನ್ಸನ್ ಗುರಿಯಾ ಹೇಳಿದ್ದಾರೆ.</p><p>ಜಿಲ್ಲೆಯ ಮಾಡ್ ಪ್ರದೇಶದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳಿಂದ ಅವರು ಪ್ರಭಾವಿತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ</p> <p>ಶಸ್ತ್ರಾಸ್ತ್ರ ತ್ಯಜಿಸಿದ ನಕ್ಸಲರಲ್ಲಿ ವಿಭಾಗೀಯ ಸಮಿತಿ ಸದಸ್ಯರಾದ ಮಂಕು ಕುಂಜಂ (33) ಅವರ ಬಗ್ಗೆ ಮಾಹಿತಿ ನೀಡಿದವರಿಗೆ ₹8 ಲಕ್ಷ ಬಹುಮಾನ, ಹಿಡ್ಮೆ ಕುಂಜಂ (28), ಪುನ್ನಾ ಲಾಲ್ ಅಲಿಯಾಸ್ ಬೋಟಿ (26) ಮತ್ತು ಸನಿರಾಮ್ ಕೊರ್ರಂ (25) ಎಂದು ಗುರುತಿಸಲಾದ ಮೂವರು ಪ್ರದೇಶ ಸಮಿತಿ ಸದಸ್ಯರ ತಲೆಗೆ ತಲಾ ₹5 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ಇತರೆ ಹನ್ನೊಂದು ಮಂದಿ ತಲೆಗೆ ತಲಾ ₹1 ಲಕ್ಷ, ಇತರ ಏಳು ಮಂದಿಗೆ ತಲೆಗೆ ₹50,000 ಬಹುಮಾನ ಘೋಷಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.</p><p>ನಕ್ಸಲರ ಶರಣಾಗತಿಯಲ್ಲಿ ನರನ್ಪುರ ಪೊಲೀಸರು, ಅದರ ಜಿಲ್ಲಾ ಮೀಸಲು ಪಡೆ, ಐಟಿಬಿಪಿ ಮತ್ತು ಬಿಎಸ್ಎಫ್ ಪ್ರಮುಖ ಪಾತ್ರ ವಹಿಸಿವೆ. ಈ ಬೆಳವಣಿಗೆ ಮಾವೋವಾದಿ ಪಡೆಗಳಿಗೆ ಭಾರಿ ಹೊಡೆತ ನೀಡಿದೆ. ನಕ್ಸಲ್ ಮುಕ್ತ ಮಾಡ್ ಕನಸು ನನಸಾಗುತ್ತಿದೆ ಎಂದು ಗುರಿಯಾ ಹೇಳಿದರು.</p><p>ಶರಣಾದ ಎಲ್ಲ ನಕ್ಸಲರಿಗೆ ತಲಾ ₹50,000 ಸಹಾಯಧನ ನೀಡಲಾಯಿತು. ಸರ್ಕಾರದ ನೀತಿಯ ಪ್ರಕಾರ ಅವರಿಗೆ ಪುನರ್ವಸತಿ ಯೋಜನೆಯ ಸೌಲಭ್ಯ ಕಲ್ಪಿಸಲಾಗುವುದು ಎಂದು ಅವರು ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾರಾಯಣಪುರ</strong>: ಒಟ್ಟು ₹37.5 ಲಕ್ಷ ಇನಾಮು ಘೋಷಣೆಯಾಗಿದ್ದ 22 ಮಂದಿ ನಕ್ಸಲರು ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ.</p><p>ಮಾವೋವಾದಿಗಳ ಮಾಡ್ ವಿಭಾಗದ ಕುತುಲ್, ನೆಲ್ನಾರ್ ಮತ್ತು ಇಂದ್ರಾವತಿ ಪ್ರದೇಶ ಸಮಿತಿಗಳಿಗೆ ಸೇರಿದ ಈ ನಕ್ಸಲರು ಹಿರಿಯ ಪೊಲೀಸ್ ಅಧಿಕಾರಿಗಳು, ಗಡಿ ಭದ್ರತಾ ಪಡೆ (ಬಿಎಸ್ಎಫ್) ಮತ್ತು ಇಂಡೊ ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ.