<p><strong>ಸುಕ್ಮಾ:</strong> ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಮುಂದೆ 15 ನಕ್ಸಲರು ಶರಣಾಗಿದ್ದಾರೆ. ಇವರಲ್ಲಿ ಒಂಬತ್ತು ಮಂದಿ ಬಗ್ಗೆ ಮಾಹಿತಿ ಕೊಟ್ಟವರಿಗೆ ₹ 48 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.</p>.<p>ಪೊಲೀಸ್ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಐವರು ಮಹಿಳೆಯರು ಮತ್ತು ಪೀಪಲ್ ಲಿಬರೇಷನ್ ಗೆರಿಲ್ಲಾ ಆರ್ಮಿಯ (ಪಿಎಲ್ಜಿಎ) ಸದಸ್ಯರು ಶರಣಾದರು ಎಂದು ಸುಕ್ಮಾ ಜಿಲ್ಲಾ ಎಸ್ಪಿ ಕಿರಣ್ ಚವಾಣ್ ಮಾಹಿತಿ ನೀಡಿದ್ದಾರೆ.</p>.<p>‘ರಾಜ್ಯ ಸರ್ಕಾರ ತಂದಿರುವ ‘ನಿಯಾದ್ ನೆಲ್ಲನರ್’ (ನಿಮ್ಮ ಉತ್ತಮ ಗ್ರಾಮ) ಯೋಜನೆಯಿಂದ ಪ್ರಭಾವಿತರಾಗಿ ನಕ್ಸಲರು ಶರಣಾಗಿದ್ದಾರೆ. ಕುಗ್ರಾಮಗಳಲ್ಲಿ ಅಭಿವೃದ್ಧಿ, ಶರಣಾದ ನಕ್ಸಲರಿಗೆ ಪುನರ್ವಸತಿಯನ್ನು ಈ ಯೋಜನೆಯಡಿ ಕಲ್ಪಿಸಲಾಗಿದೆ. ಇದರಿಂದ ಎಲ್ಲರೂ ಸಶಸ್ತ್ರ ಚಳವಳಿಯ ಪಥ ಬಿಟ್ಟು ಬರುತ್ತಿದ್ದಾರೆ’ ಎಂದು ಎಸ್ಪಿ ತಿಳಿಸಿದರು.</p>.<p>ನಾಲ್ವರು ಪ್ರಮುಖ ನಕ್ಸಲ್ ಮುಖಂಡರಾದ ಮಾಡ್ವಿ ಸನ್ನಾ, ಅವರ ಪತ್ನಿ ಸೋದಿ ಹಿಡ್ಮೆ, ಸೂರ್ಯಮ್ ಅಲಿಯಾಸ್ ರವ್ವಾ ಸೋಮ, ಅವರ ಪತ್ನಿ ಮೀನಾ ಅಲಿಯಾಸ್ ಮಾಡ್ವಿ ಭೀಮೆ ಶರಣಾದವರಲ್ಲಿ ಸೇರಿದ್ದಾರೆ. ಇವರಿಗೆ ತಲಾ ₹ 50,000 ನೆರವು ಮತ್ತು ಸರ್ಕಾರದ ಪುನರ್ವಸತಿ ನೀತಿಯಂತೆ ಸೌಕರ್ಯ ಕಲ್ಪಿಸಲಾಗುವುದು ಎಂದು ಚವಾಣ್ ತಿಳಿಸಿದ್ದಾರೆ.</p>.<p>ಕಳೆದ 23 ತಿಂಗಳಲ್ಲಿ ಛತ್ತೀಸಗಢದಲ್ಲಿ ಹಿರಿಯ ನಕ್ಸಲ್ ನಾಯಕರು ಸೇರಿದಂತೆ 2,150 ನಕ್ಸಲರು ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ಚವಾಣ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಕ್ಮಾ:</strong> ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಮುಂದೆ 15 ನಕ್ಸಲರು ಶರಣಾಗಿದ್ದಾರೆ. ಇವರಲ್ಲಿ ಒಂಬತ್ತು ಮಂದಿ ಬಗ್ಗೆ ಮಾಹಿತಿ ಕೊಟ್ಟವರಿಗೆ ₹ 48 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.</p>.<p>ಪೊಲೀಸ್ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಐವರು ಮಹಿಳೆಯರು ಮತ್ತು ಪೀಪಲ್ ಲಿಬರೇಷನ್ ಗೆರಿಲ್ಲಾ ಆರ್ಮಿಯ (ಪಿಎಲ್ಜಿಎ) ಸದಸ್ಯರು ಶರಣಾದರು ಎಂದು ಸುಕ್ಮಾ ಜಿಲ್ಲಾ ಎಸ್ಪಿ ಕಿರಣ್ ಚವಾಣ್ ಮಾಹಿತಿ ನೀಡಿದ್ದಾರೆ.</p>.<p>‘ರಾಜ್ಯ ಸರ್ಕಾರ ತಂದಿರುವ ‘ನಿಯಾದ್ ನೆಲ್ಲನರ್’ (ನಿಮ್ಮ ಉತ್ತಮ ಗ್ರಾಮ) ಯೋಜನೆಯಿಂದ ಪ್ರಭಾವಿತರಾಗಿ ನಕ್ಸಲರು ಶರಣಾಗಿದ್ದಾರೆ. ಕುಗ್ರಾಮಗಳಲ್ಲಿ ಅಭಿವೃದ್ಧಿ, ಶರಣಾದ ನಕ್ಸಲರಿಗೆ ಪುನರ್ವಸತಿಯನ್ನು ಈ ಯೋಜನೆಯಡಿ ಕಲ್ಪಿಸಲಾಗಿದೆ. ಇದರಿಂದ ಎಲ್ಲರೂ ಸಶಸ್ತ್ರ ಚಳವಳಿಯ ಪಥ ಬಿಟ್ಟು ಬರುತ್ತಿದ್ದಾರೆ’ ಎಂದು ಎಸ್ಪಿ ತಿಳಿಸಿದರು.</p>.<p>ನಾಲ್ವರು ಪ್ರಮುಖ ನಕ್ಸಲ್ ಮುಖಂಡರಾದ ಮಾಡ್ವಿ ಸನ್ನಾ, ಅವರ ಪತ್ನಿ ಸೋದಿ ಹಿಡ್ಮೆ, ಸೂರ್ಯಮ್ ಅಲಿಯಾಸ್ ರವ್ವಾ ಸೋಮ, ಅವರ ಪತ್ನಿ ಮೀನಾ ಅಲಿಯಾಸ್ ಮಾಡ್ವಿ ಭೀಮೆ ಶರಣಾದವರಲ್ಲಿ ಸೇರಿದ್ದಾರೆ. ಇವರಿಗೆ ತಲಾ ₹ 50,000 ನೆರವು ಮತ್ತು ಸರ್ಕಾರದ ಪುನರ್ವಸತಿ ನೀತಿಯಂತೆ ಸೌಕರ್ಯ ಕಲ್ಪಿಸಲಾಗುವುದು ಎಂದು ಚವಾಣ್ ತಿಳಿಸಿದ್ದಾರೆ.</p>.<p>ಕಳೆದ 23 ತಿಂಗಳಲ್ಲಿ ಛತ್ತೀಸಗಢದಲ್ಲಿ ಹಿರಿಯ ನಕ್ಸಲ್ ನಾಯಕರು ಸೇರಿದಂತೆ 2,150 ನಕ್ಸಲರು ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ಚವಾಣ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>