<p><strong>ನಾರಾಯಣಪುರ:</strong> ಛತ್ತೀಸಗಡದ ನಾರಾಯಣಪುರ ಜಿಲ್ಲೆಯಲ್ಲಿ ಕಬ್ಬಿಣ ಅದಿರು ಗಣಿಯೊಂದರ ಮೇಲೆ ನಕ್ಸಲರು ಶನಿವಾರ ದಾಳಿ ನಡೆಸಿದ್ದು, ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ನಾಲ್ಕು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.</p>.<p>‘ಈ ಘಟನೆಯಲ್ಲಿ ಗಣಿಯ ಇಬ್ಬರು ಉದ್ಯೋಗಿಗಳು ನಾಪತ್ತೆಯಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ಛೋಟೆ ದೊಂಗರ್ ಪೊಲೀಸ್ ಠಾಣೆ ವ್ಯಾಪ್ತಿಯ ಆಮ್ದಾಯಿ ಕಬ್ಬಿಣ ಅದಿರು ಗಣಿಯಲ್ಲಿ ಈ ದಾಳಿ ನಡೆದಿದೆ’ ಎಂದು ನಾರಾಯಣಪುರದ ಪೊಲೀಸ್ ವರಿಷ್ಠಾಧಿಕಾರಿ ಮೋಹಿತ್ ಗರ್ಗ್ ಮಾಹಿತಿ ನೀಡಿದರು.</p>.<p>‘ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಭದ್ರತಾ ಪಡೆಯು ಘಟನಾ ಸ್ಥಳಕ್ಕೆ ತೆರಳಿದೆ. ಈ ವೇಳೆ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ’ ಎಂದು ಅವರು ತಿಳಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/technology/gadget-review/samsung-galaxy-m32-4gb-ram-64-gb-rom-smart-phone-review-in-kannada-844645.html" target="_blank">ಸ್ಯಾಮ್ಸಂಗ್ ಗ್ಯಾಲಕ್ಸಿ M32: ದೊಡ್ಡ ಬ್ಯಾಟರಿಯ ಸ್ಮಾರ್ಟ್ ವೈಶಿಷ್ಟ್ಯಗಳ ಫೋನ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾರಾಯಣಪುರ:</strong> ಛತ್ತೀಸಗಡದ ನಾರಾಯಣಪುರ ಜಿಲ್ಲೆಯಲ್ಲಿ ಕಬ್ಬಿಣ ಅದಿರು ಗಣಿಯೊಂದರ ಮೇಲೆ ನಕ್ಸಲರು ಶನಿವಾರ ದಾಳಿ ನಡೆಸಿದ್ದು, ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ನಾಲ್ಕು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.</p>.<p>‘ಈ ಘಟನೆಯಲ್ಲಿ ಗಣಿಯ ಇಬ್ಬರು ಉದ್ಯೋಗಿಗಳು ನಾಪತ್ತೆಯಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ಛೋಟೆ ದೊಂಗರ್ ಪೊಲೀಸ್ ಠಾಣೆ ವ್ಯಾಪ್ತಿಯ ಆಮ್ದಾಯಿ ಕಬ್ಬಿಣ ಅದಿರು ಗಣಿಯಲ್ಲಿ ಈ ದಾಳಿ ನಡೆದಿದೆ’ ಎಂದು ನಾರಾಯಣಪುರದ ಪೊಲೀಸ್ ವರಿಷ್ಠಾಧಿಕಾರಿ ಮೋಹಿತ್ ಗರ್ಗ್ ಮಾಹಿತಿ ನೀಡಿದರು.</p>.<p>‘ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಭದ್ರತಾ ಪಡೆಯು ಘಟನಾ ಸ್ಥಳಕ್ಕೆ ತೆರಳಿದೆ. ಈ ವೇಳೆ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ’ ಎಂದು ಅವರು ತಿಳಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/technology/gadget-review/samsung-galaxy-m32-4gb-ram-64-gb-rom-smart-phone-review-in-kannada-844645.html" target="_blank">ಸ್ಯಾಮ್ಸಂಗ್ ಗ್ಯಾಲಕ್ಸಿ M32: ದೊಡ್ಡ ಬ್ಯಾಟರಿಯ ಸ್ಮಾರ್ಟ್ ವೈಶಿಷ್ಟ್ಯಗಳ ಫೋನ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>