</p><p>ಹುರುಳಿಲ್ಲದ ಮಾವೋವಾದಿ ಸಿದ್ಧಾಂತ ಮತ್ತು ನಿಷೇಧಿತ ಸಂಘಟನೆಯಲ್ಲಿ ಬೆಳೆಯುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳಿಂದ ನಿರಾಶೆಗೊಂಡಿರುವುದಾಗಿ ಅವರು ತಿಳಿಸಿದ್ದಾರೆ ಎಂದು ನಾರಾಯಣಪುರ ಪೊಲೀಸ್ ವರಿಷ್ಠಾಧಿಕಾರಿ ರಾಬಿನ್ಸನ್ ಗುರಿಯಾ ಹೇಳಿದ್ದಾರೆ.</p><p>ಜಿಲ್ಲೆಯ ಮಾಡ್ ಪ್ರದೇಶದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳಿಂದ ಅವರು ಪ್ರಭಾವಿತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ</p> <p>ಶಸ್ತ್ರಾಸ್ತ್ರ ತ್ಯಜಿಸಿದ ನಕ್ಸಲರಲ್ಲಿ ವಿಭಾಗೀಯ ಸಮಿತಿ ಸದಸ್ಯರಾದ ಮಂಕು ಕುಂಜಂ (33) ಅವರ ಬಗ್ಗೆ ಮಾಹಿತಿ ನೀಡಿದವರಿಗೆ ₹8 ಲಕ್ಷ ಬಹುಮಾನ, ಹಿಡ್ಮೆ ಕುಂಜಂ (28), ಪುನ್ನಾ ಲಾಲ್ ಅಲಿಯಾಸ್ ಬೋಟಿ (26) ಮತ್ತು ಸನಿರಾಮ್ ಕೊರ್ರಂ (25) ಎಂದು ಗುರುತಿಸಲಾದ ಮೂವರು ಪ್ರದೇಶ ಸಮಿತಿ ಸದಸ್ಯರ ತಲೆಗೆ ತಲಾ ₹5 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ಇತರೆ ಹನ್ನೊಂದು ಮಂದಿ ತಲೆಗೆ ತಲಾ ₹1 ಲಕ್ಷ, ಇತರ ಏಳು ಮಂದಿಗೆ ತಲೆಗೆ ₹50,000 ಬಹುಮಾನ ಘೋಷಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.</p><p>ನಕ್ಸಲರ ಶರಣಾಗತಿಯಲ್ಲಿ ನರನ್ಪುರ ಪೊಲೀಸರು, ಅದರ ಜಿಲ್ಲಾ ಮೀಸಲು ಪಡೆ, ಐಟಿಬಿಪಿ ಮತ್ತು ಬಿಎಸ್ಎಫ್ ಪ್ರಮುಖ ಪಾತ್ರ ವಹಿಸಿವೆ. ಈ ಬೆಳವಣಿಗೆ ಮಾವೋವಾದಿ ಪಡೆಗಳಿಗೆ ಭಾರಿ ಹೊಡೆತ ನೀಡಿದೆ. ನಕ್ಸಲ್ ಮುಕ್ತ ಮಾಡ್ ಕನಸು ನನಸಾಗುತ್ತಿದೆ ಎಂದು ಗುರಿಯಾ ಹೇಳಿದರು.</p><p>ಶರಣಾದ ಎಲ್ಲ ನಕ್ಸಲರಿಗೆ ತಲಾ ₹50,000 ಸಹಾಯಧನ ನೀಡಲಾಯಿತು. ಸರ್ಕಾರದ ನೀತಿಯ ಪ್ರಕಾರ ಅವರಿಗೆ ಪುನರ್ವಸತಿ ಯೋಜನೆಯ ಸೌಲಭ್ಯ ಕಲ್ಪಿಸಲಾಗುವುದು ಎಂದು ಅವರು ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>