<p><strong>ಚೆನ್ನೈ:</strong> ಇಲ್ಲಿನ ಬಸ್ ನಿಲ್ದಾಣವೊಂದರಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ ₹27 ಕೋಟಿ ಮೌಲ್ಯದ 2.8 ಕೆ.ಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಶ್ರೀಲಂಕಾ ಪ್ರಜೆ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಾದಕವಸ್ತು ನಿಯಂತ್ರಣ ಘಟಕವು (ಎನ್ಸಿಬಿ) ತಿಳಿಸಿದೆ.</p>.<p>ಘಟನೆ ಸಂಬಂಧ ಇತರೆ ₹15 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಚೇರಿ ಹೇಳಿದೆ.</p><p>ಎನ್ಸಿಬಿ ಚೆನ್ನೈ ಘಟಕಕ್ಕೆ ದೊರೆತ ಸುಳುವಿನ ಮೇರೆಗೆ, ಇಲ್ಲಿನ ಬಸ್ ನಿಲ್ದಾಣವೊಂದರ ಬಳಿ ವಿಜಯ್ ಕುಮಾರ್ ಮತ್ತು ಮಣಿವಣ್ಣನ್ ಎಂಬ ಇಬ್ಬರು ವ್ಯಕ್ತಿಗಳನ್ನು ತಡೆದು ಪರಿಶೀಲನೆ ನಡೆಸಲಾಯಿತು. ಈ ವೇಳೆ 1.9 ಕೆ.ಜಿ ಡ್ರಗ್ಸ್ ಪತ್ತೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.</p><p>ವಿಜಯ್ ಕುಮಾರ್ ಎಂಬಾತ ಶ್ರೀಲಂಕಾ ಮೂಲದ ಪ್ರಜೆಯಾಗಿದ್ದು ಕನ್ಯಾಕುಮಾರಿಯ ನಿರಾಶ್ರಿತರ ಶಿಬಿರದಲ್ಲಿ ಆಶ್ರಯ ಪಡೆದುಕೊಂಡಿದ್ದರು. ಶ್ರೀಲಂಕಾಕ್ಕೆ ಡ್ರಗ್ಸ್ ಸಾಗಿಸುವ ಸಲುವಾಗಿ ಚೆನ್ನೈಗೆ ಬಂದಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>ಪ್ರಕರಣ ಕುರಿತು ಹೆಚ್ಚಿನ ಶೋಧ ನಡೆಸಿದ ಅಧಿಕಾರಿಗಳು ಮಣಿವಣ್ಣನ್ ಅವರ ನಿವಾಸದಲ್ಲಿ ಹೆಚ್ಚುವರಿ 900 ಗ್ರಾಂ ಡ್ರಗ್ಸ್ ಮತ್ತು ₹15 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಈ ಮಾದಕವಸ್ತು ಕಳ್ಳಸಾಗಣೆ ಜಾಲದ ಸಂಪರ್ಕಗಳನ್ನು ಪತ್ತೆ ಹಚ್ಚಲು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಇಲ್ಲಿನ ಬಸ್ ನಿಲ್ದಾಣವೊಂದರಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ ₹27 ಕೋಟಿ ಮೌಲ್ಯದ 2.8 ಕೆ.ಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಶ್ರೀಲಂಕಾ ಪ್ರಜೆ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಾದಕವಸ್ತು ನಿಯಂತ್ರಣ ಘಟಕವು (ಎನ್ಸಿಬಿ) ತಿಳಿಸಿದೆ.</p>.<p>ಘಟನೆ ಸಂಬಂಧ ಇತರೆ ₹15 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಚೇರಿ ಹೇಳಿದೆ.</p><p>ಎನ್ಸಿಬಿ ಚೆನ್ನೈ ಘಟಕಕ್ಕೆ ದೊರೆತ ಸುಳುವಿನ ಮೇರೆಗೆ, ಇಲ್ಲಿನ ಬಸ್ ನಿಲ್ದಾಣವೊಂದರ ಬಳಿ ವಿಜಯ್ ಕುಮಾರ್ ಮತ್ತು ಮಣಿವಣ್ಣನ್ ಎಂಬ ಇಬ್ಬರು ವ್ಯಕ್ತಿಗಳನ್ನು ತಡೆದು ಪರಿಶೀಲನೆ ನಡೆಸಲಾಯಿತು. ಈ ವೇಳೆ 1.9 ಕೆ.ಜಿ ಡ್ರಗ್ಸ್ ಪತ್ತೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.</p><p>ವಿಜಯ್ ಕುಮಾರ್ ಎಂಬಾತ ಶ್ರೀಲಂಕಾ ಮೂಲದ ಪ್ರಜೆಯಾಗಿದ್ದು ಕನ್ಯಾಕುಮಾರಿಯ ನಿರಾಶ್ರಿತರ ಶಿಬಿರದಲ್ಲಿ ಆಶ್ರಯ ಪಡೆದುಕೊಂಡಿದ್ದರು. ಶ್ರೀಲಂಕಾಕ್ಕೆ ಡ್ರಗ್ಸ್ ಸಾಗಿಸುವ ಸಲುವಾಗಿ ಚೆನ್ನೈಗೆ ಬಂದಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>ಪ್ರಕರಣ ಕುರಿತು ಹೆಚ್ಚಿನ ಶೋಧ ನಡೆಸಿದ ಅಧಿಕಾರಿಗಳು ಮಣಿವಣ್ಣನ್ ಅವರ ನಿವಾಸದಲ್ಲಿ ಹೆಚ್ಚುವರಿ 900 ಗ್ರಾಂ ಡ್ರಗ್ಸ್ ಮತ್ತು ₹15 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಈ ಮಾದಕವಸ್ತು ಕಳ್ಳಸಾಗಣೆ ಜಾಲದ ಸಂಪರ್ಕಗಳನ್ನು ಪತ್ತೆ ಹಚ್ಚಲು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>